ಕಾರಾಗೃಹ ಇಲಾಖೆಯಿಂದ ಕೈದಿಗಳಿಗೆ ಸುವರ್ಣಾವಕಾಶ
ಬೆಂಗಳೂರು, ಆಗಸ್ಟ್ 18: ಕರ್ನಾಟಕ ರಾಜ್ಯ ಕಾರಾಗೃಹಗಳ ಇಲಾಖೆಯು ಖೈದಿಗಳಿಂದ ಇಂಧನ ಕೇಂದ್ರಗಳನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಈ ಕೇಂದ್ರಗಳನ್ನು ಕಾರಾಗೃಹಗಳಿಗೆ ಸಮೀಪವಿರುವ ಆಯ್ದ ಸ್ಥಳಗಳಲ್ಲಿ ಪ್ರಾರಂಭಿಸಲಾಗುವುದು. ಇದರಿಂದ ಇಲಾಖೆ ಸಿಬ್ಬಂದಿ ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ಹೇಳಲಾಗಿದೆ.
ರಾಜ್ಯವು ಸುಮಾರು 100 ಕಾರಾಗೃಹಗಳನ್ನು ಹೊಂದಿದ್ದು, ಇದರಲ್ಲಿ ಕೇಂದ್ರ, ಜಿಲ್ಲಾ, ಮುಕ್ತ ಮತ್ತು ತಾಲೂಕು ಮಟ್ಟದ ಜೈಲುಗಳಲ್ಲಿ 15,000ಕ್ಕೂ ಹೆಚ್ಚು ಕೈದಿಗಳು ಸೆರೆವಾಸಿಗಳಾಗಿದ್ದಾರೆ. ಹಿರಿಯ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ, ಈ ಯೋಜನೆಯು ಜೈಲುಗಳು ಮತ್ತು ತಿದ್ದುಪಡಿ ಸೇವೆಗಳು, ಕಾರಾಗೃಹ ಇಲಾಖೆಯ ಸುಧಾರಣೆ ಮತ್ತು ಪುನರ್ವಸತಿ ಉಪಕ್ರಮಗಳ ಭಾಗವಾಗಿದೆ ಎಂದು ಹೇಳಿದ್ದಾರೆ.
ನಾವು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮತ್ತು ಭಾರತ್ ಪೆಟ್ರೋಲಿಯಂ (ಬಿಪಿ) ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಕೈದಿಗಳು ತಮ್ಮ ಅವಧಿಯನ್ನು ಪೂರೈಸಿ ಜೈಲಿನಿಂದ ಹೊರಬಂದಾಗ ಅವರು ಪೆಟ್ರೋಲ್ ಬಂಕ್ಗಳಲ್ಲಿ ಉದ್ಯೋಗವನ್ನು ಕಂಡುಕೊಳ್ಳಬಹುದು ಅಥವಾ ಸ್ವಂತವಾಗಿ ಬಂಕ್ಗಳನ್ನು ಪ್ರಾರಂಭಿಸಬಹುದು. ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ಕೆಲವು ರಾಜ್ಯಗಳಲ್ಲಿ ಇದೇ ರೀತಿಯ ಯೋಜನೆಗಳನ್ನು ಪ್ರಾರಂಭಿಸಲಾಗಿದೆ ನಾವು ಈ ಬಗ್ಗೆ ಕಾರ್ಯಸಾಧ್ಯತೆಯ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಈಗ ನಾವು ಕಾರಾಗೃಹಗಳಿಗೆ ಹತ್ತಿರವಿರುವ ಸೂಕ್ತ ಸ್ಥಳಗಳನ್ನು ಗುರುತಿಸುತ್ತಿದ್ದೇವೆ. ಎಲ್ಲಿ ಸಾಧ್ಯವಿದೆಯೋ ಅಲ್ಲೆಲ್ಲ ಅವರಿಗೆ ಅವಕಾಶ ಮಾಡಿ ಕೊಡಲಾಗುವುದು. ಇದೊಂದು ವಾಣಿಜ್ಯೋದ್ಯಮವಾಗಿದ್ದು, ಕೈದಿಗಳಿಗೆ ಕೆಲಸ ನೀಡುವ ಮೊದಲು ತರಬೇತಿ ನೀಡಲಾಗುವುದು. ಒಂದೇ ಪೆಟ್ರೋಲ್ ಬಂಕ್ನಲ್ಲಿ ಕನಿಷ್ಠ 45 ಕೈದಿಗಳಿಗೆ ಮೂರು ಪಾಳಿಯಲ್ಲಿ ಕೆಲಸ ಮಾಡುವ ಅವಕಾಶವನ್ನು ನೀಡಬಹುದು. ಪ್ರತಿ ಪಾಳಿಯಲ್ಲಿ 15 ಸದಸ್ಯರು ಕೆಲಸ ಮಾಡಬಹುದು ಎಂದು ಕಾರಾಗೃಹ ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಉತ್ತಮ ನಡತೆ ಹೊಂದಿರುವ ಕೈದಿಗಳನ್ನು ಆಯ್ಕೆ ಮಾಡಲಾಗುವುದು. ಇಂಧನ ಕೇಂದ್ರಗಳ ಪಕ್ಕದಲ್ಲಿ ಕಾರ್ವಾಶ್ ಮತ್ತು ಇತರ ಸೇವೆಗಳನ್ನೂ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಈ ಚಿಂತನೆ ಸಂಬಂಧ ಇತರ ಭದ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು. ಕಾರಾಗೃಹ ಇಲಾಖೆಯು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹ ಸೇರಿದಂತೆ ವಿವಿಧ ಕಾರಾಗೃಹಗಳು ಮತ್ತು ಮೈಸೂರು ಮತ್ತು ಬೆಳಗಾವಿ ಜೈಲುಗಳಲ್ಲಿ ಬೇಕರಿ ಘಟಕಗಳನ್ನು ನಡೆಸುತ್ತಿದೆ.

ಕೈದಿಗಳು ಬ್ರೆಡ್, ಬನ್, ಬಿಸ್ಕತ್ತುಗಳು, ಕೇಕ್ ಮತ್ತು ಕುಕೀಸ್ ಸೇರಿದಂತೆ ಬೇಕರಿ ಉತ್ಪನ್ನಗಳನ್ನು 'ಪರಿವರ್ತನಾ' ಎಂಬ ಬ್ರಾಂಡ್ ಹೆಸರಿನಲ್ಲಿ ಸಾಮಾನ್ಯ ಜನರಿಗೆ ಮಾರಾಟ ಮಾಡುತ್ತಾರೆ. ಕೈದಿಗಳು ಲಡ್ಡೂ, ಮೈಸೂರು ಪಾಕ್, ದಿಲ್ ಪಸಂದ್ ಮತ್ತು ಖಾರಾ ಬೋಂಡಿಯನ್ನೂ ಮಾಡುತ್ತಾರೆ. ಈ ಉತ್ಪನ್ನಗಳನ್ನು ಪೆಟ್ರೋಲ್ ಬಂಕ್ನ ಪಕ್ಕದಲ್ಲಿ ಮಾರಾಟ ಮಾಡಲು ನಾವು ಒಂದು ಔಟ್ಲೆಟ್ ಅನ್ನು ಸಹ ಹೊಂದಬಹುದು ಎಂದು ಅಧಿಕಾರಿ ಹೇಳಿದರು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications