Prajwal Revanna Case: ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಪರಮೇಶ್ವರ
ಬೆಂಗಳೂರು, ಮೇ 03: ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯೊಬ್ಬರು ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಸ್ಟೇಟ್ಮೆಂಟ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ 164 ಅಡಿ ಹೇಳಿಕೆ ಕೊಡಿಸಲಾಗಿದೆ ಎಂದರು.

ಪ್ರಜ್ವಲ್ ರೇವಣ್ಣಗೆ 41A ಅಡಿಯಲ್ಲಿ ನೋಟಿಸ್ ಕೂಡಲಾಗಿದೆ. ಪ್ರಜ್ವಲ್ ಪರ ವಕೀಲ ಕಾಲಾವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣಗೂ ಕೂಡ 41A ಅಡಿ ನೊಟೀಸ್ ನೀಡಲಾಗಿದೆ. ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೊಟೀಸ್ ನೀಡಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಕುರಿತು ಲುಕ್ ಔಟ್ ನೊಡೀಸ್ ಹೊರಡಿಸಲಾಗಿದೆ. ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಫೋಟೋ ಸಮೇತ ನೊಟೀಸ್ ಕಳುಹಿಸಲಾಗಿದೆ. ನಿಯಮಾನುಸಾರದ ಪ್ರಕಾರವೇ ಲುಕ್ ಔಟ್ ನೊಟೀಸ್ ನೀಡಿದ್ದೇವೆ ಎಂದು ಹೇಳಿದರು.
ರೇವಣ್ಣ ಅವರ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದು ಗೊತ್ತಿಲ್ಲ. ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಜರ್ಮನಿಯಿಂದಕರೆತರಲು ಕೇಂದ್ರದ ನೆರವು ಬೇಕು. 2ನೇ ನೋಟಿಸ್ಗೂ ಸ್ಪಂದಿಸದಿದ್ದರಡ ಮುಂದಿನ ತೀರ್ಮಾನ ಏನು ಎಂಬುದನ್ನು ಎಸ್ಐಟಿಯವರು ಕೈಗೊಳ್ಳುತ್ತಾರೆ ಎಂದು ಹೇಳಿದರು.
ರಾಜಕೀಯ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ನನಗೆ ಒಂದಷ್ಟು ಜವಾಬ್ಧಾರಿಗಳಿವೆ. ಹಾಗಾಗಿ, ರಾಜಕೀಯ ಪ್ರತಿಕ್ರಿಯೆ ನೀಡುವುದಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವರು ಯಾವ ಅಧಾರದ ಮೇಲೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಇದಕ್ಕೆಲ್ಲ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಉತ್ತರಿಸುತ್ತಾರೆ ಎಂದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications