DD Hills: ಮಹಿಳೆ ಜೊತೆಗೆ ಕೆಟ್ಟದಾಗಿ ವರ್ತನೆ, ದೇವರಾಯನದುರ್ಗದ ಅರ್ಚಕರ ಮೇಲೆ ಹಲ್ಲೆ..Video Viral
ತುಮಕೂರು, ಆಗಸ್ಟ್ 24: ದೇವಸ್ಥಾನಕ್ಕೆ ಬಂದ ಮಹಿಳೆ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಒಬ್ಬರು ಮಹಿಳೆ ಮತ್ತು ಯುವಕರು ದೇವರಾಯನದುರ್ಗದ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದು ಜರುಗಿ ನಾಲ್ಕು ದಿನಗಳಾದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರವಾಸಿತಾಣ ಹಾಗೂ ದೇವಸ್ಥಾನ ಪ್ರದೇಶವಾದ ತುಮಕೂರು ಜಿಲ್ಲೆಯ ದೇವರಾಯನ ದುರ್ಗದಲ್ಲಿ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹರಿದಾಡುತ್ತಿದೆ. ದೇಗುಲಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕುಂಕುಮ ಇಡುವ ವೇಳೆ ಅವರೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪವು ವಿಡಿಯೋದಲ್ಲಿ ಕೇಳಿಸುತ್ತದೆ.ಇಬ್ಬರು ಯುವಕರು ಹಾಗೂ ಮಹಿಳೆ ಕೈಯಿಂದ ಹಾಗೂ ಕೋಲಿನಿಂದ ಥಳಿಸಿದ್ದಾರೆ. ಅಲ್ಲಿಯೇ ಇದ್ದ ಪ್ರವಾಸಿಗರು, ಭಕ್ತರ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದೆ.

ಮಹಿಳೆಯ ಜೊತೆಗೆ ಕೆಟ್ಟದಾಗಿ ವರ್ತಿಸಿದ್ದಾರೆ ಎನ್ನಲಾದ ಹಿರಿಯ ಅರ್ಚಕರನ್ನು ನಾಗಭೂಷಣಾಚಾರ್ಯ ಎಂದು ಗುರುತಿಸಲಾಗಿದೆ. ಪವಿತ್ರ ಸ್ಥಳದಲ್ಲೇ ಹೀಗಾದರೆ ಹೇಗೆ ಎಂದು ಕೆಲವರು ವಿಡಿಯೋ ನೋಡಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ, ಇಂತಹ ಕೃತ್ಯಕ್ಕೆ ಅವರ ಮೇಲೆ ಈ ರೀತಿಯ ಹಲ್ಲೆ ಸರಿಯಲ್ಲ ಎಂದು ಕೆಲವು ಘಟನೆಗೆ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಯುವಕರಿಂದ ಏಟು ತಿಂದರೆ ಪ್ರತಿರೋಧಿಸದೇ ಇದ್ದ ಅರ್ಚಕರನ್ನು ನೋಡಿದರೆ ಏನೋ ತಪ್ಪು ಮಾಡಿದ್ದಾರೆ ಅಂತಲೂ ಅನ್ನಿಸುತ್ತಿದೆ. ಈ ಕುರಿತು ಸ್ಪಷ್ಟ ಹಾಗೂ ಅಧಿಕೃತ ಮಾಹಿತಿ ದೊರೆಯಬೇಕಿದೆ.
वायरल वीडियो में दावा किया जा रहा है कि "पूजा के दौरान DD Hills मंदिर के पुजारी ने महिला को गलत तरीके से छुआ" , "फिर लोगों ने की पिटाई"
— Mahima Yadav (@SinghKinngSP) August 24, 2025
कर्नाटक के तुमकुरू जिले की घटना बताई जा रही है।
अगर सत्य है तो कानूनी कार्रवाई करनी चाहिए थी हिंसा ठीक नहीं है।pic.twitter.com/WjT9LPXv3M
ದೇವರಾಯನ ದುರ್ಗದ ಕುರಿತು..
ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಗಿರಿಧಾಮ ಹಾಗೂ ದೇವಸ್ಥಾನಗಳಲ್ಲಿ ದೇವರಾಯನದುರ್ಗವು ಒಂದಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯ, ಐತಿಹಾಸಿಕ ದೇವಾಲಯ ವೀಕ್ಷಣೆಗೆ ಪ್ರವಾಸಿಗರು ಬರುತ್ತಿರುತ್ತಾರೆ. ಟ್ರೆಕ್ಕಿಂಗ್ ಮಾಡುವವರಿಗೆ ಇದೊಂದು ಇಷ್ಟದ ತಾಣವಾಗಿದೆ. ದೇವರಾಯನದುರ್ಗ ತುಮಕೂರಿನಿಂದ ಕೇವಲ ಸುಮಾರು 15 ಕಿಲೋ ಮೀಟರ್ ದೂರದಲ್ಲಿದೆ. ರಾಜಧಾನಿ ಬೆಂಗಳೂರಿನಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿದೆ.
-
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications