Pradeep eshwar vs Sudhakar: ನನ್ನ ವಿರುದ್ಧ ಸೇಡಿಗೆ.. ಡಾ.ಕೆ ಸುಧಾಕರ್ - ಪ್ರದೀಪ್ ಈಶ್ವರ್ ಜಟಾಪಟಿ!
ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಡಾ.ಕೆ ಸುಧಾಕರ್ ಹಾಗೂ ಪ್ರದೀಪ್ ಈಶ್ವರ್ ನಡುವೆ ವಾಕ್ಸಮರ, ವಾಗ್ದಾಳಿಗಳು ಮುಂದುವರಿಯುತ್ತಲ್ಲೇ ಇವೆ. ಸುಧಾಕರ್ ಗೆದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಈಶ್ವರ್ ಅವರು ಸವಾಲು ಹಾಕಿದ್ದರು. ಆದರೆ, ಸುಧಾಕರ್ ಗೆಲ್ಲುತ್ತಿದ್ದಂತೆಯೇ ಅವರು ನನ್ನ ಸವಾಲು ಸ್ವೀಕರಿಸಿರಲಿಲ್ಲ. ಸ್ವೀಕರಿಸಿದ್ದರೆ ಅಲ್ವಾ ಆ ಪ್ರಶ್ನೆ ಎಂದಿದ್ದರು. ಇನ್ನು ಸುಧಾಕರ್ ಸಂಸದರಾಗಿ ಆಯ್ಕೆಯಾದ ಮೇಲೆ ಇಬ್ಬರೂ ನಾಯಕರ ನಡುವೆ ಜಟಾಪಟಿ ಜೋರಾಗಿದೆ.
ಸುಧಾಕರ್ ಹಾಗೂ ಪ್ರದೀಪ್ ಈಶ್ವರ್ ಅವರ ನಡುವೆ ವಾಕ್ಸಮರ ಮುಂದಿನ ಹಂತಕ್ಕೆ ಹೋಗಿದೆ. ಕ್ಷೇತ್ರದ ಶಾಸಕರು ನನ್ನ ಕೆಲಸಗಳಿಗ ಅಡ್ಡಿಯಾಗುತ್ತಿದ್ದಾರೆ ಎಂದು ಸಂಸದ ಸುಧಾಕರ್ ಅವರು ದೂರಿದ್ದಾರೆ. ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ದಾಸಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ಗಳನ್ನ ಸ್ಥಳೀಯ ಶಾಸಕರ ಸೂಚನೆ ಮೇರೆಗೆ ಕಾರ್ಯಕ್ರಮಕ್ಕೆ ಮುಂಚೆಯೇ ಏಕಾಏಕಿ ತೆರವುಗೊಳಿಸಿದ್ದಾರೆ. ಅದು ಮಾತ್ರವಲ್ಲ ಬ್ಯಾನರ್ಗಳನ್ನು ಹರಿದು ಹಾಕಿ, ಕನಕದಾಸರಿಗೆ ಅವಮಾನ ಮಾಡಿರುವ ಘಟನೆ ಅತ್ಯಂತ ಖೇದಕರ ಎಂದು ಸುಧಾಕರ್ ಅವರು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರೇ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಸಿದ್ದಾರೆ ಎಂದು ಸುಧಾಕರ್ ಅವರು ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಡಿಸಿ, ಪೌರಾಯುಕ್ತರು, ಸಬ್ ಇನ್ಸ್ಪೆಕ್ಟರ್ ಸೇರಿ ಈ ದೌರ್ಜನ್ಯ ಎಸಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕುರುಬ ಸಮಾಜದ ಜನಾಕ್ರೋಶಕ್ಕೆ ಕಾರಣವಾಗಿದೆ ಎಂದೂ ಅವರು ಹೇಳಿದ್ದು.
ಇದೇನಾ ಕಾಂಗ್ರೆಸ್ ಪಕ್ಷ ಕನಕದಾಸರಿಗೆ ಕೊಡುವ ಗೌರವವೇ, ಇದೇನಾ ಕಾಂಗ್ರೆಸ್ ಶಾಸಕರು ಹಿಂದುಳಿದ ಸಮುದಾಯಗಳಿಗೆ ನೀಡುವ ಮನ್ನಣೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಶಾಸಕರೇ, ನನ್ನ ಮೇಲಿನ ಕೋಪಕ್ಕೆ, ನನ್ನ ವಿರುದ್ಧ ಸೇಡಿಗಾಗಿ ಕನಕದಾಸರಿಗೆ ಯಾಕೆ ಅಪಮಾನ ಮಾಡುತ್ತೀರಿ ? ಕುರುಬ ಸಮಾಜದ ಭಾವನೆಗಳಿಗೆ ಯಾಕೆ ಅಗೌರವ ತೋರುತ್ತೀರಿ ಎಂದು ಕೇಳಿದ್ದಾರೆ.
ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ ಶಾಸಕರ ಸೂಚನೆ ಮೇರೆಗೆ ಕಾರ್ಯಕ್ರಮಕ್ಕೆ ಮುಂಚೆಯೇ ಏಕಾಏಕಿ ತೆರವುಗೊಳಿಸಿ, ಹರಿದು ಹಾಕಿ, ಕನಕದಾಸರಿಗೆ ಅವಮಾನ ಮಾಡಿರುವ ಘಟನೆ ಅತ್ಯಂತ ಖೇದಕರ.
— Dr Sudhakar K (@DrSudhakar_) November 18, 2024
ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಡಿಸಿ, ಪೌರಾಯುಕ್ತರು, ಸಬ್… pic.twitter.com/RAqFF8C8Jx

ಕನಕ ಜಯಂತಿಯ ಬ್ಯಾನರ್ ತೆರವುಗೊಳಿಸಿ, ಹರಿದು ಹಾಕಿರುವ ಈ ದುಷ್ಕೃತ್ಯವನ್ನ ಕುರುಬ ಸಮಾಜ ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಅಧಿಕಾರಿಗಳಿಗೆ ತಲೆಬಿಸಿ: ಶಾಸಕ ಹಾಗೂ ಸಂಸದರ ನಡುವಿನ ಜಟಾಪಟಿ ಅಧಿಕಾರಿಗಳಲ್ಲಿ ಹೊಸ ತಲೆನೋವು ಸೃಷ್ಟಿ ಮಾಡಿದೆ. ಚಿಕ್ಕಬಳ್ಳಾಪುದಲ್ಲಿ ಇಬ್ಬರು ನಾಯಕರನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಲು ಅಥವಾ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಸಭೆ, ಸಮಾರಂಭಗಳನ್ನು ಹೇಗೆ ನಿರ್ವಹಿಸಬೇಕು ಎನ್ನುವುದು ತಿಳಿಯದೆ ಇಲ್ಲಿನ ಅಧಿಕಾರಿಗಳು ಪರದಾಡುತ್ತಿದ್ದಾರಂತೆ. ಈ ಇಬ್ಬರು ನಾಯಕರ ನಡುವೆ ಇರುವ ಮುನಿಸು ಹಾಗೂ ಗುದ್ದಾಟ ನೋಡಿ ಅಧಿಕಾರಿಗಳು ಶಾಕ್ ಆಗಿದ್ದಾರೆ.
ಕೋವಿಡ್ ಹಗರಣದಲ್ಲಿ ಸಂಕಷ್ಟ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕೋವಿಡ್ ಕಾಲದಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಸಮಿತಿಯನ್ನು ರಚಿಸಿದ್ದು, ಈ ವಿಷಯದಲ್ಲಿ ಡಾ.ಕೆ ಸುಧಾಕರ್ ಅವರು ಸಹ ಪ್ರತಿಕ್ರಿಯಿಸಿದ್ದರು. ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ತಪ್ಪು ಸಂದೇಶ ಕೊಡುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ನಾಟಕವಾಡುತ್ತಿದೆ ಎಂದು ಸುಧಾಕರ್ ಅವರು ದೂರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications