Get Updates
Get notified of breaking news, exclusive insights, and must-see stories!

ಅಧಿಕಾರ ಹಂಚಿಕೆ: ಪಕ್ಷ ಒತ್ತಾಯಿಸಿದ್ರೆ ಪರಮೇಶ್ವರ್‌ ಬೆಂಬಲಕ್ಕೆ ಸಿದ್ದರಾಮಯ್ಯ!

ಬೆಂಗಳೂರು, ಡಿಸೆಂಬರ್‌ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಗೊಂದಲ ತಾತ್ಕಾಲಿಕವಾಗಿ ಶಮನಗೊಂಡಿದೆ. ಇಬ್ಬರೂ ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದು, ರಾಜ್ಯ ರಾಜಕೀಯದಲ್ಲಿ ಸದ್ಯದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡುವೆ ಹಲವು ಸಚಿವರನ್ನ ಡಿ ಕೆ ಶಿವಕುಮಾರ್‌ ಭೇಟಿ ಮಾಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಗ್ಗಜಗ್ಗಾಟದ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಯಕತ್ವದ ಸಮಸ್ಯೆಯನ್ನು ಪರಿಹರಿಸಲು ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧರಾಗಲು ಸಿದ್ಧರಿದ್ದಾರೆ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Power sharing Siddaramaiah to back Parameshwara for CM job if party demands change

ಕಳೆದ ವಾರ ಮಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಸ್ತೃತ ಸಭೆಗಳನ್ನು ನಡೆಸಿದ ಸಿದ್ದರಾಮಯ್ಯ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಂವಾದ ನಡೆಸಿದರು. ಅಧಿಕಾರಕ್ಕೆ ಅಂಟಿಕೊಳ್ಳುವ ಬಯಕೆ ತನಗೆ ಇಲ್ಲ ಎಂದು ಪುನರುಚ್ಚರಿಸಿದರು. ಪಕ್ಷವು ಹೊಸ ನಾಯಕತ್ವವನ್ನು ತರಲು ನಿರ್ಧರಿಸಿದರೆ, ದಲಿತರಾದ ಗೃಹ ಸಚಿವ ಜಿ. ಪರಮೇಶ್ವರ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕತ್ವವು ಕರ್ನಾಟಕದ ಪರಿಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಕರ್ನಾಟಕದ ಕಾಂಗ್ರೆಸ್‌ನ ಹಿರಿಯ ನಾಯಕರ ಅಭಿಪ್ರಾಯವನ್ನು ಸಹ ಪಡೆದುಕೊಂಡಿದ್ದಾರೆ. ಇನ್ನೂ ಕಳೆದ ವಾರ ಹೈಕಮಾಂಡ್ ಆದೇಶದ ಮೇರೆಗೆ ನಡೆದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರೊಂದಿಗಿನ ಭೋಜನ ಕೂಟದ ಸಮಯದಲ್ಲಿಯೂ ಸಹ, ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರ ನಾಯಕತ್ವ ಬದಲಾವಣೆಯ ಸೂಚನೆಗಳನ್ನು ಅನುಸರಿಸಲು ಸಿದ್ಧ ಎಂದು ಒಕ್ಕಲಿಗ ನಾಯಕನಿಗೆ ಹೇಳಿದ್ದರು ಎಂದು ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ, ಸಿದ್ದರಾಮಯ್ಯ ಅವರು ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮತ್ತು ಮಾಜಿ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ತಮ್ಮ ಆಪ್ತರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳಲ್ಲಿ, 2013 ರಲ್ಲಿ ಪಕ್ಷವು ಚುನಾವಣೆಯಲ್ಲಿ ಗೆದ್ದಾಗ ಮತ್ತು ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರನ್ನು ಇದೀಗ ಸಿದ್ದರಾಮಯ್ಯ ಅವರು ಬೆಂಬಲಿಸಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆಯೂ ಸಹ, ದಲಿತ ಸಮುದಾಯದ ಯಾರಿಗಾದರೂ ಅಧಿಕಾರ ಹಸ್ತಾಂತರಿಸಲು ತಾವು ಬಯಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎನ್ನಲಾಗಿತ್ತು. ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಇತರ ಹಿರಿಯ ನಾಯಕರ ಬೆಂಬಲ ಅತ್ಯಗತ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂದೇಶದ ಪರಿಣಾಮವಾಗಿ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ನಿಷ್ಠಾವಂತ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಎರಡು ಬಾರಿ ಭೇಟಿಯಾದರು. ನಂತರ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಹಿರಿಯ ಲಿಂಗಾಯತ ನಾಯಕ, ಭಾರೀ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಮುಖಾಮುಖಿ ಸಭೆ ನಡೆಸಿದ್ದು, ಸದ್ಯ ಅಧಿಕಾರ ಹಂಚಿಕೆಯ ಚರ್ಚೆ ಹೈಕಮಾಂಡ್‌ ಅಂಗಳದಲ್ಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+