ಹೆಚ್ಚುತ್ತಿದೆ ಮುಂಗಾರು ಪೂರ್ವ ಮಳೆ ಅಬ್ಬರ: ಮೇ 25ರವರೆಗೂ ಸಾಧ್ಯತೆ
ಬೆಂಗಳೂರು, ಮೇ 21: ಕರಾವಳಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗಿದೆ. ಮೇ 21ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಇದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ದಿನಗಳ ಹಿಂದಷ್ಟೇ ಅರಬ್ಬಿ ಸಮುದ್ರದಲ್ಲಿ ಸಾಗರ್ ಹೆಸರಿನ ಚಂಡಮಾರುತ ಸೃಷ್ಟಿಯಾಗಿತ್ತು. ಇದು ಕ್ಷೀಣಿಸುತ್ತಿದ್ದಂತೆಯೇ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಲಕ್ಷಣವಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಸಹಿತ ಕಡಿಮೆ ಒತ್ತಡದ ಪ್ರದೇಶದಲ್ಲ ವಾಯುಭಾರ ಕುಸಿತ 21 ರಂದು ಈ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮುಂದೆ ಇದು ಚಂಡಮಾರುತವಾಗಿ ಪರಿವರ್ತಿತವಾಗಲಿದೆ.

ಇದರ ಪ್ರಭಾವದಿಂದ ಕೇರಳ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಚಂಡ ಮಾರುತ ಮುನ್ನೆಚ್ಚರಿಕೆ ಕ್ರಮವಾಗಿ ಮೇ 21ರಿಂದ 23ರವರೆಗೆ ಅರಬ್ಬಿ ಸಮುದ್ರದ ಮಧ್ಯಭಾಗಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.











Click it and Unblock the Notifications