ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಅರ್ಚಕ
ಬೆಂಗಳೂರು, ಜೂ. 26 : ಅರ್ಚಕರೊಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ಅರ್ಚಕರು ಉಡುಪಿ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು.
ಆತ್ಮಹತ್ಯೆಗೆ ಶರಣಾದ ಅರ್ಚಕರನ್ನು ಶಿವಶಂಕರ್ ಹೆಬ್ಬಾರ್ (45) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಬಳಿಯ ವಿಶ್ವೇಶ್ವರಯ್ಯ ಬಡಾವಣೆಯ ನೈಸ್ ರಸ್ತೆಗೆ ಸೇರಿದ ಜಮೀನಿನಲ್ಲಿ ತಮ್ಮ ಮಾರುತಿ 800 ಕಾರಿನಲ್ಲಿ ಕುಳಿತು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಹೆಬ್ಬಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ಮಾಗಡಿ ರಂಗನಾಥಸ್ವಾಮಿ ಮುಂದೆ ಅರ್ಚಕರ ಕಿತ್ತಾಟ]

ಮೈಸೂರು-ಮಾಗಡಿ ರಿಂಗ್ ರಸ್ತೆಯಲ್ಲಿರುವ ಮರಿಯಪ್ಪನ ಪಾಳ್ಯದ ಅಮ್ಮ ಆಶ್ರಮದ ರಸ್ತೆಯಲ್ಲಿರುವ ಶನೇಶ್ವರ ದೇವಾಲಯದಲ್ಲಿ ಶಿವಶಂಕರ್ ಹೆಬ್ಬಾರ್ ಅರ್ಚಕರಾಗಿದ್ದರು. ಉಡುಪಿ ಮೂಲದವರಾದ ಹೆಬ್ಬಾರ್ ಪತ್ನಿ ಅನುಪಮಾ, ಪುತ್ರ ದ್ರುವ ಜೊತೆ ಕೆಂಗೇರಿ ಉಪನಗರದಲ್ಲಿ ನೆಲೆಸಿದ್ದರು. [ಮುಜರಾಯಿ ದೇವಾಲಯಕ್ಕೆ ವಾರ್ಷಿಕ 36 ಸಾವಿರ ಅನುದಾನ]
ಘಟನೆ ವಿವರ : ಗುರುವಾರ ಬೆಳಗ್ಗೆ 10.45ರ ಸುಮಾರಿಗೆ ಶಿವಶಂಕರ್ ಹೆಬ್ಬಾರ್ ಮನೆಯಿಂದ ಹೊರಟಿದ್ದರು. ಸ್ನೇಹಿತನನ್ನು ನೋಡಿಕೊಂಡು ಬರುತ್ತೇನೆ ಎಂದು ಹೇಳಿ ಹೊರಟಿದ್ದ ಅವರು 11.30ರ ಸುಮಾರಿಗೆ ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ದೇವಾಲಯಗಳ ಆನ್ ಲೈನ್ ಸೇವೆ ಬುಕ್ ಮಾಡುವುದು ಹೇಗೆ?]
ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಸ್ಥಳೀಯರು ಕುಂಬಳಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ನೋಡುವಾಗ ಶಿವಶಂಕರ್ ಹೆಬ್ಬಾರ್ ಮೃತಪಟ್ಟಿದ್ದರು. ನಂತರ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸಾಗಿಸಲಾಯಿತು.
ಶಿವಶಂಕರ್ ಹೆಬ್ಬಾರ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿದ್ದ ಮರದಡಿ ಕಾರಿನ ದಾಖಲೆಗಳನ್ನು ಇಟ್ಟಿದ್ದರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ. [ಚಿತ್ರ : ಐಸಾಕ್ ರಿಚರ್ಡ್, ಮಂಗಳೂರು]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications