ಕಲಬುರ್ಗಿ ಹತ್ಯೆ : ಆರೋಪಿ ಪ್ರವೀಣ್ ಚತುರ್ ಗೌರಿ ಹತ್ಯೆಯಲ್ಲಿ ಸಾಕ್ಷಿ!
ಬೆಂಗಳೂರು, ಜೂನ್ 09 : ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರವೀಣ್ ಚತುರ್ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ. ಕಲಬುರ್ಗಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ ನಡೆಸಿದೆ.
ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಬೆಳಗಾವಿ ಮೂಲದ ಪ್ರವೀಣ್ ಕುಮಾರ್ ಅಲಿಯಾಸ್ ಪ್ರವೀಣ್ ಚತುರ್ (27) ನನ್ನು ಬಂಧಿಸಿದೆ. ಪ್ರವೀಣ್ ಚತುರ್, ಗಣೇಶ್ ಮಿಸ್ಕಿನ್ ಸೇರಿ ಎಂ.ಎಂ.ಕಲಬುರ್ಗಿ ಹತ್ಯೆ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಬೆಳಗಾವಿ ಮೂಲಕ ಪ್ರವೀಣ್ ಚತುರ್ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಮಾಡುವಾಗ ಬೈಕ್ ಓಡಿಸುತ್ತಿದ್ದ. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಬೈಕ್ ಚಾಲಕರ ರೇಖಾ ಚಿತ್ರವನ್ನು ನೋಡಿದಾಗ ಪ್ರವೀಣ್ಗೆ ಹೋಲಿಕೆ ಇರುವುದು ಪತ್ತೆಯಾಗಿದೆ.

'ಪದ್ಮಾವತ್' ಹಿಂದಿ ಸಿನಿಮಾ ಬಿಡುಗಡೆ ಸಮಯದಲ್ಲಿ ಬೆಳಗಾವಿಯ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ಚತುರ್ನನ್ನು ಪೊಲೀಸರು ಈ ವರ್ಷ ಬಂಧಿಸಿದ್ದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂಚು ರೂಪಿಸಿದ ಅಮೋಲ್ ಕಾಳೆಯನ್ನು ವಿಚಾರಣೆ ನಡೆಸಿದಾಗ ಪ್ರವೀಣ್ ಚತುರ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಬೆಳಗಾವಿಯಲ್ಲಿ ಆತನನ್ನು ಬಂಧಿಸಿದ ಎಸ್ಐಟಿ ವಿಚಾರಣೆ ನಡೆಸಿದೆ. ಪ್ರಸ್ತುತ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೆಲವು ಆರೋಪಿಗಳ ವಿಚಾರಣೆ ನಡೆಸಿದಾಗ ಮೊದಲು ಪ್ರವೀಣ್ ಹೆಸರು ಕೇಳಿಬಂದಿತ್ತು. ಆಗ ಆತನನ್ನು ಕರೆದು ಎಸ್ಐಟಿ ವಿಚಾರಣೆ ಮಾಡಿತ್ತು. ಆದರೆ, ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಹಿನ್ನಲೆಯಲ್ಲಿ ಆತನನ್ನು ಸಾಕ್ಷಿಯಾಗಿ ಚಾರ್ಜ್ ಶೀಟ್ನಲ್ಲಿ ಹೆಸರಿಸಲಾಗಿದೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ಶಿವ ಪ್ರತಿಷ್ಠಾನ ಹಿಂದೂಸ್ತಾನ ಸಂಘಟನೆಯ ಸಭೆಗೆ ಪ್ರವೀಣ್ ತಪ್ಪದೇ ಹಾಜರಾಗುತ್ತಿದ್ದ. ಎಂ.ಎಂ.ಕಲಬುರ್ಗಿ ಅವರ ಹತ್ಯೆಗೆ ಕೆಲವೇ ದಿನಗಳ ಹಿಂದೆ ಮಂಗಳೂರಿನಲ್ಲಿ ಬಂದೂರು ತರಬೇತಿ ನಡೆದಿತ್ತು, ಇದರಲ್ಲಿಯೂ ಪ್ರವೀಣ್ ಭಾಗಿಯಾದ ಬಗ್ಗೆ ಎಸ್ಐಟಿಗೆ ಮಾಹಿತಿ ಸಿಕ್ಕಿದೆ.
ಆಗಸ್ಟ್ 30, 2015ರಂದು ಧಾರವಾಡದ ಕಲ್ಯಾಣ ನಗರದ ಮನೆಯಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಸುಪ್ರೀಂಕೋರ್ಟ್ ಆದೇಶದಂತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನೂ ನಡೆಸುತ್ತಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications