ಪ್ರಸಾರ ಭಾರತಿಗೆ ಸೂರ್ಯ ಪ್ರಕಾಶ್, ಸಂಭ್ರಮಿಸಿದ ಅರಕಲಗೂಡು
ಅರಕಲಗೂಡು, ಅ. 29 : ಪ್ರಸಾರ ಭಾರತಿ ಅಧ್ಯಕ್ಷರಾಗಿ ಡಾ. ಅರಕಲಗೂಡು ಸೂರ್ಯ ಪ್ರಕಾಶ್ ಹೆಸರನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ ಸುದ್ದಿ ಹೊರ ಬೀಳುತ್ತಿದ್ದಂತೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಸಂಭ್ರಮದ ವಾತಾವರಣ ನೆಲೆಸಿತ್ತು.
ಪ್ರಸಾರ ಭಾರತಿ ಅಧ್ಯಕ್ಷ ಸ್ಥಾನಕ್ಕೆ 10ಕ್ಕೂ ಹೆಚ್ಚು ಹೆಸರುಗಳು ಸ್ಪರ್ಧೆಯಲ್ಲಿದ್ದವು. ಈ ಪೈಕಿ ಡಾ. ಅರಕಲಗೂಡು ಸೂರ್ಯ ಪ್ರಕಾಶ್ ಹೆಸರು ಮುಂಚೂಣಿಯಲ್ಲಿತ್ತು. ದೆಹಲಿಯಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಸೂರ್ಯ ಪ್ರಕಾಶ್ ದೇಶದ ಖ್ಯಾತ ಅಂಕಣಕಾರ ಹಾಗೂ ಭಾರತ ಸಂವಿಧಾನ ಮತ್ತು ಸಂಸದೀಯ ವಿಷಯಗಳ ಪ್ರಮುಖ ವಿಮರ್ಶೆಕಾರರಾಗಿ ಹೆಸರು ಮಾಡಿದವರು. ಅಷ್ಟೇ ಅಲ್ಲ ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ಆಳ ಚಿಂತನೆಗಳನ್ನು ಹೊಂದಿದ ಪತ್ರಕರ್ತರಾಗಿದ್ದಾರೆ.

ವಲಸೆ ಹೋದ ಪ್ರತಿಭಾವಂತರ ಕುಟುಂಬ : ಸೂರ್ಯ ಪ್ರಕಾಶ್ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದವರಾಗಿದ್ದು, ಇವರ ಸಹೋದರ ಡಾ|| ಅರಕಲಗೂಡು ರಾಮದಾಸ್ ದೇಶದ ಪ್ರತಿಷ್ಠಿತ ಏಮ್ಸ್ ವೈದ್ಯಕೀಯ ಸಂಸ್ಥೆಯಲ್ಲಿ ಬೈಪಾಸ್ ಸರ್ಜರಿ ವಿಭಾಗದ ಪ್ರಮುಖ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶದ ಮಾಜಿ ಪ್ರದಾನಿ ಮನಮೋಹನ್ ಸಿಂಗ್, ಪ್ರಧಾನಿಯಾಗಿದ್ದಾಗ ಬೈಪಾಸ್ ಸರ್ಜರಿ ಚಿಕಿತ್ಸೆಗೆ ಒಳಗಾಗಿದ್ದರು. ಆ ಸಂಧರ್ಭದಲ್ಲಿ ಚಿಕಿತ್ಸಾ ತಂಡದ ನೇತೃತ್ವವನ್ನು ಡಾ|| ಅರಕಲಗೂಡು ರಾಮದಾಸ್ ವಹಿಸಿದ್ದರು.
ಸೂರ್ಯ ಪ್ರಕಾಶ್ ಮತ್ತು ರಾಮದಾಸ್ ಕುಟುಂಬ ದಶಕಗಳ ಹಿಂದೆಯೇ ಉದ್ಯೋಗದ ಸಲುವಾಗಿ ಪಟ್ಟಣವನ್ನು ತೊರೆದಿದೆ. ಆದರೆ ಹುಟ್ಟೂರಿನ ನೆನಪಿನಲ್ಲಿ ಸೂರ್ಯಪ್ರಕಾಶ್ ಪಟ್ಟಣಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ ಹಾಗೂ ಹುಟ್ಟೂರಿನ ನೆನಪಿಗಾಗಿ ಸಹೋದರರಿಬ್ಬರು ಹೆಸರಿನ ಮುಂದೆ ಅರಕಲಗೂಡು ಹೆಸರನ್ನು ಇಟ್ಟುಕೊಂಡಿದ್ದಾರಲ್ಲದೇ ತಮ್ಮ ಮಕ್ಕಳ ಹೆಸರಿನ ಮೊದಲಿಗೆ ಅರಕಲಗೂಡು ಹೆಸರನ್ನು ಸೇರ್ಪಡೆ ಮಾಡಿಕೊಂಡಿರುವುದು ಹುಟ್ಟೂರಿನ ಪ್ರೀತಿಗೆ ಸಾಕ್ಷಿಯಾಗಿದೆ.
ಎರಡನೇ ಕನ್ನಡಿಗ : ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಪ್ರಸಾರ ಭಾರತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಮೊದಲ ಕನ್ನಡಿಗರಾಗಿದ್ದರು. ಈಗ ಡಾ. ಅರಕಲಗೂಡು ಸೂರ್ಯ ಪ್ರಕಾಶ್ ಪ್ರಸಾರ ಭಾರತಿ ಅಧ್ಯಕ್ಷರಾಗುವ ಮೂಲಕ ದೇಶದ ಪ್ರತಿಷ್ಠಿತ ಪ್ರಸಾರ ಭಾರತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಎರಡನೇ ಕನ್ನಡಿಗರೆಂಬ ಹೆಮ್ಮೆಗೆ ಭಾಜನರಾಗಿದ್ದಾರೆ.
ಡಾ. ಅರಕಲಗೂಡು ಸೂರ್ಯ ಪ್ರಕಾಶ್ 2004ರಲ್ಲಿ ನಡೆದ ಮಹಾಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಸರ್ಕಾರಿ ವೆಚ್ಚದಲ್ಲಿ ಪಕ್ಷದ ಮುಖಂಡ ಕಾನ್ಸಿರಾಂ, ಆನೆ ಮತ್ತು ಮಾಯವತಿ ವಿಗ್ರಹಗಳನ್ನು ಸ್ಥಾಪಿಸಿದ ಕುರಿತು ಆಕ್ಷೇಪವೆತ್ತಿದ್ದರು. ಇದಕ್ಕೆ ಕಾಂಗ್ರೆಸ್ ಕೂಡ ಹೊರತಾಗಿಲ್ಲ ಎಂದು ಕಾಂಗ್ರೆಸ್ ಪಕ್ಷವೂ ಕಳೆದ 60 ವರ್ಷಗಳಿಂದ ಹೇಗೆ ಸರ್ಕಾರಿ ಯೋಜನೆಗಳಿಗೆ ಗಾಂಧಿ ಕುಟುಂಬದ ಹೆಸರನ್ನು ಬಳಸಿಕೊಂಡಿದೆ ಎಂಬುದನ್ನು ವಿವರವಾಗಿ ಅಧ್ಯಯನ ಮಾಡಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿ, ಕ್ರಮಕ್ಕೆ ಆಗ್ರಹಿಸಿ, ರಾಷ್ಟ್ರದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದರು. ದೇಶದ ಥಿಂಕ್ ಟ್ಯಾಂಕ್ ಸದಸ್ಯರ ಪೈಕಿ ಸೂರ್ಯ ಪ್ರಕಾಶ್ ಒಬ್ಬರು ಎಂಬುದು ಸಹಾ ಹೆಮ್ಮೆಯ ಸಂಗತಿಯಾಗಿದೆ.
ಅಲಂಕರಿಸಿದ ಹುದ್ದೆಗಳು ಹಲವಾರು : ಕಳೆದ ಎರಡೂವರೆ ದಶಕಗಳಿಂದ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಮುಖ ಹುದ್ದೆಗಳನ್ನು ಸೂರ್ಯಪ್ರಕಾಶ್ ಅಲಂಕರಿಸಿದ್ದಾರೆ. ಝೀ ಸುದ್ದಿ ವಾಹಿನಿಯ ಸಂಪಾದಕ, ಪಯೋನೀರ್ ಪತ್ರಿಕೆಯ ಕಾರ್ಯ ನಿರ್ವಾಹಕ ಸಂಪಾದಕ, ಏಷ್ಯನ್ ಟೈಮ್ಸ್ ಸಿಂಗಪುರ್ ಮತ್ತು ಬ್ಯಾಂಕಾಕ್ ಆವೃತ್ತಿಯ ಸಂಪಾದಕ, ಈ ನಾಡು ಸಮೂಹ ಸಂಸ್ಥೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದ ಅವರು ಸದ್ಯ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ದೆಹಲಿ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 1971ರಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಬೆಂಗಳೂರು ವರದಿಗಾರರಾಗುವ ಮೂಲಕ ಸೂರ್ಯ ಪ್ರಕಾಶ್ ಪತ್ರಿಕಾ ರಂಗವನ್ನು ಪ್ರವೇಶಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications