ಸಿ ಫೋರ್ ಸಮೀಕ್ಷೆ ನಿಜವಾದ್ರೆ ರಾಜಕೀಯ ಬಿಡುವೆ:ಹೊರಟ್ಟಿ
ಬಾಗಲಕೋಟೆ, ಆಗಸ್ಟ್ 21 : ಸಿ ಫೋರ್ ಸಮೀಕ್ಷೆ ಪ್ರಕಾರ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯ ಬಿಡುವೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಸವಾಲು ಹಾಕಿದ್ದಾರೆ.
ಸಿ ಫೋರ್ ಸಮೀಕ್ಷೆ ಬಗ್ಗೆ ಸೋಮವಾರ ಬಾಗಲಕೋಟೆಯಲ್ಲಿ ಮಾತನಾಡಿದ ಹೊರಟ್ಟಿ, "ಅಧಿಕಾರ ದುರ್ಬಳಕೆ ಮಾಡಿಕೊಂಡು ಸಮೀಕ್ಷೆಯವರನ್ನು ಬುಟ್ಟಿಗೆ ಹಾಕಿಕೊಂಡು ಸಮೀಕ್ಷೆ ಮಾಡಲಾಗಿದೆ ಎಂದು ವ್ಯಂಗ್ಯವಾಡಿದರು.

ಈ ಸಮೀಕ್ಷೆಯಿಂದ ಕಾಂಗ್ರೆಸ್ ತಿಪ್ಪರಲಾಗ ಹಾಕಿದ್ರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಅಧಿಕಾರಕ್ಕೆ ಬಂದ್ರೆ ರಾಜಕೀಯ ಬಿಡುವೆ ಎಂದು ಸವಾಲು ಹಾಕಿದರು.












Click it and Unblock the Notifications