Siddaramaiah: ಎಥೆನಾಲ್ ಹಂಚಿಕೆ ಪ್ರಹ್ಲಾದ್ ಜೋಶಿ ಸುಳ್ಳು ಲೆಕ್ಕ ಹೇಳಿ ರಾಜ್ಯದ ರೈತರಿಗೆ ದ್ರೋಹ : ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 07: ಎಥೆನಾಲ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕಡಿಮೆ ಪ್ರಮಾಣದ ಎಥೆನಾಲ್ ಹಂಚಿಕೆ ಮಾಡಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯವೆಸಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಖಂಡ್ ರಾಜ್ಯದ ಲೆಕ್ಕ ನೀಡಿದ್ದಾರೆ ಎಂದು ಹೇಳುವ ಮೂಲಕ ತಾವು ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ವಿಧೇಯ ಅನುಯಾಯಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಬೀತು ಪಡಿಸಿದ್ದಾರೆ.

ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಷಿ ಅವರು ಗಮನದಲ್ಲಿಡಬೇಕಿತ್ತು. ನಾನು ಇಂದಿನ ಪತ್ರಿಕಾಗೋಷ್ಠಿಯಲ್ಲಿ 2024-25ನೇ ಸಾಲಿನಲ್ಲಿ ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದ್ದ ಎಥೆನಾಲ್ ಪ್ರಮಾಣವನ್ನು ಸೀಮಿತವಾಗಿಟ್ಟುಕೊಂಡು ಮಾತನಾಡಿದ್ದೆ, 2024-25ನೇ ಸಾಲಿನಲ್ಲಿ ಕರ್ನಾಟಕದ 46 ಡಿಸ್ಟಿಲರಿಗಳ ಏಥೆನಾಲ್ ಉತ್ಪಾದನಾ ಸಾಮರ್ಥ್ಯ 270 ಕೋಟಿ ಲೀಟರ್, ನಮ್ಮಿಂದ ತೈಲ ಕಂಪೆನಿಗಳಿಗೆ ಹಂಚಿಕೆಯಾಗಿರುವುದು ಕೇವಲ 47 ಕೋಟಿ ಲೀಟರ್.
ಈ ಅಂಕಿ ಅಂಶ ಕರ್ನಾಟಕ ಸರ್ಕಾರದ್ದಲ್ಲ, ಇದು ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವರಾದ ಪ್ರಹ್ಲಾದ್ ಜೋಷಿ ಅವರೇ 2025ರ ಆಗಸ್ಟ್ ಆರರಂದು ಲೋಕಸಭೆಯಲ್ಲಿ ನೀಡಿರುವ ಉತ್ತರವಾಗಿದೆ. ಒಂದೋ ಜೋಷಿ ಅವರು ಇಂದು ನೀಡಿರುವ ಹೇಳಿಕೆ ಸುಳ್ಳಾಗಿರಬೇಕು, ಇಲ್ಲವಾದರೆ ಲೋಕಸಭೆಯಲ್ಲಿ ನೀಡಿದ್ದ ಉತ್ತರ ಸುಳ್ಳಾಗಿರಬಹುದು. ಯಾವ ಹೇಳಿಕೆಯನ್ನು ಒಪ್ಪಿಕೊಂಡರೂ ಜೋಷಿ ಅವರಿಗೆ ಸುಳ್ಳುಗಾರನ ಪಟ್ಟ ತಪ್ಪಿದ್ದಲ್ಲ.
ಎಥೆನಾಲ್ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಅನ್ಯಾಯ ಆಗಿರುವುದು ಇದೇ ಮೊದಲನೆ ಸಲವಲ್ಲ. 2021-22, 2022-23, 2023-24, 2024-2025ನೇ ಸಾಲಿನ ಕರ್ನಾಟಕದ ಎಥೆನಾಲ್ ಉತ್ಪಾದನೆಯ ಒಟ್ಟು ಸಾಮರ್ಥ್ಯ 879 ಕೋಟಿ ಲೀಟರ್ ಗಳಾದರೆ ರಾಜ್ಯದಿಂದ ಖರೀದಿ ಮಾಡಲಾಗಿರುವುದು 171 ಕೋಟಿ ಲೀಟರ್ ಮಾತ್ರ. ಇದು ಕರ್ನಾಟಕದ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಾಡಿರುವ ಘೋರ ಅನ್ಯಾಯವಲ್ಲದೆ ಮತ್ತೇನು? ಆದರೆ ಗುಜರಾತ್ ರಾಜ್ಯದ ವಾರ್ಷಿಕ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 40 ಕೋಟಿ ಲೀಟರ್ ಇದ್ದರೆ, ತೈಲ ಮಾರಾಟ ಕಂಪನಿಗಳಿಗೆ 31 ಕೋಟಿ ಲೀಟರ್ ಹಂಚಿಕೆ ಮಾಡಲಾಗಿದೆ. ಇದ್ಯಾವ ನ್ಯಾಯ? ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡಬೇಕು ಎಂಬ ರೈತಪರವಾದ ನಮ್ಮ ಬೇಡಿಕೆಗೆ ಬೆಂಬಲ ನೀಡಬೇಕಿದ್ದ ಪ್ರಹ್ಲಾದ್ ಜೋಷಿಯವರು ನಮ್ಮ ವಿರುದ್ಧವೇ ಮಾತನಾಡಿ ರಾಜ್ಯದ ರೈತರಿಗೆ ದ್ರೋಹ ಎಸಗಿದ್ದಾರೆ.
ಸನ್ಮಾನ್ಯ ಜೋಷಿ ಅವರೇ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸ್ವತಃ ನಿಮಗೆ ಪತ್ರ ಬರೆದು ಕಬ್ಬಿಗೆ ಎಫ್.ಆರ್.ಪಿ ಮತ್ತು ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚು ಮಾಡಬೇಕು ಎಂಬ ಮನವಿ ಮಾಡಿದ್ದಾರೆ. ಕರ್ನಾಟಕದ ಬಿಜೆಪಿಯ ನಾಯಕರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕರ್ನಾಟಕದ ಎಥೆನಾಲ್ ಹಂಚಿಕೆ ಪ್ರಮಾಣ ಹೆಚ್ಚಿಸುವಂತೆ ಕೋರಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಕುರುಡಾಗಿದೆ.
ಪ್ರಧಾನ ಮಂತ್ರಿಯವರ ಎದುರು ನೆಟ್ಟಗೆ ನಿಂತು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಿ ಅವರ ಹಿತರಕ್ಷಣೆ ಮಾಡಬೇಕೆಂದು ಹೇಳುವ ಧೈರ್ಯವಾಗಲಿ, ಬದ್ಧತೆಯಾಗಲಿ ಸಚಿವ ಜೋಷಿ ಅವರಿಗಿಲ್ಲ. ಅವರದ್ದೇನಿದ್ದರೂ ರಾಜಕೀಯ ವಿವಾದ ಎಬ್ಬಿಸುವ ಸುಳ್ಳು ಹೇಳಿಕೆಗಳ ಉತ್ತರಕುಮಾರನ ಪೌರುಷ.
ರಾಜ್ಯದ ರೈತರನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟಬೇಕೆಂಬ ಏಕೈಕ ದುರುದ್ದೇಶದಿಂದ ಸುಳ್ಳು ಹೇಳಿಕೆ ನೀಡಿರುವ ಸಚಿವ ಜೋಷಿ ಅವರು ತಮ್ಮ ಸುಳ್ಳಿಗಾಗಿ ರಾಜ್ಯದ ರೈತರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ. ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಿ ಕರ್ನಾಟಕದಿಂದ ಹೆಚ್ಚಿನ ಪ್ರಮಾಣದ ಎಥೆನಾಲ್ ಖರೀದಿ ಮಾಡುವಂತೆ ಆದೇಶ ನೀಡುವಂತೆ ಮಾಡಿ, ರೈತರಿಗೆ ಬಗೆದಿರುವ ದ್ರೋಹದ ಪಾಪವನ್ನು ತೊಳೆದುಕೊಳ್ಳಬೇಕೆಂದು ಜೋಷಿ ಅವರನ್ನು ಆಗ್ರಹಿಸುತ್ತೇನೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications