ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ: ಮುಂಜಾಗೃತ ಕ್ರಮದ ಬಗ್ಗೆ ಅಪ್‌ಡೇಟ್‌ ಕೊಟ್ಟ ಡಿಸಿಎಂ

ಬೆಂಗಳೂರು, ಮೇ 13: ಮಳೆಗಾಲದಲ್ಲಿ ನಗರದಲ್ಲಿ ಎದುರಾಗುವ ಪ್ರವಾಹ ಮತ್ತು ಮಳೆ ಸಂಬಂಧಿತ ವಿಪತ್ತುಗಳ ತಡೆಗಟ್ಟಲು ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳು ಹಾಗೂ ನಾನು ಎಚ್ಚರದಿಂದ ಇದ್ದೇವೆ ಎಂದು ತಿಳಿಸಿದರು.

ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ರಸ್ತೆ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, "ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Precautionary Measures Have Been Taken To Manage Situation During Rainy Season

ಅಧಿಕಾರಿಗಳು ತೋರಿಸುವ ಜಾಗದಲ್ಲಿ ಪರಿಶೀಲನೆ ಮಾಡುವುದಿಲ್ಲ, ನಾನು ಎಲ್ಲಿ ಹೇಳುತ್ತೇನೋ ಅಲ್ಲಿ ನಿಲ್ಲಿಸಿ ಪರಿಶೀಲನೆ ಮಾಡಲಾಗುವುದು. ಈಗ ಪರಿಶೀಲನೆ ಮಾಡಿದಾಗ ಅರ್ಧ ಅಡಿ ರಸ್ತೆ ಇದೆ. ಈ ರಸ್ತೆಯಲ್ಲಿ ನೀರು, ಕೇಬಲ್ ಗಳಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಎಲ್ಲಾ ಶಾಸಕರು ಅಗತ್ಯ ಸಹಕಾರ ನೀಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದರು.

ಬೆಂಗಳೂರಿನ ಕಸ ವಿಲೇವಾರಿ ಮಾಫಿಯಾವಾಗಿದೆ ಎಂದು ಹೇಳಿದ್ದೀರಿ ಎಂದು ಕೇಳಿದಾಗ, "ಕಸ ವಿಲೇವಾರಿ ಟೆಂಡರ್ ಕರೆಯಲು ಇದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ವಜಾಗೊಳಿಸಿದೆ. ನಾಲ್ಕು ತಿಂಗಳ ಒಳಗೆ ಟೆಂಡರ್ ಕರೆಯಬೇಕು ಎಂದು ನ್ಯಾಯಾಲಯ ಅವಕಾಶ ನೀಡಿದ್ದು, ನಾವು ಟೆಂಡರ್ ಕರೆದು ಕಸ ವಿಲೇವಾರಿ ಕೆಲಸ ಮಾಡುತ್ತೇವೆ. ಕೆಲವರು ಒಂದೇ ಮನೆಯಲ್ಲಿ ಕೂತು ಟೆಂಡರ್ ಹಾಕಿರುವ ದಾಖಲೆಗಳು ನಮಗೆ ಸಿಕ್ಕಿವೆ. ಅವರು ವಿರೋಧ ಪಕ್ಷದವರ ಬಳಿ ಹೋಗಿ ದೂರು ನೀಡಿದ್ದರು. ಈಗಲೂ ಏನೇನೋ ತಂತ್ರ ಮಾಡುತ್ತಿದ್ದಾರೆ. ಅವರು ಸುಮ್ಮನೆ ಕೂತಿಲ್ಲ. ಆದರೆ ನಾವು ಶುದ್ಧ ಆಡಳಿತ ಕೊಟ್ಟು ಸ್ವಚ್ಛ ಬೆಂಗಳೂರು ನಿರ್ಮಾಣ ಮಾಡುತ್ತೇವೆ. ಒಂದೇ ದಿನ ಎಲ್ಲಾ ಬದಲಾವಣೆ, ಟನಲ್, ಫ್ಲೈಓರವ್, ಅಂಡರ್ ಪಾಸ್ ಆಗುವುದಿಲ್ಲ. ಹಂತ ಹಂತವಾಗಿ ಕೆಲಸ ಮಾಡಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+