ಮುಜರಾಯಿ ದೇವಾಲಯಗಳಲ್ಲಿ ಆನ್ಲೈನ್ ಸೇವೆಗೆ ಅರ್ಚಕರಿಂದ ವಿರೋಧ!
ಬೆಂಗಳೂರು ಜುಲೈ 30: ಸಾಮಾನ್ಯವಾಗಿ ದೇವಸ್ಥಾನಕ್ಕೆ ತೆರಳು ಸಾಧ್ಯವಾಗದೇ ಇರುವವರು ಆನ್ಲೈನ್ ಮೂಲಕ ಪೂಜೆ ಸಲ್ಲಿಸುತ್ತಾರೆ. ಇದಕ್ಕಾಗಿ ದೇವಸ್ಥಾನಗಳು ಆನ್ಲೈನ್ ಸೇವೆ ನೀಡುತ್ತವೆ. ಆದರೆ ಈ ಸೇವೆಗೆ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಹೌದು... ಮುಜರಾಯಿ ದೇವಾಲಯಗಳಲ್ಲಿ ಆನ್ಲೈನ್ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ಆನ್ಲೈನ್ನಲ್ಲಿ ಕೆಲ ಭಕ್ತರು ಸಂಜೆ ಹಾಗೂ ರಾತ್ರಿ ಸೇವೆಯನ್ನು ಬುಕ್ ಮಾಡುತ್ತಾರೆ. ಹೆಚ್ಚು ಜನ ಪ್ರಸಾದಕ್ಕಾಗಿ ಬುಕ್ಕ ಮಾಡಿಕೊಂಡಿರುತ್ತಾರೆ. ಆದರೆ ಇದರಿಂದ ಮರುದಿನ ಬೆಳಗ್ಗೆಯೇ ಬುಕ್ ಮಾಡಿದ ಭಕ್ತಾಧಿಗಳ ಸೇವೆ ಮಾಡಲು ಕಷ್ಟವಾಗುತ್ತದೆ ಎಂದು ಅರ್ಚಕರು ದೂರಿದ್ದಾರೆ.

ಅಲ್ಲದೆ ಭಕ್ತಾಧಿಗಳು ತಕ್ಷಣ ಮಾಡಿದ ಬುಕ್ಕಿಂಗ್ ಮಾಹಿತಿ ಅರ್ಚಕರಿಗೆ ಇರುವುದಿಲ್ಲ. ಪ್ರಸಾದವನ್ನು ತಕ್ಷಣಕ್ಕೆ ತಯಾರಿಸಲು ಆಗುವುದಿಲ್ಲ. ಪೂಜೆಗೆ ರಾತ್ರಿ ಬುಕ್ ಮಾಡಿದರೆ ಬೆಳಿಗ್ಗೆನೇ ಮಾಡಿ ಬಿಡಲು ಆಗುವುದಿಲ್ಲ. ಅದಕ್ಕಾಗಿ ನಾವು ಕೂಡ ತಯಾರಿ ಮಾಡಿಕೊಳ್ಳಬೇಕು.
ತಕ್ಷಣಕ್ಕೆ ಬುಕ್ಕಿಂಗ್ ಮಾಡುವುದರಿಂದ ಪೂಜೆ ಮಾಡಿ ಹಾಗೂ ಪ್ರಸಾದ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸಾದ ತಯಾರಿಸಲು ಸಮಯ ಬೇಕಾಗುತ್ತದೆ. ರಾತ್ರಿ ಬುಕ್ ಮಾಡಿ ಬೆಳಿಗ್ಗೆ ಪ್ರಸಾದ ಬೇಕು ಹಾಗೂ ಪೂಜೆ ನಡೆಯಬೇಕು ಅಂದರೆ ಅದು ಕಷ್ಟವಾಗುತ್ತಿದೆ ಎಂದು ಅರ್ಚಕ ಒಕ್ಕೂಟ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಅರ್ಚಕರ ಒಕ್ಕೂಟ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ ಬರೆದಿದೆ. ಮುಜರಾಯಿ ಇಲಾಖೆಗೆ ಒಳಪಡುವ ಬಹುತೇಕ ದೇವಸ್ಥಾನಗಳಲ್ಲಿ ಅಡುಗೆಯರುವ ಹಾಗೂ ಅಗ್ರಾಣದ ವ್ಯವಸ್ಥೆ ಇಲ್ಲ. ಅಲ್ಲದೆ ಆನ್ಲೈನ್ನಲ್ಲಿ ಬುಕ್ ಮಾಡಿದ ಹಣ ಯಾವಾಗಲೋ ಅರ್ಚಕರ ಕೈ ಸೇರುತ್ತದೆ.

ಇದರಿಂದ ಪೂಜಾ ಸಾಮಾಗ್ರಿ ಹಾಗೂ ಪ್ರಸಾದ ತಯಾರಿಸಲು ಬೇಕಾಗುವ ಪದಾರ್ಥಗಳನ್ನು ತರಲು ತೊಂದರೆಯಾಗುತ್ತಿದೆ. ಹೀಗಾಗಿ ಆನ್ಲೈನ್ ಸೇವೆಯನ್ನು ನಿಲ್ಲಿಸಬೇಕು ಎಂದು ಅರ್ಚಕರು ಒತ್ತಾಯಿಸಿದ್ದಾರೆ. ಮುಜರಾಯಿ ಇಲಾಖೆಗೆ ಒಳಪಡುವ ರಾಜ್ಯದ ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ಆನ್ಲೈನ್ ಸೇವೆ ಒದಗಿಸುವುದಕ್ಕೆ ತೊಂದರೆ ಇಲ್ಲ.
ಯಾಕೆಂದರೆ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡಿಬೆಟ್ಟ, ನಂಜನಗೂಡು, ಮೇಲುಕೋಟೆ ಇತರ ದೊಡ್ಡ ದೇವಸ್ಥಾನಗಳಲ್ಲಿ ಇದಕ್ಕೆಲ್ಲ ವ್ಯವಸ್ಥೆ ಇದೆ. ಅಲ್ಲಿ ಆನ್ಲೈನ್ ಸೇವೆ ಒದಗಿಸಬಹುದು. ಯಾಕೆಂದರೆ ಅಲ್ಲಿ ಕೆಲಸದವರು, ಸಿಬ್ಬಂದಿಗಳು ಹಾಗೂ ಉಗ್ರಾಣಗಳು ಹೆಚ್ಚುವರಿಯಾಗಿ ಇರುತ್ತವೆ. ಇದರಿಂದ ಅಲ್ಲಿ ತೊಂದರೆಯಾಗುವುದಿಲ್ಲ.

ಆದರೆ ಇಂತಹ ವ್ಯವಸ್ಥೆ ಇಲ್ಲದ ದೇವಸ್ಥಾನಗಳಲ್ಲಿ ಇದು ಕಷ್ವವಾಗುತ್ತಿದೆ. ಇದರಿಂದ ನಿತ್ಯ ಪೂಜೆ ಸಲ್ಲಿಸುವ ಭಕ್ತರಿಗೆ ಪೂಜೆ ಮಾಡಿಕೊಡುವುದು ಆನ್ಲೈನ್ ಮೂಲಕ ಬಂದ ಭಕ್ತರಿಗಾಗಿ ಪೂಜೆ ಸಲ್ಲಿಸುವುದು ಕಷ್ಟವಾಗುತ್ತಿದೆ. ರಾತ್ರಿ ಬುಕ್ ಆದ ಸೇವೆಗೆ ಬೆಳಿಗ್ಗೆ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸಿದ್ದಾರೆ.
ಆದರೆ ಪೂಜಾ ಸೇವೆಗಳನ್ನು ಆನ್ಲೈನ್ ಮೂಲಕ ಬುಕ್ ಮಾಡಲು ಮೊದಲ ಹಂತವಾಗಿ ಬೆಂಗಳೂರಿನ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಪೋರ್ಟಲ್ ಹಾಗೂ ಮೊಬೈಲ್ ಆಪ್ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆನ್ಲೈನ್ ಮೂಲಕ ಕಾಯ್ದಿರಿಸೋದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಂದಾಗಿ ಈ ಆನ್ಲೈನ್ ಸೇವೆಯನ್ನು ಹಾಗೂ ಈ ಮೊಬೈಲ್ ಆಪ್ನ್ನು ರದ್ದು ಮಾಡಬೇಕೆಂದು ಅರ್ಚಕರ ಒಕ್ಕೂಟ ಒತ್ತಾಯಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications