ಕೊರೊನಾ ಬಂದಾಗಿನಿಂದ ಮೋದಿ ಎಂದಾದರೂ ಹೊರಗಡೆ ಬಂದಿದ್ದಾರಾ?
ಬೆಂಗಳೂರು, ಜುಲೈ 2: ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.
Recommended Video
"ಸ್ವಾತಂತ್ರ್ಯಾನಂತರದ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಇನ್ನೊಬ್ಬರಿಲ್ಲ. ಬಡವರು, ರೈತರು, ಶ್ರಮಿಕ ವರ್ಗಕ್ಕೆ ಅವರಷ್ಟು ದ್ರೋಹ ಹಿಂದಿನ ಯಾವ ಪ್ರಧಾನಿಗಳೂ ಮಾಡಿಲ್ಲ"ಎಂದು ಸಿದ್ದರಾಮಯ್ಯ ಕಿಡಿಕಾರಿದರು.
'ದೇಶದ ಅಭಿವೃದ್ದಿಯನ್ನು ಮಾಡಿ ಎಂದರೆ, ಚಪ್ಪಾಳೆ ಹೊಡೆಯಿರಿ, ದೀಪ ಹಚ್ಚಿ ಅಂತಾರೆ. ಕೊರೊನಾ ಬಂದಾಗಿನಿಂದ ಎಂದಾದರೂ, ಮೋದಿ, ಹೊರಗಡೆ ಬಂದಿದ್ದಾರಾ"ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

"ದುಡ್ಡು ಚೆಲ್ಲಿ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ಈಗ, ಅದನ್ನು ಬೇರೆ ಬೇರೆ ಇಲಾಖೆಯ ಮುಖಾಂತರ ಬಾಚಲು ಹೊರಟಿದ್ದಾರೆ. ಬಿಜೆಪಿಯನ್ನು ಓಡಿಸಲು ಇನ್ನೊಂದು ಸ್ವಾತಂತ್ರ್ಯ ಹೋರಾಟ ನಡೆಯಬೇಕಿದೆ, ಅದಕ್ಕೆ ನಾವೆಲ್ಲಾ ಒಂದಾಗಬೇಕು"ಎಂದು ಸಿದ್ದರಾಮಯ್ಯ ಕರೆನೀಡಿದರು.
"ಪ್ರಣಾಳಿಕೆಯಲ್ಲಿ ಏನು ಭರವಸೆಯನ್ನು ನೀಡಿದ್ದೆವೋ, ಅದನ್ನು ನೂರಕ್ಕೆ ನೂರು ಪೂರೈಸಿದ ಖ್ಯಾತಿ ಕಾಂಗ್ರೆಸ್ ಸರಕಾರದ್ದು. ಆದರೂ ನಮಗೆ ಹಿನ್ನಡೆಯಾಯಿತು"ಎಂದು ಸಭೆಯಲ್ಲಿ ಬೇಸರ ವ್ಯಕ್ತ ಪಡಿಸಿದರು.
"ಪ್ರಧಾನಿ ಮೋದಿ ಆರ್ ಎಸ್ ಎಸ್ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆಯೇ ಹೊರತು ದೇಶಕ್ಕಾಗಿ ಅಲ್ಲ. ದೇಶ ಇಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಜನರು ಸಹಿಸಿಕೊಂಡಿದ್ದರಲ್ಲಾ ಎನ್ನುವುದು ನನಗೆ ಆಶ್ಚರ್ಯ ತಂದಿದೆ"ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದರು.












Click it and Unblock the Notifications