'ಕಾಲಾ' ಬಿಡುಗಡೆಗೆ ಬಿಡಿ: ಪ್ರಕಾಶ್ ರೈ ಮತ್ತೆ ಸರಣಿ ಟ್ವೀಟ್
Recommended Video

ಬೆಂಗಳೂರು, ಜೂನ್ 5: ರಜನಿಕಾಂತ್ ಅಭಿನಯದ 'ಕಾಲಾ' ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದಕ್ಕೆ ವಿಧಿಸಿರುವ ನಿರ್ಬಂಧವನ್ನು ಪುನಃ ಪ್ರಶ್ನಿಸಿರುವ ನಟ ಪ್ರಕಾಶ್ ರೈ, ಸಿನಿಮಾ ಪರ ಬ್ಯಾಟಿಂಗ್ ಮುಂದುವರಿಸಿದ್ದಾರೆ.
'ಕಾಲಾ' ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ನಿಷೇಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರ ತೆಗೆದುಕೊಂಡಿದೆ. ಇದಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಆದರೆ, 'ಕಾಲಾ' ಮೇಲಿನ ನಿರ್ಬಂಧವನ್ನು ಪ್ರಶ್ನಿಸಿರುವ ಪ್ರಕಾಶ್ ರೈ, ಸಿನಿಮಾಕ್ಕೂ ರಾಜಕೀಯಕ್ಕೂ ತಳುಕು ಹಾಕುವುದು ಬೇಡ ಎಂದಿದ್ದಾರೆ. ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸುವುದು ಕಾನೂನಿಗೆ ವಿರುದ್ಧ.
ಸಿನಿಮಾ ನೋಡುವುದು ಬಿಡುವುದು ಜನರ ಹಕ್ಕು. ಜನರು ಸಿನಿಮಾ ನೋಡಬೇಕೇ ಬೇಡವೇ ಎಂದು ಕೆಲವೇ ಮಂದಿ ನಿರ್ಧರಿಸುವುದು ಸರಿಯಲ್ಲ. ಸಿನಿಮಾ ನಿರ್ಬಂಧಿಸಿರುವುದರಿಂದ ಕಾವೇರಿ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರಕಾಶ್ ರೈ ಸುದೀರ್ಘ ಬರಹ ಪ್ರಕಟಿಸಿದ್ದರು.
ರೈ ಅವರ ಟ್ವೀಟ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. 'ಕಾಲಾ' ಪರ ಬ್ಯಾಟಿಂಗ್ ಮುಂದುವರಿಸಿರುವ ರೈ, ಸೋಮವಾರ ರಾತ್ರಿ ಮತ್ತೆ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
|
ಹೇಗೆ ಅಭಿವ್ಯಕ್ತಗೊಳಿಸುವುದು?
ಕಾಲಾ ನಿಷೇಧ. ನಟನ ಹೇಳಿಕೆಯಿಂದ ನಮಗೆ ನೋವಾಗಿರುವುದು ನಿಜ. ಹೌದು...ನಾವು ಅದನ್ನು ಅಭಿವ್ಯಕ್ತಗೊಳಿಸಬೇಕು. ಆದರೆ, ಹೇಗೆ? ಅದಕ್ಕೆ ಹೊಣೆಗಾರರಲ್ಲದ ನಮ್ಮಂತಹ ಜನರಿಗೆ ನೋವು ಉಂಟು ಮಾಡುವುದರ ಮೂಲಕವೇ? ಎರಡು ರಾಜ್ಯಗಳ ನಡುವೆ ದ್ವೇಷವನ್ನು ಬಿತ್ತುವುದರ ಮೂಲಕವೇ? ನಾವು ಹೇಗೆ ಪ್ರತಿಭಟನೆ ಮಾಡಬೇಕು ಎಂಬುದನ್ನು ಎಷ್ಟು ಕಾಲದವರೆಗೆ ದಮನಕಾರಿ ಅಂಶಗಳು ನಿರ್ಧರಿಸಲು ಬಿಡಬೇಕು?
|
ಸಿನಿಮಾ ಬಿಡುಗಡೆಯಾಗಲಿ
ಸಿನಿಮಾ ಬಿಡುಗಡೆ ಮಾಡಲು ಬಿಡಿ... ಸಿನಿಮಾವನ್ನು ನೋಡದೆ ಇರುವುದರ ಮೂಲಕ ಜನರು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಬಯಸುತ್ತಾರೆಯೇ ಎಂದು ನೋಡೋಣ. ಸಿನಿಮಾವೊಂದನ್ನ ನಿರ್ಬಂಧಿಸುವುದರ ಮೂಲಕ ಸಮಸ್ಯೆ ಪರಿಹಾರವಾಗುತ್ತದೆಯೇ ಎಂಬುದನ್ನು ಜನರು ನಿಜಕ್ಕೂ ನಂಬುತ್ತಾರೆಯೇ ಎಂಬುದನ್ನು ತಿಳಿದುಕೊಳ್ಳೋಣ. ಎಲ್ಲರನ್ನೂ ಬ್ಲ್ಯಾಕ್ಮೇಲ್ ಮಾಡಲು ಮತ್ತು ನಮ್ಮ ಪರವಾಗಿ ನಿರ್ಧಾರ ತೆಗೆದುಕೊಳ್ಳಲು ಈ ಸಂಘಟನೆಗಳು ಯಾರು?
|
ಜನರ ಆಯ್ಕೆ ಸ್ವಾತಂತ್ರ್ಯ ಕಾಪಾಡಬೇಕು
ಚುನಾಯಿತ ಸರ್ಕಾರವೊಂದು ನಾವು ಸಿನಿಮಾವನ್ನು ನಿಷೇಧಿಸಿಲ್ಲ ಎಂದು ಹೇಳುವ ಮೂಲಕ ಕೈತೊಳೆದುಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಆಯ್ಕೆಯ ಹಕ್ಕನ್ನು ಅದು ರಕ್ಷಿಸಬೇಕು. ಕಾನೂನನ್ನು ಕೈಗೆತ್ತಿಕೊಂಡು ಸಿನಿಮಾವನ್ನು ನಿಷೇಧಿಸುವ ದಮನಕಾರಿ ಸಂಘಟನೆಗಳಿಗೆ ಹಿಡಿತಕ್ಕೆ ಸಿಲುಕಬಾರದು. ಇಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ? ನಾವು ಚುನಾಯಿಸಿದವರೇ ಅಥವಾ ಬೆದರಿಕೆ ಹಾಕುತ್ತಿರುವವರೇ?

ಕರ್ನಾಟಕ, ಕಾವೇರಿಯನ್ನು ಕೆಣಕುತ್ತಿದ್ದಾರೆ
ಸಿನಿಮಾ ಬಿಡುಗಡೆ ಪರವಾಗಿ ಮಾತನಾಡಿದ್ದ ಪ್ರಕಾಶ್ ರೈ ಅವರ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕಾಶ್ ರೈ ಅವರಿಗೆ ಕಾಸೇ ಮುಖ್ಯವಾಗಿದೆ. ನಮಗೆ ಕಾಸಿಗಿಂತ ಕಾವೇರಿ ಮುಖ್ಯ.
ಈ ಹಿಂದೆ ಕಾವೇರಿ ಬಗ್ಗೆ ಚರ್ಚೆ ಮಾಡೊಲ್ಲ ಎಂದಿದ್ದ ರೈ, ಈಗ ಸಿನಿಮಾಕ್ಕೂ ಕಾವೇರಿಗೂ ಏನು ಸಂಬಂಧ ಎನ್ನುತ್ತಿದ್ದಾರೆ. ಈ ಮೂಲಕ ಕರ್ನಾಟಕ ಹಾಗೂ ಕಾವೇರಿಯನ್ನು ಪದೇ ಪದೇ ಕೆಣಕುತ್ತಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕಾಶ್ ರೈ ಕರ್ನಾಟಕದ ಪಾಲಿಗೆ ಒಬ್ಬ ಖಳನಾಯಕ. ಕಾವೇರಿ ವಿಚಾರದಲ್ಲಿ ರಜನಿಕಾಂತ್ ಅಷ್ಟೇ ಅಲ್ಲ. ಯಾರೇ ಲಘುವಾಗಿ ಮಾತನಾಡಿದರೂ ಖಂಡಿಸುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications