ಪ್ರಜ್ವಲ್ ರೇವಣ್ಣ: ಜೆಡಿಎಸ್ ಸಭೆ: ಎಚ್ಡಿ ರೇವಣ್ಣ ವಿರುದ್ಧವು ಸೂಕ್ತ ಕ್ರಮ ಸಾಧ್ಯತೆ
ಹುಬ್ಬಳ್ಳಿ, ಏಪ್ರಿಲ್ 30: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಯ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಇಂದು ಮಂಗಳವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಈಗಾಗಲೇ ಸಂಸದರನ್ನು ಅಮಾನತು ಮಾಡಿ ಆದೇಶಿಸಲಾಗಿದ್ದು, ಇದೀಗ ಎಚ್ಡಿ ರೇವಣ್ಣ ಮೇಲೂ ಕ್ರಮವಹಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ಡ್ರೈವ್ ವಿಚಾರ ಹೊರ ಬರುತ್ತಿದ್ದಂತೆ ವಿದೇಶಕ್ಕೆ ತೆರಳಿರುವ ಮಗನ ಪರ ತಂದೆ ಎಚ್ಡಿ ರೇವಣ್ಣ ಮಾತನಾಡಿದ್ದರು. ಇದು ನಾಲ್ಕೈದು ವರ್ಷದ ಹಿಂದಿನ ಕೇಸು, ರಾಜಕೀಯ ಪ್ರೇರಿತ, ಪ್ರಜ್ವಲ್ ವಿದೇಶಕ್ಕೆ ತೆರಳುವುದು ಮೊದಲೇ ನಿಶ್ಚಯವಾಗಿತ್ತು ಎಂದೆಲ್ಲ ಹೇಳಿದ್ದರು. ಸದ್ಯ ಈ ಪ್ರಕರಣದಿಂದ ಜೆಡಿಎಸ್ಗೆ ಹಾಗೂ ಮೈತ್ರಿಗೆ ಮುಜುಗರ ತಂದಿರುವುದು ಸುಳ್ಳಲ್ಲ.

ಈ ಮುಜುಗರ ತಪ್ಪಿಸಲು ಹಾಗೂ ಚುನಾವಣೆ ಹೊತ್ತಲ್ಲಿ ತಪ್ಪಿತಸ್ಥರ ವಿರುದ್ಧ ಜೆಡಿಎಸ್ ಪಕ್ಷ ಸೂಕ್ತ ಕ್ರಮ ಕೈಗೊಂಡಿದೆ ಎಂಬ ಸಂದೇಶ ಸಾರಲು ಕೆಲವು ಮಹತ್ವದ ನೀರ್ಣಯ ಕೈಗೊಳ್ಳಲಿದೆ. ಈ ಸಂಬಂಧ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ, ಹಿರಿಯ ನಾಯಕ ಜಿಟಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರಮುಖ ಚರ್ಚೆಗಳು ನಡೆದಿವೆ.
ಪ್ರಜ್ವಲ್ ರೇವಣ್ಣರನ್ನು ಉಚ್ಛಾಟಿಸಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಮಹತ್ವದ ಆದೇಶವನ್ನು ಸೋಮವಾರ ಹೊರಡಿಸಿದ್ದರು. ಇದೀಗ ಪ್ರಕರಣದಿಂದಾ ಡ್ಯಾಮೆಜ್ ಕಂಟ್ರೋಲ್ ಮಾಡಲು ಹಾಗೂ ಎಚ್ಡಿ ರೇವಣ್ಣ ವಿರುದ್ಧ ಕೇಳಿ ಬಂದ ಆರೋಪ ದೂರುಗಳ ಕುರಿತು ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ.
ಸಭೆ ಬಳಿಕ ಎಚ್ಡಿ ರೇವಣ್ಣರನ್ನು ಪಕ್ಷದಿಂದ ಉಚ್ಛಾಟಿಸಬಹುದು. ಈ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಲಕ್ಷಣಗಳು ಇವೆ. ಅಲ್ಲದೇ ರಾಜ್ಯದಲ್ಲಿ ಇನ್ನೂ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಇದರ ಮೇಲೆ ಪರಿಣಾಮ ಬೀರದಂತೆ ಇಂದಿನ ಸಭೆಯಲ್ಲಿ ನಿರ್ಧಾರಗಳು ಹೊರ ಬೀಳುವ ಸಾಧ್ಯತೆ ಇದೆ. ಅದರಲ್ಲೂ ಎಚ್ಡಿ ರೇವಣ್ಣ ಮೇಲೆ ಸೂಕ್ತ ಕ್ರಮ ಜರಿಸುವ ನಿರೀಕ್ಷೆಗಳು ಇವೆ ಎಂದು ತಿಳಿದು ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications