ಸಿಎಂ ಸಿದ್ದರಾಮಯ್ಯಗೆ ಪ್ರವೀಣ್ ತೊಗಾಡಿಯಾ ಪತ್ರ!
ಬೆಂಗಳೂರು, ಮಾ.10 : ಕರ್ನಾಟಕದಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷತ್ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿಗೆ ಆಗಮಿಸದಂತೆ ನಿಷೇಧ ಹೇರಿದ್ದಾಗ, ಹೊಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಕರ್ನಾಟಕ ಪೊಲೀಸರು ನನಗೆ ತೊಂದರೆ ನೀಡಿದ್ದಾರೆ. ರಾಜಕೀಯ ಪ್ರೇರಿತವಾದ ಸಿಎಂ ಸಿದ್ದರಾಮಯ್ಯ ಅವರ ಈ ನಡೆ ನನಗೆ ಅಚ್ಚರಿ ತಂದಿದೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [ಉಡುಪಿ ಪ್ರವೇಶಿಸದಂತೆ ತೊಗಾಡಿಯಾಗೆ ನಿಷೇಧ]

'ಮಾರ್ಚ್ 11ರಂದು ಮೈಸೂರಿನಲ್ಲಿ ಭಾಷಣ ಮಾಡುತ್ತೇನೆ ಎಂಬುದನ್ನು ಅರಿತು ವೈಯಕ್ತಿಕ ಹಿತಾಸಕ್ತಿಯಿಂದ ನನಗೆ ನಿಷೇಧ ಹೇರಲಾಗಿದೆ. ಮಾರ್ಚ್ 9 ರಂದು ಕರ್ನಾಟಕದ ಪೊಲೀಸರನ್ನು ಅಹಮದಾಬಾದ್ಗೆ ಕಳುಹಿಸಿ, ನಾನು 10 ವರ್ಷದ ಹಿಂದೆ ತೊರೆದಿರುವ ನನ್ನ ನಿವಾಸಕ್ಕೆ ಹೋಗಿ ಈ ಕುರಿತು ನೋಟಿಸ್ ನೀಡಲಾಗಿದೆ'. [ಚಿಕ್ಕಮಗಳೂರು ಪ್ರವೇಶಿಸದಂತೆ ತೊಗಾಡಿಯಾಗೆ ನಿಷೇಧ]
'ನನ್ನನ್ನು ನಿಷೇಧಿಸುವ ಸಲುವಾಗಿ ಪೊಲೀಸರನ್ನು ಗುಜರಾತ್ಗೆ ಕಳುಹಿಸುವ ಅಗತ್ಯವಿರಲ್ಲಿಲ್ಲ. ಹಿಂದೂ ಸಮಾಜೋತ್ಸವವನ್ನು ಆಯೋಜನೆ ಮಾಡಿದ ಕರ್ನಾಟಕದ ವಿಶ್ವಹಿಂದೂ ಪರಿಷತ್ ನಾಯಕರು ಅಥವ ಕಚೇರಿಗೆ ನೊಟೀಸ್ ನೀಡಬಹುದಿತ್ತು' ಎಂದು ತೊಗಾಡಿಯಾ ಹೇಳಿದ್ದಾರೆ.
ಅಂದಹಾಗೆ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಆದ್ದರಿಂದ ತೊಗಾಡಿಯಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪತ್ರ ಬರೆದಿದ್ದಾರೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications