Power Cut Issue: ರಾಜಧಾನಿ ಸೇರಿ ಹಳ್ಳಿಗಳಲ್ಲಿ ಮುಂದುವರಿದ ವಿದ್ಯುತ್ ಕಡಿತ, ಸರ್ಕಾರಕ್ಕೆ ಪೂರೈಕೆ ಸವಾಲು
ಬೆಂಗಳೂರು, ಡಿಸೆಂಬರ್ 10:ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾದ ಬಳಿಕ ಯಾವುದೇ ಸಮಸ್ಯೆ ಉಂಟಾಗದಂತೆ ಇಂಧನ ಬಿಕ್ಕಟ್ಟನ್ನು ಪರಿಹರಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದಾಗಿಯೂ ಬೆಂಗಳೂರಿನಂತಹ ನಗರಗಳು ಸೇರಿದಂತೆ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ ಅನಿಯಮಿತವಾಗಿ ವಿದ್ಯುತ್ ಕಡಿತಗೊಳ್ಳುತ್ತಲೇ ಇದೆ. ಇದಕ್ಕೆ ನಾಗರಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸರ್ಕಾರದ ವಿದ್ಯುತ್ ಬಿಕ್ಕಟ್ಟು ನಿವಾರಣೆ ಹೇಳಿಕೆ ಹೊರತಾಗಿಯೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಕಡಿತಗೊಳ್ಳುತ್ತಲೇ ಇದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ.

ಈ ಬೇಡಿಕೆಯಷ್ಟನ್ನು ಪೂರೈಸಲು ಕರ್ನಾಟಕ ಹೆಚ್ಚುವರಿ ಉತ್ಪಾದನೆ ಜೊತೆಗೆ ಇತರ ರಾಜ್ಯಗಳಿಂದಲೂ ವಿದ್ಯುತ್ ಸಂಗ್ರಹಿಸುತ್ತಿದೆ. ಈ ಮದ್ಯೆ ಅನಿಯಂತ್ರಿತ ವಿದ್ಯುತ್ ಕಡಿತದ ಸವಾಲು ಎದುರಿಸುತ್ತಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ದಿನಕ್ಕೆ, ವಾರಕ್ಕೆ ಮತ್ತು ತಿಂಗಳಿಗೆ ಎಷ್ಟು ಬಾರಿ ವಿದ್ಯುತ್ ಕಡಿತಗೊಳ್ಳುತ್ತದೆ ಎಂಬುದನ್ನು ದಾಖಲಿಸಲು ಆರಂಭಿಸಿದ್ದಾರೆ.
ವಿದ್ಯುತ್ ಕಡಿತದ ದಿನಗಳು ಹೆಚ್ಚಳ
ವಿವಿಧ ತುರ್ತು ಕಾರ್ಯಗಳಿಂದಾಗಿ ರಾಜಧಾನಿ ಬೆಂಗಳೂರು ಒಂದರಲ್ಲೇ ಆಗಾಗ ವಿದ್ಯುತ್ ಸ್ಥಗಿತಗೊಳ್ಳುತ್ತಲೇ ಇದೆ. ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಆಗಾಗ ಬೆಸ್ಕಾಂ ಪ್ರಕಟಣೆ ಮೂಲಕ ತಿಳಿಸುತ್ತಲೇ ಇದೆ. ಈ ಮೂಲಕ ರಾಜ್ಯ ಮಟ್ಟದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯದ ಸಂಖ್ಯೆಗಳು ಹೆಚ್ಚುತ್ತಲೇ ಇವೆ.
ಅನಿರ್ದಿಷ್ಟವಾಗಿ ಯಾವುದೇ ಸುಳಿವಿಲ್ಲದೇ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಇದು ಜನರನ್ನು ಕೆರಳಿಸಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಇಂಜಿನಿಯರ್ಗಳು ಅಸ್ತಿತ್ವದಲ್ಲಿರುವ ಮೂಲ ಇದು ಸೌಕರ್ಯಗಳ ಮೇಲೆ ಹೆಚ್ಚಿನ ಹೊರೆ ಅಂಶವನ್ನು ಸೂಚಿಸುತ್ತಿದೆ.

ಬೆಂಗಳೂರಿನಲ್ಲಿ ವಿದ್ಯುತ್ ಬಳಕೆ ಏರಿಕೆ
ಇನ್ನು ವಿದ್ಯುತ್ ಕಡಿತದ ಜೊತೆಗೆ ಬೆಂಗಳೂರಿನಲ್ಲಿ ಮಾತ್ರ ವಿದ್ಯುತ ಬಳಕೆ ಬಹುತೇಕ ದ್ವಿಗುಣಗೊಂಡಿದೆ. ಹೆಚ್ಚಿದ ಹೊರೆಯಿಂದಾಗಿ, ಪೀಕ್ ಸಮಯದಲ್ಲಿ, ಮೂಲ ಸೌಕರ್ಯವು ಹೆಚ್ಚುವರಿ ಲೋಡ್ ಅನ್ನು ತಡೆದುಕೊಳ್ಳುವಲ್ಲಿ ವಿಫಲವಾಗಿದೆ.
ಟ್ರಿಪ್ಪಿಂಗ್ ಅಥವಾ ಸಾಲುಗಳ ಸ್ಥಗಿತ ಅಥವಾ ಕಳಪೆ ವೋಲ್ಟೇಜ್ ಉಂಟಾಗುತ್ತದೆ. ಆದರೆ ಎಲ್ಲಾ ಎಂಜಿನಿಯರ್ಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಪರಿಸ್ಥಿತಿಗೆ ಸ್ಪಂದಿಸಲು ಮತ್ತು ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಪೂರೈಕೆಯನ್ನು ನಿರ್ವಹಿಸಲು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications