ಹೀನಾಯ ಸೋಲಿನ ಹೊಡೆತ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲರನ್ನು ಕೆಳಗಿಳಿಸುವ ಸುಳಿವು ನೀಡಿದ ಪ್ರಹ್ಲಾದ್ ಜೋಶಿ

ಬೆಂಗಳೂರು, ಮೇ 19: ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ಈಗಾಗಲೇ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿರುವ ಬಿಜೆಪಿ ಕರ್ನಾಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸುವ ಸಾಧ್ಯತೆಯ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಸುಳಿವು ನೀಡಿದ್ದಾರೆ.

ದಕ್ಷಿಣ ಕನ್ನಡದಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿರುವ ನಳೀನ್‌ ಕುಮಾರ್‌ ಕಟೀಲ್ ಅವರನ್ನು ಮೂರು ವರ್ಷಗಳ ಅವಧಿಗೆ ಆಗಸ್ಟ್ 2019 ರಲ್ಲಿ ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಳೆದ ವರ್ಷ ಅವರ ಅಧಿಕಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.

Pralhad Joshi hints at replacement of Karnataka BJP chief after party loss in Assembly polls

ಮೇ 10 ರಂದು ನಡೆದ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತು. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿದೆ.

ಧಾರವಾಡದ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್‌ ಜೋಶಿ ಅವರು, ಬಿಜೆಪಿ ಶಾಸಕಾಂಗ ಪಕ್ಷದ ಪ್ರತಿನಿಧಿಗಳ ಸಮ್ಮುಖದಲ್ಲಿ ಚರ್ಚೆಯ ನಂತರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಯಾರು ಎಂಬುದನ್ನು ನಿರ್ಧರಿಸುತ್ತದೆ ಎಂದು ಹೇಳಿದರು.

Pralhad Joshi hints at replacement of Karnataka BJP chief after party loss in Assembly polls

'ಅವರ (ಕಟೀಲ್) ಮೂರು ವರ್ಷಗಳ ಅವಧಿ ಮುಗಿದಿದೆ ಎಂದು ನಾನು ಹೇಳಲು ಬಯಸುತ್ತೇನೆ. ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಜವಾಬ್ದಾರಿ ನೀಡಿದ್ದರು. ಈ ಬಗ್ಗೆ ನಮ್ಮ ನಾಯಕರು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಜೋಶಿ ಸುದ್ದಿಗಾರರಿಗೆ ತಿಳಿಸಿದರು.

ಜನರ ಆಶೋತ್ತರಗಳನ್ನು ಈಡೇರಿಸಲು ಆದಷ್ಟು ಬೇಗ ಸರ್ಕಾರ ರಚಿಸುವಂತೆ ಕಾಂಗ್ರೆಸ್‌ಗೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆಯ ಸೋಲಿನ ನಂತರ ಬಿಜೆಪಿಯ ಮುಂದಿನ ನಡೆ ಬಗ್ಗೆ, ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಜೋಶಿ ಹೇಳಿದರು.

Pralhad Joshi hints at replacement of Karnataka BJP chief after party loss in Assembly polls

ಇದು ಬಿಜೆಪಿಗೆ ಅತ್ಯಂತ ನಿರಾಶಾದಾಯಕ ಫಲಿತಾಂಶ ಎಂದು ನಾವು ಈಗಾಗಲೇ ಹೇಳಿದ್ದೇವೆ. ಇಂತಹ ಬೆಳವಣಿಗೆಗಳು ಚುನಾವಣೆಯಲ್ಲಿ ಆಗುತ್ತವೆ. ಕಾರಣವನ್ನು ಕಂಡುಹಿಡಿಯಬೇಕು ಎಂದು ಸಚಿವರು ಹೇಳಿದರು.

ಪಕ್ಷವು ಸೋಲನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಬದಲಾಗಿ, ಫಲಿತಾಂಶವನ್ನು ಸವಾಲಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ನಾವು ಲೋಕಸಭೆ ಚುನಾವಣೆಗೆ ಸಜ್ಜಾಗಿದ್ದೇವೆ ಮತ್ತು ನಾವು ಗೆಲ್ಲುತ್ತೇವೆ ಎಂದೂ ಜೋಶಿ ಅಭಿಪ್ರಾಯ ಪಟ್ಟರು.

ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಕಟೀಲ್ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಪಕ್ಷದ ಸೋಲಿನ ಹೊಣೆ ಹೊರುವುದಾಗಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+