ಕಳಸಾ ಬಂಡೂರಿ ಯೋಜನೆ ವಿಳಂಬಕ್ಕೆ ಪ್ರಹ್ಲಾದ ಜೋಶಿ ಕಾರಣ: ಸೊಬರದಮಠ
ಹುಬ್ಬಳ್ಳಿ, ಜುಲೈ 15: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಹೇಳಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳಸಾ-ಬಂಡೂರಿ ಯೋಜನೆ ಕುರಿತು ಈ ಹಿಂದೆ ಪ್ರಧಾನಮಂತ್ರಿ ಬಳಿ ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋದಾಗ ಈ ಹೋರಾಟ ಕಾನೂನು ಹೋರಾಟ ಎಂದು ಹಾದಿ ತಪ್ಪಿಸುವ ಕೆಲಸ ಮಾಡಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಮಹದಾಯಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ ಅನುಸರಿಸಿದ ಧೋರಣೆ ಕುರಿತು ಕಿರು ಹೊತ್ತಿಗೆ ಬಿಡುಗಡೆಗೊಳಿಸಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಡುವಳಿಕೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಇನ್ನೂ ಜುಲೈ 14 ರಂದು ಕಳಸಾ-ಬಂಡೂರಿ ಯೋಜನೆ ಹೋರಾಟ 8 ವರ್ಷ ಪೂರೈಸಿ 9 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಇದು ಹೋರಾಟಗಾರರಿಗೆ ನೋವಿನ ಸಂಗತಿಯಾಗಿದ್ದರೇ, ರಾಜಕೀಯ ನಾಯಕರಿಗೆ ರಾಜಕಾರಣ ಮಾಡಲು ಸಹಕಾರಿಯಾಗಿದೆ. ಈ ಮೂಲಕ ಜನರನ್ನು ರಾಜಕೀಯ ನಾಯಕರು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದರು.
ಕಳಸಾ-ಬಂಡೂರಿ ಯೋಜನೆ ಕಾನೂನು ಹೋರಾಟದಲ್ಲಿ ನ್ಯಾಯ ಒದಗಿಸಲು ಮಹತ್ವದ ಪಾತ್ರವಹಿಸಿರುವ ಮೋಹನ್ ಕಾತರಕಿ ಅವರು ಕೂಡಾ ವಿಳಂಬ ಧೋರಣೆ ಮಾಡುತ್ತಿದ್ದಾರೆ. ಇದು ನಾಡಿಗೆ ಅವರು ಎಸಗಿರುವ ದ್ರೋಹ ಆಗಿದೆ. ಯೋಜನೆ ಅನುಷ್ಟಾನಕ್ಕಾಗಿ ನಿರಂತರವಾಗಿ ಹೋರಾಟ, ಪಾದಯಾತ್ರೆ, ರಕ್ತ ಬರೆದರು ಕೂಡಾ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದರು.

ಇದೀಗ ಲೋಕಸಭಾ ಚುನಾವಣೆ ಪೂರ್ವಕ್ಕೂ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯವಾಗಿ ನಡೆದುಬಂದ, ಮಠಾಧೀಶರನ್ನು ಬೇರೆ ಮಾಡಿದ ಹಾಗೂ ವೀರಶೈವ ಲಿಂಗಾಯತರ ನಡುವೆ ಒಡಕು ಮೂಡಿಸಿದ, ತಮ್ಮನ್ನು ಸಂಸದರಾಗಿ ಮಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮನೆಗೆ ಕಳಿಸಿದ ಅಂಶಗಳನ್ನು ಒಳಗೊಂಡಂತೆ ಜೋಶಿ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಗುವುದು. ಈ ಕಿರುಹೊತ್ತಿಗೆಯಲ್ಲಿ ಎಲ್ಲ ಪಕ್ಷಗಳ ರಾಜಕೀಯ ನಡೆಗಳ ಅಂಶಗಳನ್ನು ಒಳಗೊಂಡಿರಲಿದೆ ಎಂದರು.
ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ಕಾರಣವಾಗಿದ್ದಾರೆ. ಅಲ್ಲದೇ ವೀರಶೈವ ಲಿಂಗಾಯತರಲ್ಲಿ ಒಡಕು ಮೂಡಿಸುವುದರಲ್ಲಿ, ಮಠಾಧೀಶರಲ್ಲಿ ಒಡಕು ಮೂಡಿಸಿ ಧರ್ಮ ಒಡೆಯುವ ಕಾರ್ಯವನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ಈ ಕಳಸಾ ಬಂಡೂರಿ ಯೋಜನೆಯನ್ನು ಶೇ 80 ರಿಂದ 90 ರಷ್ಟು ಬಳಕೆ ಮಾಡಿಕೊಂಡವರು ಬಿಜೆಪಿಗರು. ತುಷ್ಟಿಕರಣ ರಾಜಕಾರಣವನ್ನು ಇವರು ಮಾಡಿದ್ದಾರೆ. ಮೋಹನ ಕಾತರಕಿಯವರಿಂದ ಮಹದಾಯಿ ಯೋಜನೆ ಹಿನ್ನಡೆಯಾಗಿದೆ. ತಪ್ಪು ವಾದ ಮಾಡಿದ್ದಾರೆ ಎಂಬ ಅಂಶಗಳು ಕೇಳಿ ಬಂದಿವೆ ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications