ಕೋಟಿ ಕೋಟಿ ಆಸ್ತಿ ಇರುವ ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕ್ಲರ್ಕ್ ಕೆಲಸ, ಸಂಬಳ ಎಷ್ಟು?
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕೇಸ್ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿದ್ದಾರೆ. ಇತ್ತೀಚೆಗಷ್ಟೇ ಕೋರ್ಟ್ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ಪ್ರಕಟಿಸಿತ್ತು. ಹೀಗಾಗಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ತಮ್ಮ ಜೈಲುವಾಸ ಮುಂದುವರಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪ್ರಜ್ವಲ್ ರೇವಣ್ಣಗೆ ಕೈದಿ ನಂ.15528 ನೀಡಲಾಗಿದೆ. ಜೈಲಿನಲ್ಲಿರುವ ಲೈಬ್ರರಿಯಲ್ಲಿ ಪ್ರಜ್ವಲ್ಗೆ ಕ್ಲರ್ಕ್ ಕೆಲಸ ವಹಿಸಲಾಗಿದೆ.
ಪ್ರಜ್ವಲ್ ವಿರುದ್ಧ ಸಿಐಡಿ ಹಾಗೂ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ ಒಂದು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿ, ಆಗಸ್ಟ್ 2ರಂದು ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವಂತೆ ಪ್ರಜ್ವಲ್ ರೇವಣ್ಣಗೂ ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿರುವ ಪ್ರಜ್ವಲ್ ರೇವಣ್ಣ ಕೃಷಿ ಕೆಲಸ ಮಾಡುವುದಾಗಿ ಹೇಳಿದ್ದರು. ಆದರೆ ಕ್ಲರ್ಕ್ ಕೆಲಸ ನೀಡಲಾಗಿದೆ. ಹೀಗಾಗಿ ವಿಚಾರಣಾಧೀನ ಕೈದಿಗಳಿಗೆ ಜೈಲಿನ ಲೈಬ್ರರಿಯಲ್ಲಿ ಪುಸ್ತಕ ವಿತರಿಸುವುದು ಹಾಗೂ ಈ ಬಗ್ಗೆ ನೋಂದಣಿ ಪುಸ್ತಕದಲ್ಲಿ ಬರೆದುಕೊಳ್ಳುವ ಕೆಲಸ ನೀಡಲಾಗಿದೆ.

ಪ್ರಜ್ವಲ್ಗೆ ದಿನಗೂಲಿ ಎಷ್ಟು?
ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ಪ್ರಜ್ವಲ್ ಪುಸ್ತಕದಲ್ಲಿ ಬರೆದುಕೊಳ್ಳಬೇಕಾಗಿದೆ. ಈ ಕ್ಲರ್ಕ್ ಕೆಲಸಕ್ಕೆ ಪ್ರಜ್ವಲ್ಗೆ ದಿನಕ್ಕೆ 524 ರೂಪಾಯಿ ದಿನಗೂಲಿ ನಿಗದಿಪಡಿಸಲಾಗಿದೆ. ಕೆಲಸ ಮಾಡಿದ ದಿನದಂದು ಮಾತ್ರವೇ ಈ ಕೂಲಿ ಸಿಗಲಿದೆ. ಕೋರ್ಟ್ಗೆ ಹಾಜರಾಗುವ ದಿನಗಳಂದು ಯಾವುದೇ ಕೂಲಿ ಹಣ ನೀಡುವುದಿಲ್ಲ ಎನ್ನಲಾಗಿದೆ.
ಕರ್ನಾಟಕದಲ್ಲಿರುವ ಜೈಲುಗಳಲ್ಲಿ ಕೈದಿಗಳಿಗೆ ಆರಂಭದಲ್ಲಿ ದಿನಕ್ಕೆ ಒಟ್ಟು 524 ರೂಪಾಯಿ ಸಂಬಳ ನೀಡಲಾಗುತ್ತದೆ. ಒಂದು ವರ್ಷದ ಬಳಿಕ ಕೆಲಸದಲ್ಲಿ ಪರಿಣಿತಿ ಹೊಂದಿದ ಬಳಿಕ ದಿನಕ್ಕೆ 548 ರೂಪಾಯಿ ಸಂಬಳ ನೀಡಲಾಗುತ್ತದೆ. ಕೈದಿಯು ಎರಡು ವರ್ಷಗಳ ಅನುಭವ ಪಡೆದ ನಂತರ ಬಡ್ತಿ ಕೊಡಲಾಗುತ್ತೆ. ಆಗ ಕೈದಿಗೆ ದಿನಕ್ಕೆ 615 ರೂಪಾಯಿ ಸಂಬಳ ನೀಡುತ್ತಾರೆ. ಮೂರು ವರ್ಷಗಳ ನಂತರ ಅವರನ್ನು ಅನುಭವಿ ಕೆಲಸಗಾರರದು ಎಂದು ಪರಿಗಣಿಸಲಾಗುತ್ತೆ, ಆಗ ಅವರಿಗೆ ದಿನಕ್ಕೆ 663 ರೂಪಾಯಿ ಸಂಬಳ ನೀಡುತ್ತಾರೆ ಎಂದು ವರದಿಯಾಗಿದೆ.
ಕೆ.ಆರ್.ನಗರ ಮೂಲದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಕಳೆದ 14 ತಿಂಗಳಿನಿಂದಲೂ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇತ್ತೀಚೆಗೆ ಈ ಪ್ರಕರಣದ ತೀರ್ಪು ಪ್ರಕಟಿಸಿ, ತಪ್ಪಿತಸ್ಥ ಎಂದು ಹೇಳಿತ್ತು. ಅಲ್ಲದೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಿತ್ತು. ಅತ್ಯಾಚಾರ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ಪೂರ್ಣಗೊಳಿಸಿ ಕೇವಲ 7 ತಿಂಗಳಲ್ಲೇ ತೀರ್ಪು ಪ್ರಕಟಿಸುವ ಮೂಲಕ ದಾಖಲೆ ಬರೆದಿತ್ತು. ಹೀಗಾಗಿ ಪ್ರಜ್ವಲ್ ಅವರು ಸಾಮಾನ್ಯ ಕೈದಿಯಂತೆ ಪರಪ್ಪನ ಅಗ್ರಹಾರ ಜೈಲುವಾಸದಲ್ಲಿದ್ದಾರೆ.ರಾಜಕಾರಣಿ ಬದುಕಿನಿಂದ ಕೈದಿ ಬದುಕು ಕಳೆಯುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications