Get Updates
Get notified of breaking news, exclusive insights, and must-see stories!

BREAKING: ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್!

ಬೆಂಗಳೂರು, ಡಿ. 03: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ‌ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಉತ್ತರ ಪದೇಶದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮಾಡಲಾಗಿದೆ. ಹೀಗಾಗಿ ಕಾನೂನಿನ ರೂಪರೇಷೆ, ಪರ ವಿರೋಧ ಅಂಶಗಳು, ಕಾನೂನು ಅನುಷ್ಟಾನ ಸೇರಿದಂತೆ ಹಲವು ವಿಚಾರಗಳ ಕುರಿತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಲಹೆಯನ್ನು ಸಚಿವ ಪ್ರಭು ಚೌಹಾಣ್ ಅವರು ಪಡೆದಿದ್ದಾರೆ ಎನ್ನಲಾಗಿದೆ. ಜೊತೆಗೆ ಸಂಪುಟ ಪುನಾರಚನೆ ಸಂದರ್ಭದಲ್ಲಿ ತಮ್ಮನ್ನು ಸಂಪುಟದಿಂದ ಕೈ ಬಿಡಬಹುದು ಎಂಬ ಆತಂಕ ಕೂಡ ಸಚಿವ ಪ್ರಭು ಚೌಹಾಣ್ ಅವರಿಗೆ ಇದೆ ಎನ್ನಲಾಗಿದೆ. ಹೀಗಾಗಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮೂಲಕ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದು ಕೂಡ ಪ್ರಭು ಚೌಹಾಣ್ ಪ್ರಯತ್ನ ಎನ್ನಲಾಗಿದೆ.

Prabhu Chauhan Meets Up Cm Yogi Adityanath Regarding Of Cow Slaughter Ban Act

Recommended Video

      Covid-19 Vaccine ಪಡೆಯಲು ಇಂಗ್ಲೆಂಡಿನತ್ತ ಭಾರತೀಯರು! | Oneindia Kannada

      ಗೋಹತ್ಯೆ ನಿಷೇಧ ಕಾಯಿದೆ ಪರ ಇರುವವರಿಂದ ಬೆಂಬಲವೂ ಸಿಗುತ್ತದೆ. ಜೊತೆಗೆ ಇದು ರಾಜಕೀಯವಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಚರ್ಚೆಗಳು ನಡೆದಿವೆ. ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಬಿಬಿಎಂಪಿ ಚುನಾವಣೆ ಕೂಡ ಘೋಷಣೆಯಾಗುವ ಸಾಧ್ಯತೆಗಳಿವೆ. ಗೋಹತ್ಯೆ ನಿಷೇಧ ಕಾನೂನಿನಿಂದ ಬಿಜೆಪಿಗೆ ಹಿಂದೂ ಮತಗಳ ಕ್ರೂಢೀಕರಣ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ ಎನ್ನಲಾಗಿದೆ. ಒಟ್ಟಾರೆ ಸಚಿವ ಪ್ರಭು ಚೌಹಾಣ್ ಅವರು ಯುಪಿ ಸಿಎಂ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+