Prajwal Revanna case: 'ನಾನು ನಂಬರ್ ಬ್ಲಾಕ್ ಮಾಡಿದರೆ ಇನ್ನೊಂದು ನಂಬರ್ನಿಂದ ಕರೆ ಮಾಡುತ್ತಿದ್ದ ಪ್ರಜ್ವಲ್ ರೇವಣ್ಣ'
ಹಾಸನ ಜೂನ್ 28: ಅತ್ಯಾಚಾರ ಆರೋಪದ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಮುಂದುವರೆದಿದ್ದು ಬಗೆದಷ್ಟು ವಿಚಾರಗಳು ಬಯಲಾಗುತ್ತಿವೆ.
ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಒಂದಲ್ಲಾ... ಎರಡಲ್ಲಾ... ಒರೋಬ್ಬರಿ 15 ಸಿಮ್ ಕಾರ್ಡ್ ಇತ್ತೆಂದು ಹೇಳಲಾಗಿದೆ. ಒಂದು ನಂಬರ್ ಬ್ಲಾಕ್ ಮಾಡಿದರೆ ಮತ್ತೊಂದು ನಂಬರ್ನಿಂದ ಪ್ರಜ್ವಲ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದರು ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ವಿವರಿಸಿದ್ದಾರೆ.

ಒಂದು ನಂಬರ್ ಬ್ಲಾಕ್ ಮಾಡಿದರೆ ಇನ್ನೊಂದು ನಂಬರ್ನಿಂದ ಕರೆ ಮಾಡಿ ಬೆತ್ತಲಾಗುವಂತೆ ಪ್ರಜ್ವಲ್ ರೇವಣ್ಣ ಅವರು ಹಿಂಸೆ ನೀಡುತ್ತಿದ್ದರಂತೆ. ಮನೆ ಕೆಲಸಕ್ಕೆ ಬರುವ ಹೆಣ್ಣು ಮಕ್ಕಳೇ ಆತನ ಟಾರ್ಗೇಟ್ ಆಗಿದ್ದರು. ಮಕ್ಕಳಿಗೆ ಕೆಲಸ ಕೊಡಿಸಿ ಎಂದು ಕೇಳಿಕೊಂಡು ಬರುತ್ತಿದ್ದವರನ್ನು ಗುರಿಯಾಗಿಸಿಕೊಳ್ಳುತ್ತಿದ್ದರಂತೆ ಪ್ರಜ್ವಲ್ ರೇವಣ್ಣ. ವಿನಾಕಾರಣ ಅವರಿಗೆ ಪದೇ ಪದೇ ಕರೆ ಮಾಡಿ ಮಾತನಾಡುತ್ತಿದ್ದರಂತೆ.
ಅವರೊಂದಿಗೆ ಸಲುಗೆಯಿಂದ ಮಾತನಾಡಿ ನಂತರ ಅವರಿಗೆ ಬೆತ್ತಲಾಗಲು ಬೆದರಿಕೆ ಹಾಕುತ್ತಿದ್ದರಂತೆ. ಆತನ ಬೆದರಿಕೆಗೆ ಹೆದರಿ ನಗ್ನರಾದರೆ ಅವರ ಫೋಟೋಗಳನ್ನ ಇಟ್ಟುಕೊಂಡು ಪದೇ ಪದೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಪ್ರಜ್ವಲ್ ಬೆದರಿಕೆಗೆ ಹೆದರಿ ತಾನೂ ಕೂಡ ನಗ್ನರಾಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಪುತ್ರ ಎಚ್ಡಿ ರೇವಣ್ಣರ ಮಗ ಪ್ರಜ್ವಲ್ ರೇವಣ್ಣ ಅವರ ಮೇಲೆ ಹಲವಾರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರನ್ನೂ ಬಂಧಿಸಲಾಗಿತ್ತು.

ಇನ್ನೂ ಎಚ್ಡಿ ರೇವಣ್ಣ ಅವರ ಮತ್ತೋರ್ವ ಪುತ್ರ ಸೂರಜ್ ರೇವಣ್ಣ ಅವರನ್ನೂ ಅಸಹಜ ಲೈಂಗಿಕ ಕಿರುಕುಳದ ಆರೋಪದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ಹೀಗೆ ಇಡೀ ಕುಟುಂಬವೇ ಆರೋಪಗಳ ಕತ್ತಿಯನ್ನು ತಲೆಯ ಮೇಲೆ ಹೊತ್ತು ಅಲೆದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಎಚ್ಡಿ ರೇವಣ್ಣ ಕುಟುಂಬಸ್ಥರ ಪ್ರಕರಣಗಳು ಜೆಡಿಎಸ್ ಪಕ್ಷಕ್ಕೂ ಕಪ್ಪು ಚುಕ್ಕೆಯಂತಾಗಿವೆ. ಇದರಿಂದ ಪಕ್ಷ ಅವರಿಂದ ಅಂತರ ಕಾಯ್ದುಕೊಂಡಿದೆ.
ಹೊರಬರಲು ಪ್ರಜ್ವಲ್ ಪ್ರಯತ್ನ ವಿಫಲ
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬುಧವಾರ ವಜಾಗೊಳಿಸಿದೆ. ಏಪ್ರಿಲ್ 28 ರಂದು ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರದಲ್ಲಿ ಮೊದಲು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಅತ್ಯಾಚಾರ ಎಸಗಿದ ಪ್ರಕರಣವೂ ದಾಖಲಾಗಿದ್ದವು. ಒಂದು ತಿಂಗಳಿಗೂ ಅಧಿಕ ಕಾಲ ವಿದೇಶದಲ್ಲಿಯೇ ಇದ್ದ ಪ್ರಜ್ವಲ್ ರೇವಣ್ಣ ಆನಂತರ ವಿಶೇಷ ತನಿಖಾ ತಂಡದ ಎದುರು ಶರಣಾಗಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications