ಕರ್ನಾಟಕದ ಜೈಲುಗಳಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಆರಂಭಕ್ಕೆ ಕಾರಾಗೃಹ ಇಲಾಖೆ ಯೋಜನೆ
ಬೆಂಗಳೂರು, ಜನವರಿ 04: ಕರ್ನಾಟಕ ಕಾರಾಗೃಹ ಇಲಾಖೆಯು ತನ್ನ ಸುಧಾರಣಾ ಮತ್ತು ಪುನರ್ವಸತಿ ಉಪಕ್ರಮಗಳ ಭಾಗವಾಗಿ ರಾಜ್ಯದಲ್ಲಿ ಜೈಲಿನ ಒಳಗೆ ಖೈದಿಗಳಿಗಾಗಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ಗಳನ್ನು ಆರಂಭಿಸುವ ಚಿಂತನೆ ನಡೆಸಿದೆ.
ಕೈದಿಗಳು ಜೈಲಿನಿಂದ ಹೊರಬಂದ ನಂತರ ಗೌರವಯುತ ಜೀವನ ಕಟ್ಟಿಕೊಂಡು ಯಶಸ್ವಿ ಬದುಕು ನಡೆಸಬೇಕು. ಈ ಮಹತ್ತರ ಉದ್ದೇಶದಿಂದ ಕರ್ನಾಟಕ ಕಾರಾಗೃಹ ಇಲಾಖೆಯು ಇಂತದ್ದೊಂದು ಯೋಜನೆ ರೂಪಿಸುತ್ತಿದೆ.
ಖೈದಿಗಳಿಗೆ ಕಲಿಯಲು ಅನುಕೂಲವಾಗುವ ಈ ಹೊಸ ಯೋಜನೆ ಕುರಿತು ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ. ಜೈಲಿನ ಆವರಣದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಆರಂಭಿಸುವ ಸಂಬಂಧ ಕೆಲವು ಹೋಟೆಲ್ ನಿರ್ವಹಣಾ ಸಂಸ್ಥೆಗಳು ಸಂಪರ್ಕಿಸಿವೆ. ನಾವು ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಆದರೆ ಯಾವುದು ಇನ್ನು ಅಂತಿಮವಾಗಿಲ್ಲ. ಆದಷ್ಟು ಶೀಘ್ರವೇ ಎಲ್ಲವೂ ಅಂತಿಮವಾಗಲಿವೆ ಎಂದರು

ಎಲ್ಲವು ಅಂದುಕೊಂಡಂತೆ ಆದರೆ ಅಲ್ಪಾವಧಿಯ ಕೋರ್ಸ್ಗಳನ್ನು ಜೈಲಿನ ಆವರಣದಲ್ಲಿ ನಡೆಸಲಾಗುವುದು. ಕೈದಿಗಳು ಜೈಲಿನಿಂದ ಹೊರಬಂದ ನಂತರ ಗೌರವಯುತ ಜೀವನವನ್ನು ನಡೆಸಬೇಕೆಂದು ನಾವು ಬಯಸುತ್ತೇವೆ. ಅವರು ಸ್ವಯಂ ಉದ್ಯೋಗಿಗಳಾಗಬೇಕು. ಅದಕ್ಕಾಗಿ ಈ ಯೋಜನೆ ಪೂರಕವಾಗಿರಲಿದೆ. ಕೋರ್ಸ್ ಬಳಿಕ ಅವರಿಗೂ ಪ್ರಮಾಣ ಪತ್ರ ನೀಡಲಾಗುವುದು.
ಖೈದಿಗಳು ಸಾಕ್ಷರರಾಗಬೇಕು
ಪ್ರಸ್ತುತ ನಾವು ವಯಸ್ಕರ ಸಾಕ್ಷರತೆಯಿಂದ ದೂರ ಶಿಕ್ಷಣದವರೆಗೆ ಅನೇಕ ಶಿಕ್ಷಣ-ಸಂಬಂಧಿತ ಕೋರ್ಸ್ಗಳನ್ನು ಹೊಂದಿದ್ದೇವೆ. ಅನಕ್ಷರಸ್ಥರಾಗಿ ಬರುವ ಖೈದಿಗಳು ಸಾಕ್ಷರರಾಗಿ ಹೊರಬರಬೇಕು ಎಂಬುದು ಇಲಾಖೆಯ ಆಶಯ. ಕೋರ್ಸ್ ಕಲಿತ ನಂತರ ಅದು ಅವರು ಸ್ವಾವಲಂಬಿಯಾಗಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಕೋರ್ಸ್ಗಳು ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ತಿಂಡಿ, ತಿನಿಸು, ಊಟ ಸೆರಿದಂತೆ ಎಲ್ಲ ಬಗೆಯ ಆಹಾರ ಭಕ್ಷ್ಯಗಳನ್ನು ಬೇಯಿಸುವುದು ಮತ್ತು ಅತಿಥಿಗಳಿಗೆ ಬಡಿಸುವ ತರಬೇತಿಯನ್ನು ಒಳಗೊಂಡಿರುತ್ತದೆ. ಈ ಕೋರ್ಸ್ ಕಲಿತವರು ಜೈಲಿನಿಂದ ಹೊರ ಬಂದ ಬಳಿಕ ಸ್ವಂತ ವ್ಯವಹಾರವನ್ನು ಪ್ರಾರಂಭಿಸಬಹುದು. ಇಲ್ಲವೇ ದೊಡ್ಡ ಹೋಟೆಲ್ಗಳಲ್ಲಿ ಕೆಲಸ ಮಾಡಬಹುದು ಎಂದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications