ಕೇಂದ್ರ ಸೇವೆಗೆ ಹೊರಟು ನಿಂತ ಪ್ರಣಬ್ ಮೊಹಾಂತಿ
ಬೆಂಗಳೂರು, ಜುಲೈ 22 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ತೆರಳಲಿದ್ದಾರೆ. ಕರ್ನಾಟಕ ಸರ್ಕಾರ ಲೋಕಾಯುಕ್ತ ಐಜಿಪಿ ಹುದ್ದೆಯಿಂದ ಅವರನ್ನು ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ಆಧಾರ್ ಉಪ ಮಹಾನಿರ್ದೇಶಕ ಹುದ್ದೆಗೆ ಪ್ರಣಬ್ ಮೊಹಾಂತಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮೊಹಾಂತಿ ಅವರು 2ನೇ ಆರೋಪಿಯಾಗಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.[ಗಣಪತಿ ಆತ್ಮಹತ್ಯೆ : ಮೊಹಾಂತಿ ಹೇಳಿದ್ದೇನು?]

ಗಣಪತಿ ಅವರ ಪ್ರಕರಣದಲ್ಲಿ ಮೊಹಾಂತಿ ಅವರು ಆರೋಪಿಯಾಗಿದ್ದರೂ ಹೊಸ ಹುದ್ದೆಯಲ್ಲಿ ಕೆಲಸ ಮಾಡಲು ಅಡ್ಡಿಯಾಗುವುದಿಲ್ಲ. ಪ್ರಕರಣದಲ್ಲಿ ಮೊಹಾಂತಿ ಅವರ ವಿರುದ್ಧ ಅಮಾನತು ಅಥವ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಅವರು ಕೇಂದ್ರ ಸೇವೆಗೆ ತೆರಳಬಹುದು ಎಂದು ತಿಳಿದುಬಂದಿದೆ.[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
2015ರಲ್ಲಿ ಕೇಂದ್ರ ಸರ್ಕಾರ ಆಧಾರ್ ಉಪ ಮಹಾನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. 2016ರ ಫೆಬ್ರವರಿಯಲ್ಲಿ ಪ್ರಣಬ್ ಮೊಹಾಂತಿ ಅವರು ಅರ್ಜಿ ಸಲ್ಲಿಸಿದ್ದರು. ಜುಲೈ 7ರಂದು ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 8ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮೊಹಾಂತಿ ಅವರನ್ನು ನೇಮಕ ಮಾಡಲು ಒಪ್ಪಿಗೆ ಸಿಕ್ಕಿತ್ತು.[ಗಣಪತಿ ಆತ್ಮಹತ್ಯೆ : Timeline]
ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಬ್ ಮೊಹಾಂತಿ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಲು ಒಪ್ಪಿಗೆ ಕೊಟ್ಟಿದ್ದರು. ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಲು ಮಡಿಕೇರಿ ಕೋರ್ಟ್ ನೀಡಿರುವ ಆದೇಶ ರದ್ದುಗೊಳಿಸಬೇಕು ಎಂದು ಮೊಹಾಂತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ಇನ್ನೂ ನಡೆಯಬೇಕಾಗಿದೆ.[ಕೇಂದ್ರ ಸೇವೆಗೆ ಸೋನಿಯಾ ನಾರಂಗ್]
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications