ಪ್ರಜ್ವಲ್ ರೇವಣ್ಣ ವಿಚಾರಣೆ: ಸಹಾಯಕ್ಕಾಗಿ ಎಸ್ಐಟಿಯಿಂದ ಆಪಲ್ ಮೊರೆ
ಬೆಂಗಳೂರು, ಜೂನ್ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಆದರೆ ಕೆಲವು ತಾಂತ್ರಿಕ ಅಂಶಗಳ ತನಿಖೆಗೆ ಹಿನ್ನಡೆ ಆಗುತ್ತಿದ್ದು, ಇದಕ್ಕಾಗಿ ಎಸ್ಐಟಿ ಸಿಐಡಿ ಪೊಲೀಸರ ಮೂಲಕ ಆಪಲ್ ಸಂಸ್ಥೆ ಮೊರೆ ಹೋಗಿದೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿ ಅದರ ವಿಡಿಯೋ ಮಾಡಿಕೊಂಡಿದ್ದಾರೆ ಎಂಬುದು ಪ್ರಮುಖ ಆರೋಪ. ಆದರೆ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾದ ಫೋನ್ ಕಳೆದು ಹೋಗಿದೆ.

ಮೇ 31ರಂದು ಪ್ರಜ್ವಲ್ ರೇವಣ್ಣ ಬಂಧಿಸಿದ ಎಸ್ಐಟಿ ಅಧಿಕಾರಿಗಳು ಅವರ ಫೋನ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಫೋನ್ ಆಪಲ್ ಕಂಪನಿಗೆ ಸೇರಿದ್ದು, ಆದರೆ ಇದು ಅವರ ಹೊಸ ಫೋನ್. ಹಳೆಯ ಪೋನ್ ಕಳೆದು ಹೋಗಿದೆ ಎಂದು ಅವರು ಹೇಳುತ್ತಿದ್ದಾರೆ.
ಕಳೆದು ಹೋಗಿರುವ ಫೋನ್: ಎಸ್ಐಟಿ ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಹೊಸ ಪೋನ್ನಲ್ಲಿ 2024ರ ಲೋಕಸಭೆ ಚುನಾವಣೆಯ ಪ್ರಚಾರದ ಚಿತ್ರ, ವಿಡಿಯೋಗಳು ಸಿಕ್ಕಿವೆ. ಆದರೆ ಲೈಂಗಿಕ ದೌರ್ಜನ್ಯ ನಡೆಸಿದ ಯಾವುದೇ ವಿಡಿಯೋಗಳು ಪತ್ತೆಯಾಗಿಲ್ಲ.
ಹಳೆಯ ಫೋನ್ ಸಿಗುವುದು ಎಸ್ಐಟಿ ತನಿಖೆಗೆ ಬಹಳ ಮುಖ್ಯವಾಗಿದೆ. ಆದ್ದರಿಂದ ಕಳುವಾಗಿರುವ ಹಳೆಯ ಫೋನ್ ಹುಡುಕಾಟಕ್ಕೆ ಎಸ್ಐಟಿ ಸಿಐಡಿ ತಾಂತ್ರಿಕ ತಂಡದ ಮೂಲಕ ಆಪಲ್ ಸಂಸ್ಥೆ ಮೊರೆ ಹೋಗಿದೆ. ಫೋನ್ ಬಗ್ಗೆ ಆಪಲ್ ಸಂಸ್ಥೆ ಮಾಹಿತಿ ಹಂಚಿಕೊಂಡರೆ ತನಿಖೆ ಚುರುಕಾಗಲಿದೆ.
ಕೋರ್ಟ್ ಪ್ರಜ್ವಲ್ ರೇವಣ್ಣರನ್ನು ಜೂನ್ 6ರ ತನಕ ಎಸ್ಐಟಿ ವಶಕ್ಕೆ ನೀಡಿದೆ. ಎಸ್ಐಟಿ ಇನ್ನೂ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಹೊಳೆನರಸೀಪುರ ನಿವಾಸಕ್ಕೆ ಅವರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸುವುದು ಬಾಕಿ ಇದೆ.
ಮತ್ತೊಂದು ಕಡೆ ಎಸ್ಐಟಿ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಹೇಳುತ್ತಿದೆ. ಇದರ ನಡುವೆಯೇ ಅವರ ಹಳೆಯ ಫೋನ್ ಪತ್ತೆಯಾಗದಿರುವುದು ಎಸ್ಐಟಿ ತನಿಖೆಗೆ ಹಿನ್ನಡೆ ಉಂಟು ಮಾಡಿದೆ. ತಾಂತ್ರಿಕ ಅಂಶಗಳ ತನಿಖೆಗೆ ಎಸ್ಐಟಿಗೆ ಸಹಕಾರ ಅತ್ಯಗತ್ಯವಾಗಿದೆ.
ಪ್ರಜ್ವಲ್ ರೇವಣ್ಣ ತಮ್ಮ ಹಳೆಯ ಫೋನ್ ತುಂಬಾ ಹಿಂದೆಯೇ ಕಳೆದು ಹೋಗಿದೆ. ಅದರ ಬಗ್ಗೆ ದೂರು ಸಹ ದಾಖಲಿಸಲಾಗಿದೆ. ಆದರೆ ಇನ್ನೂ ಫೋನ್ ಪತ್ತೆಯಾಗಿಲ್ಲ ಎಂದು ಎಸ್ಐಟಿ ವಿಚಾರಣೆ ವೇಳೆ ಹೇಳಿದ್ದಾರೆ. ಫೋನ್ ಸಿಕ್ಕಿದರೆ ವಿಡಿಯೋಗಳನ್ನು ಅವರು ಮಾಡಿಕೊಂಡ ಉದ್ದೇಶಗಳೇನು? ಎಂದು ತನಿಖೆ ನಡೆಸಲು ಎಸ್ಐಟಿಗೆ ಸಹಕಾರಿಯಾಗಲಿದೆ.
ಪ್ರಜ್ವಲ್ ರೇವಣ್ಣ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲು ಎಸ್ಐಟಿ ಸಿದ್ಧತೆ ನಡೆಸಿದೆ. ಆದರೆ ಜೂನ್ 4ರ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಹಾಸನ ಕ್ಷೇತ್ರಕ್ಕೆ ಈ ಬಾರಿಯ ಚುನಾವಣೆಗೂ ಪ್ರಜ್ವಲ್ ರೇವಣ್ಣ ಅಭ್ಯರ್ಥಿ.
ಚುನಾವಣೆಯಲ್ಲಿ ಅವರು ಜಯಗಳಿಸಿದರೆ ಅವರನ್ನು ನೋಡಲು ಮಹಜರು ವೇಳೆ ಸಾಕಷ್ಟು ಜನರು, ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಆದ್ದರಿಂದ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸ್ಥಳ ಮಹಜರು ನಡೆಸುವ ನಿರೀಕ್ಷೆ ಇದೆ.
ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಜೂನ್ 6ಕ್ಕೆ ಅಂತ್ಯಗೊಳ್ಳಲಿದೆ. ಬಳಿಕ ಎಸ್ಐಟಿ ಅವರನ್ನು ಪುನಃ ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆಯುವ ನಿರೀಕ್ಷೆ ಇದೆ. ಇನ್ನೂ ಭವಾನಿ ರೇವಣ್ಣಗಾಗಿ ಎಸ್ಐಟಿ ಅಧಿಕಾರಿಗಳು ಹುಡುಕಾಟವನ್ನು ಮುಂದುವರೆಸಿದ್ದಾರೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications