ದ್ವಿತೀಯ ಪಿಯು ಪ್ರಿಪರೇಟರಿಗೆ ಹಳೆ ಪ್ರಶ್ನೆ ಪತ್ರಿಕೆ? ಇಲಾಖೆ ಸಭೆ ಇಂದು
ಬೆಂಗಳೂರು, ಜನವರಿ 3: ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ ಶಿಕ್ಷಣ ಸಚಿವರ ನೇಮಕ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ. ಬಿಎಸ್ಪಿಯ ಮಹೇಶ್ ರಾಜೀನಾಮೆಯಿಂದ ತೆರವಾದ ಶಿಕ್ಷಣ ಖಾತೆಗೆ ಇನ್ನೂ ಸಚಿವರ ನೇಮಕವಾಗಿಲ್ಲ. ಪರೀಕ್ಷೆಗಳೂ ಕೂಡ ಹತ್ತಿರ ಬರುತ್ತಿವೆ.
ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಹಿಂದಿನ ವರ್ಷ ಮುಖ್ಯ ಪರೀಕ್ಷೆಗೆ ಸಿದ್ಧಪಡಿಸಿದ್ದ ಹೆಚ್ಚುವರಿ ಪ್ರಶ್ನೆ ಪತ್ರಿಕೆಗಳನ್ನು ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಇಲಾಖೆಯ ಈ ಕ್ರಮಕ್ಕೆ ಪ್ರಾಂಶುಪಾಲರು, ಉಪನ್ಯಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಖಾಲಿ ಇರುವ ಇಲಾಖೆಗೆ ಸಚಿವರು ಹಾಗೂ ಪಿಯು ಇಲಾಖೆ ನಿರ್ದೇಶಕ ಎರಡೂ ಹುದ್ದೆಗಳನ್ನು ತುಂಬುವ ಕೆಲಸಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಸದ್ಯ ಹೆಚ್ಚುವರಿ ನಿರ್ದೇಶಕರು ಇರುವುದರಿಂದ ಸಾರ್ವಜನಿಕರು, ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗೆ ತಕ್ಷಣವೇ ಪರಿಹಾರ ದೊರೆಯುತ್ತಿಲ್ಲ.
ಇಲಾಖೆಗೆ ಸಂಬಂಧಿಸಿದ ಕಡತಗಳು ಸರಿಯಾದ ಸಮಯದಲ್ಲಿ ವಿಲೇವಾರಿ ಆಗುತ್ತಿಲ್ಲ. ಇನ್ನು ಸಚಿವರು ಇಲ್ಲದಿರುವುದರಿಂದ ಸದ್ಯ ಈ ಇಲಾಖೆ ಮುಖ್ಯಮಂತ್ರಿಗಳ ಬಳಿ ಇದೆ. ಹೀಗಾಗಿ ಪ್ರಮುಖವಾದ ಯಾವುದೇ ನಿರ್ಣಯಗಳನ್ನು ಮುಖ್ಯಮಂತ್ರಿಗಳ ಬಳಿಯೇ ಕೊಂಡೊಯ್ಯಬೇಕಿದೆ.

ಪಾಫಿಯಾಗಳಿಗೆ ರಹದಾರಿ
ಕಳೆದ ಆಗಸ್ಟ್ನಲ್ಲಿ ಶಿಖಾ ಅವರನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿದ ಬಳಿಕ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಡಾ. ಪಿಸಿ ಜಾಫರ್ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಎರಡು ವರ್ಷದ ಹಿಂದೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾದ ಸಂದರ್ಭದಲ್ಲೂ ಇಲಾಖೆಗೆ ಕಾಯಂ ನಿರ್ದೇಶಕರು ಇರಲಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ನಿರ್ದೇಶಕರನ್ನು ಬದಲಾಯಿಸುವ ಮೂಲಕ ನಿರ್ಲಕ್ಷ್ಯ ವಹಿಸಿದ್ದೇ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣವಾಗಿತ್ತು ಎಂದು ಹಲವು ಶಿಕ್ಷಣ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ನಾಲ್ಕು ವರ್ಷಗಳಲ್ಲಿ ಎಂಟು ನಿರ್ದೇಶಕರ ಎತ್ತಂಗಡಿ
2012ರಿಂದ 2016ರವರೆಗೆ ನಾಲ್ಕು ವರ್ಷಗಳಲ್ಲಿ ಎಂಟು ನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿತ್ತು. ಹೊಸದಾಗಿ ಅಧಿಕಾರ ವಹಿಸಿಕೊಂಡ ಅಧಿಕಾರಿಗಳು ಇಲಾಖೆಯಲ್ಲಿನ ಆಡಳಿತದ ಮೇಲೆ ಹಿಡಿತ ಸಾಧಿಸುವ ಮುನ್ನವೇ ಅವರನ್ನು ಬೇರೊಂದು ಇಲಾಖೆಗೆ ಎತ್ತಂಗಡಿ ಮಾಡುತ್ತಿದ್ದ ಪರಿಣಾಮ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಹಲವು ಸಮಸ್ಯೆಗಳು ಉದ್ಭವಿಸಿದ್ದವು.

ಶಿಕ್ಷಣ ಇಲಾಖೆ ಸಭೆ ಇಂದು
ದ್ವತೀಯ ಪಿಯುಸಿ ಪಠ್ಯಕ್ರಮಗಳು ಪೂರ್ಣಗೊಂಡು ಪುನರಾವರ್ತನೆ ತರಗತಿಗಳು ನಡೆಯುತ್ತಿವೆ. ವಾರ್ಷಿಕ ಪರೀಕ್ಷೆಯ ಯಾವ ಮಾದರಿ ಪ್ರಶ್ನೆಗಳಿರುತ್ತವೆ ಎಂಬುದು ವಿದ್ಯಾರ್ಥಿಗಳಿಗೆ ತಿಳಿಯಲಿ ಎಂಬ ಉದ್ದೇಶದಿಂದ ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯ ಹೆಚ್ಚುವರಿ ಪ್ರಶ್ನೆಪತ್ರಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಜನವರಿ 3ರಂದು ಸಭೆಯ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಕಾರ್ಯದರ್ಶಿ ಎಸ್ಆರ್ ಉಮಾಶಂಕರ್ ತಿಳಿಸಿದ್ದಾರೆ.

ಇಲಾಖೆಯ ಈ ಕ್ರಮಕ್ಕೆ ತೀವ್ರ ವಿರೋಧ
ಇಲಾಖೆಯ ಈ ಕ್ರಮಕ್ಕೆ ಉಪ ನಿರ್ದೇಶಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಚಾರ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಪಿಯುಸಿ ಪರೀಕ್ಷಾ ವ್ಯವಸ್ಥೆ ಮೇಲೆ ಅನುಮಾನ ಮತ್ತು ಅಪನಂಬಿಕೆ ಸೃಷ್ಟಿಯಾಗಲಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications