ಸಚಿವ ಸ್ಥಾನ ತೊರೆಯುತ್ತಾರಂತೆ ಪ್ರಕಾಶ್ ಹುಕ್ಕೇರಿ
ಬೆಂಗಳೂರು, ಮೇ 19 : ಪಕ್ಷದ ಒತ್ತಾಯಕ್ಕೆ ಕಟ್ಟುಬಿದ್ದು ಚಿಕ್ಕೋಡಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸಚಿವ ಪ್ರಕಾಶ್ ಹುಕ್ಕೇರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಹುಕ್ಕೇರಿ ಅವರ ಮುಂದಿನ ತೀರ್ಮಾನವೇನು? ಎಂಬ ಪ್ರಶ್ನೆಗೆ ಉತ್ತರ ದೊರಕಿದೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗಳಿಸಲಿ ಎಂಬ ಕಾರಣಕ್ಕಾಗಿ ಮುಜರಾಯಿ ಮತ್ತು ಸಕ್ಕರೆ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. 3,003 ಮತಗಳ ಅಂತರದಿಂದ ಅವರು ಜಯಗಳಿಸಿದ್ದರು. [ಕರ್ನಾಟಕದಲ್ಲಿ ಸೋತು ಗೆದ್ದವರು]

ಆದರೆ, ತಾವು ರಾಜ್ಯದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸುತ್ತೇನೆ. ದೆಹಲಿಗೆ ಹೋಗುವುದಿಲ್ಲ ಎಂದು ಪ್ರಕಾಶ್ ಹುಕ್ಕೇರಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಈ ಕುರಿತು ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ರಾಜ್ಯನಾಯಕರು ಹೇಳಿದ್ದರು.
ಸೋಮವಾರ ವಿಧಾನಸೌಧದಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ, ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಸಂಸದನಾಗಿ ಮುಂದುವರೆಯುತ್ತೇನೆ ಎಂದು ಹೇಳಿದರು. ಆದ್ದರಿಂದ ಹುಕ್ಕೇರಿ ಅವರು ಚಿಕ್ಕೋಡಿ-ಸದಲಗಾ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದು, ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ.
ಚಿಕ್ಕೋಡಿ ಕ್ಷೇತ್ರದ ಫಲಿತಾಂಶ : ಲೋಕಸಭೆ ಚುನಾವಣೆಯಲ್ಲಿ 4,74,373 ಮತಗಳನ್ನು ಪಡೆದು ಪ್ರಕಾಶ್ ಹುಕ್ಕೇರಿ ಜಯಗಳಿಸಿದ್ದರು. ಹುಕ್ಕೇರಿ ಅವರಿಗೆ ಪ್ರಬಲ ಪೈಪೋಟಿ ನೀಡಿದ ಬಿಜೆಪಿಯ ರಮೇಶ್ ಕತ್ತಿ ಅವರು 4,71,370 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಎಸ್ ಸಿಪಿಯ ಪ್ರತಾಪರಾವ್ ಪಾಟೀಲ 42,735 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications