ದಸರಾ ಹಬ್ಬ: ಖಾಸಗಿ ಬಸ್ಗಳಿಂದ ಪ್ರಯಾಣಿಕರಿಗೆ ಶಾಕ್: ಎಷ್ಟೇಷ್ಟು ಹಣ ವಸೂಲಿ? ಇಲ್ಲಿದೆ ಮಾಹಿತಿ
ಬೆಂಗಳೂರು, ಸೆಪ್ಟಂಬರ್ 25: ದಸರಾ ಹಬ್ಬ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಿಂದ ತಮ್ಮ ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಬಸ್ ದರ ಏರಿಕೆ ಬಿಸಿ ತಟ್ಟುತ್ತಿದೆ.
ಹೌದು, ಸೋಮವಾರಿಂದ ಒಂಭತ್ತು ದಿನ ವಿಜಯ ದಶಮಿ, ನವದುರ್ಗೆಯ, ಬನ್ನಿಮರ ಪೂಜೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ. ಅಕ್ಟೋಬರ್ 5ರಂದು ವಿಜಯದಶಮಿ ನಡೆಯಲಿದೆ. ಅಂದು ನಾಡಿನಾದ್ಯಂತ ಎಲ್ಲಿಲ್ಲದ ಸಂಭ್ರಮ ಸಡಗರ ತುಂಬಿರುತ್ತದೆ. ಈ ಹಿನ್ನೆಲೆ ಅಕ್ಟೋಬರ್ 1 ಶನಿವಾರ ಬರುವ ಹಿನ್ನೆಲೆಯಲ್ಲಿ ಅಂದಿನಿಂದಲೇ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ಗಳು ಹಬ್ಬದ ಸನ್ನಿವೇಶವನ್ನೆ ಬಂಡವಾಳ ಮಾಡಿಕೊಂಡಿದ್ದಾರೆ. ಬಸ್ ದರ ದುಪ್ಪಟ್ಟು ಬೆಲೆಗೆ ಏರಿಕೆ ಆಗಿದ್ದು, ಇದು ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಸಾರ್ವಜನಿಕ ಸಾರಿಗೆ (ಕೆಎಸ್ಆರ್ಟಿಸಿ) ಬಸ್ ಈಗಾಗಲೇ ಬುಕ್ಕಿಂಗ್ ಆದ ಕಾರಣ ಅನಿವಾರ್ಯವಾಗಿ ಹೆಚ್ಚಿನ ದುಡ್ಡು ಕೊಟ್ಟು ಪ್ರಯಾಣಿಕರು ಖಾಸಗಿ ಬಸ್ಸಿನಲ್ಲೇ ಪ್ರಯಾಣಿಸಬೇಕಾದ ಸ್ಥಿತಿ ಇದೆ.

ಬೆಂಗಳೂರಿನಿಂದ- ಧಾರವಾಡ, ಕಲಬುರಗಿ, ಬೆಳಗಾವಿ, ಮಂಗಳೂರು, ಉಡುಪಿ, ಬಳ್ಳಾರಿ ಸೇರಿದಂತೆ ಮುಂತಾದ ಊರುಗಳಿಗೆ ಹೋಗುವ ಖಾಸಗಿ ಬಸ್ಗಳ ದರ ದುಬಾರಿಯಾಗಿದೆ. ಸಾರಿಗೆ ಸಚಿವರೇ ಹಬ್ಬದ ಸನ್ನಿವೇಶದಲ್ಲಿ ಹೆಚ್ಚುವರಿ ಬಸ್ ಬಿಡಬೇಕು. ಜತೆಗೆ ಖಾಸಗಿ ಬಸ್ ಮಾಲೀಕರ ಸುಲಿಗೆಗೆ ಕಡಿವಾಣ ಹಾಕಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ಎಲ್ಲೆಲ್ಲಿಗೆ ಎಷ್ಟು ದುಬಾರಿ ದರ ನಿಗದಿ?
ಸಾಮಾನ್ಯ ದಿನಗಳಲ್ಲಿ ಇದ್ದ ದರಕ್ಕಿಂತ ಒಂದೂವರೆಯಿಂದ ಎರಡು ಪಟ್ಟು ಹಣ ಹೆಚ್ಚಿಗೆ ಮಾಡಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ಖಾಸಗಿ ಬಸ್ ಸಾಮಾನ್ಯ ದರ 700-740ರೂ. ಇತ್ತು, ಇದೀಗ ಹಬ್ಬದ ಸಂದರ್ಭ ಹಿನ್ನೆಲೆ ಆ ದರವನ್ನು 1400ನಿಂದ ರೂ.1800ವರೆಗೆ ಹೆಚ್ಚಿಸಲಾಗಿದೆ. ಅದೇ ರೀತಿ ಬೆಳಗಾವಿ ಕ್ರಮವಾಗಿ 800-900ರೂ,ನಿಂದ 1100-1300ರೂ. ಗೆ ಏರಿದೆ. ಧಾರವಾಡಕ್ಕೆ 600-650ರೂ. ಇದ್ದದ್ದು ಈಗ 900-1000ರೂ. ಆಗಿದೆ.

ಮಂಗಳೂರು ಹಳೆಯ 700-800ರೂ. ಇತ್ತು ಈಗ 1000-1300ರೂ.ಗೆ, ಹುಬ್ಬಳ್ಳಿ 750-800ರೂ. ನಿಂದ 1200-1500ರೂ.ಗೆ ಮತ್ತು ಕಲಬುರಗಿಗೆ 800-900ರೂ.ನಿಂದ ಇದೀಗ 1200-1550ರೂ.ವರೆಗೆ ಹೆಚ್ಚಿಸಲಾಗಿದೆ. ಇದು ಹಬ್ಬದ ಸನ್ನಿವೇಶಗಲ್ಲಿ ಊರಿಗೆ ತೆರಳುವವರ ಜೇಬಿಗೆ ಕತ್ತರಿ ಹಾಕುತ್ತಿದೆ. ಸರ್ಕಾರ ಕೂಡಲೇ ಹೆಚ್ಚುವರಿ ಬಸ್ ಬಿಡುವ ಜತೆಗೆ ಖಾಸಗಿ ಬಸ್ ಮಾಲೀಕರು ಸುಲಿಗೆಗೆ ಕಡಿವಾಣ ಹಾಕಿ, ಮುಂದೆ ರೀತಿ ಆಗದಂತೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.
ನವರಾತ್ರಿ 2022: ನವರಾತ್ರಿಯಲ್ಲಿ ಈ 5 ರಾಶಿಗಳ ಅದೃಷ್ಟವೇ ಬದಲಾಗಲಿದೆ
ಕೇವಲ ಭರವಸೆ ಬೇಡ ಕ್ರಮ ಕೈಗೊಳ್ಳಿ
ಹಬ್ಬದ ವೇಳೆ ಆಗೊಮ್ಮೆ ಈಗೊಮ್ಮೆ ಮಾತ್ರ ಸ್ಥಳಕ್ಕೆ ಬಂದು ಪರಿಶೀಲಿಸುವ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಕಳೆದ ಗಣೇಶ ಚತುರ್ಥಿ ಸಂದರ್ಭದಲ್ಲೂ ಹೀಗೆಯೇ ಆಗಿತ್ತು. ಆಗ ಸಾರಿಗೆ ಸಚಿವ ಶ್ರೀರಾಮುಲು ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುವ ಖಾಸಗಿ ಬಸ್ ಮಾಲೀಕರು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು. ಸಚಿವರ ಮಾತು ಕೇವಲ ಭರವಸೆ ಆಗಿದ್ದರಿಂದಲೇ ಹಬ್ಬದ ಸನ್ನಿವೇಶಗಳಲ್ಲಿ ದುಪ್ಪಟ್ಟು ದರ ವಸೂಲಿ ಮುಂದುವರಿದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications