ದಸರಾ ಹಬ್ಬ: ಖಾಸಗಿ ಬಸ್ಗಳಿಂದ ಪ್ರಯಾಣಿಕರಿಗೆ ಶಾಕ್: ಎಷ್ಟೇಷ್ಟು ಹಣ ವಸೂಲಿ? ಇಲ್ಲಿದೆ ಮಾಹಿತಿ
ಬೆಂಗಳೂರು, ಸೆಪ್ಟಂಬರ್ 25: ದಸರಾ ಹಬ್ಬ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮ ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಬಸ್ ದರ ಏರಿಕೆ ಬಿಸಿ ತಟ್ಟುತ್ತಿದೆ.
ಹೌದು, ಸೋಮವಾರಿಂದ ಒಂಭತ್ತು ದಿನ ವಿಜಯ ದಶಮಿ, ನವದುರ್ಗೆಯ, ಬನ್ನಿಮರ ಪೂಜೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ. ಅಕ್ಟೋಬರ್ 5ರಂದು ವಿಜಯದಶಮಿ ನಡೆಯಲಿದೆ. ಅಂದು ನಾಡಿನಾದ್ಯಂತ ಎಲ್ಲಿಲ್ಲದ ಸಂಭ್ರಮ ಸಡಗರ ತುಂಬಿರುತ್ತದೆ. ಈ ಹಿನ್ನೆಲೆ ಅಕ್ಟೋಬರ್ 1 ಶನಿವಾರ ಬರುವ ಹಿನ್ನೆಲೆಯಲ್ಲಿ ಅಂದಿನಿಂದಲೇ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ಗಳು ಹಬ್ಬದ ಸನ್ನಿವೇಶವನ್ನೆ ಬಂಡವಾಳ ಮಾಡಿಕೊಂಡಿದ್ದಾರೆ. ಬಸ್ ದರ ದುಪ್ಪಟ್ಟು ಬೆಲೆಗೆ ಏರಿಕೆ ಆಗಿದ್ದು, ಇದು ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಸಾರ್ವಜನಿಕ ಸಾರಿಗೆ (ಕೆಎಸ್ಆರ್ಟಿಸಿ) ಬಸ್ ಈಗಾಗಲೇ ಬುಕ್ಕಿಂಗ್ ಆದ ಕಾರಣ ಅನಿವಾರ್ಯವಾಗಿ ಹೆಚ್ಚಿನ ದುಡ್ಡು ಕೊಟ್ಟು ಪ್ರಯಾಣಿಕರು ಖಾಸಗಿ ಬಸ್ಸಿನಲ್ಲೇ ಪ್ರಯಾಣಿಸಬೇಕಾದ ಸ್ಥಿತಿ ಇದೆ.

ಬೆಂಗಳೂರಿನಿಂದ- ಧಾರವಾಡ, ಕಲಬುರಗಿ, ಬೆಳಗಾವಿ, ಮಂಗಳೂರು, ಉಡುಪಿ, ಬಳ್ಳಾರಿ ಸೇರಿದಂತೆ ಮುಂತಾದ ಊರುಗಳಿಗೆ ಹೋಗುವ ಖಾಸಗಿ ಬಸ್ಗಳ ದರ ದುಬಾರಿಯಾಗಿದೆ. ಸಾರಿಗೆ ಸಚಿವರೇ ಹಬ್ಬದ ಸನ್ನಿವೇಶದಲ್ಲಿ ಹೆಚ್ಚುವರಿ ಬಸ್ ಬಿಡಬೇಕು. ಜತೆಗೆ ಖಾಸಗಿ ಬಸ್ ಮಾಲೀಕರ ಸುಲಿಗೆಗೆ ಕಡಿವಾಣ ಹಾಕಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ಎಲ್ಲೆಲ್ಲಿಗೆ ಎಷ್ಟು ದುಬಾರಿ ದರ ನಿಗದಿ?
ಸಾಮಾನ್ಯ ದಿನಗಳಲ್ಲಿ ಇದ್ದ ದರಕ್ಕಿಂತ ಒಂದೂವರೆಯಿಂದ ಎರಡು ಪಟ್ಟು ಹಣ ಹೆಚ್ಚಿಗೆ ಮಾಡಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ಖಾಸಗಿ ಬಸ್ ಸಾಮಾನ್ಯ ದರ 700-740ರೂ. ಇತ್ತು, ಇದೀಗ ಹಬ್ಬದ ಸಂದರ್ಭ ಹಿನ್ನೆಲೆ ಆ ದರವನ್ನು 1400ನಿಂದ ರೂ.1800ವರೆಗೆ ಹೆಚ್ಚಿಸಲಾಗಿದೆ. ಅದೇ ರೀತಿ ಬೆಳಗಾವಿ ಕ್ರಮವಾಗಿ 800-900ರೂ,ನಿಂದ 1100-1300ರೂ. ಗೆ ಏರಿದೆ. ಧಾರವಾಡಕ್ಕೆ 600-650ರೂ. ಇದ್ದದ್ದು ಈಗ 900-1000ರೂ. ಆಗಿದೆ.

ಮಂಗಳೂರು ಹಳೆಯ 700-800ರೂ. ಇತ್ತು ಈಗ 1000-1300ರೂ.ಗೆ, ಹುಬ್ಬಳ್ಳಿ 750-800ರೂ. ನಿಂದ 1200-1500ರೂ.ಗೆ ಮತ್ತು ಕಲಬುರಗಿಗೆ 800-900ರೂ.ನಿಂದ ಇದೀಗ 1200-1550ರೂ.ವರೆಗೆ ಹೆಚ್ಚಿಸಲಾಗಿದೆ. ಇದು ಹಬ್ಬದ ಸನ್ನಿವೇಶಗಲ್ಲಿ ಊರಿಗೆ ತೆರಳುವವರ ಜೇಬಿಗೆ ಕತ್ತರಿ ಹಾಕುತ್ತಿದೆ. ಸರ್ಕಾರ ಕೂಡಲೇ ಹೆಚ್ಚುವರಿ ಬಸ್ ಬಿಡುವ ಜತೆಗೆ ಖಾಸಗಿ ಬಸ್ ಮಾಲೀಕರು ಸುಲಿಗೆಗೆ ಕಡಿವಾಣ ಹಾಕಿ, ಮುಂದೆ ರೀತಿ ಆಗದಂತೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ನವರಾತ್ರಿ 2022: ನವರಾತ್ರಿಯಲ್ಲಿ ಈ 5 ರಾಶಿಗಳ ಅದೃಷ್ಟವೇ ಬದಲಾಗಲಿದೆ
ಕೇವಲ ಭರವಸೆ ಬೇಡ ಕ್ರಮ ಕೈಗೊಳ್ಳಿ
ಹಬ್ಬದ ವೇಳೆ ಆಗೊಮ್ಮೆ ಈಗೊಮ್ಮೆ ಮಾತ್ರ ಸ್ಥಳಕ್ಕೆ ಬಂದು ಪರಿಶೀಲಿಸುವ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಕಳೆದ ಗಣೇಶ ಚತುರ್ಥಿ ಸಂದರ್ಭದಲ್ಲೂ ಹೀಗೆಯೇ ಆಗಿತ್ತು. ಆಗ ಸಾರಿಗೆ ಸಚಿವ ಶ್ರೀರಾಮುಲು ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುವ ಖಾಸಗಿ ಬಸ್ ಮಾಲೀಕರು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಸಚಿವರ ಮಾತು ಕೇವಲ ಭರವಸೆ ಆಗಿದ್ದರಿಂದಲೇ ಹಬ್ಬದ ಸನ್ನಿವೇಶಗಳಲ್ಲಿ ದುಪ್ಪಟ್ಟು ದರ ವಸೂಲಿ ಮುಂದುವರಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications