ಬೆಂಗಳೂರು ಉದ್ಯೋಗಿಯ ಪ್ರಾಣ ತೆಗೆದ ಬೈಕ್ ವ್ಹೀಲಿಂಗ್
ಚಿಕ್ಕಮಗಳೂರು,ಮಾರ್ಚ್,28: ಕೆಮ್ಮಣ್ಣು ಗುಂಡಿಗೆ ತೆರಳಿದ್ದ ಮೂವತ್ತು ಜನರ ಗುಂಪಿನಲ್ಲಿ ಇಬ್ಬರು ಯುವಕರು ವ್ಹೀಲಿಂಗ್ ಮಾಡಲು ಹೋಗಿ ಅದರಲ್ಲಿ ಒಬ್ಬ ಪ್ರಾಣ ಕಳೆದುಕೊಂಡರೆ, ಮತ್ತೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹರ್ಷಿತ್ (25) ವ್ಹೀಲಿಂಗ್ ಮಾಡಲು ಹೋಗಿ ಸಾವನ್ನಪ್ಪಿದರೆ, ಈತನ ಸ್ನೇಹಿತ ಲಿಖಿತ್ (24) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.[ಕೆಮ್ಮಣ್ಣುಗುಂಡಿ - ರಾಜವೈಭವದ ಧಾಮ]

ಘಟನೆಯ ವಿವರ:
ಹರ್ಷಿತ್, ಲಿಖಿತ್ ಸೇರಿದಂತೆ ಒಟ್ಟು 30 ಜನರ ತಂಡ ತಮ್ಮ ರಜೆ ದಿನಗಳನ್ನು ಕಳೆಯಲು ಚಿಕ್ಕಮಗಳೂರು ಸಮೀಪದ ಕೆಮ್ಮಣ್ಣುಗುಂಡಿಗೆ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಮರಳುತ್ತಿದ್ದಾಗ ಬೈಕ್ ಓಡಿಸುತ್ತಿದ್ದ ಹರ್ಷಿತ್ ವ್ಹೀಲಿಂಗ್ ಮಾಡುವ ಪ್ರಯತ್ನ ಪಟ್ಟಿದ್ದಾನೆ.
ಆ ಸಂದರ್ಭದಲ್ಲಿ ಬೈಕಿನ ಹಿಡಿತ ತಪ್ಪಿದ ಪರಿಣಾಮ ಆತನ ಬೈಕ್ 10 ಅಡಿ ಎತ್ತರದಿಂದ ಬಿದ್ದು ಮರಕ್ಕೆ ಡಿಕ್ಕಿ ಹೊಡೆದಿದೆ. ಆಗ ಬೈಕ್ ಮರಕ್ಕೆ ಸಿಕ್ಕಿಹಾಕಿಕೊಂಡಿದ್ದು ಹರ್ಷಿತ್ ಮತ್ತು ಲಿಖಿತ್ ಕೆಳಕ್ಕೆ ಬಿದ್ದಿದ್ದಾರೆ. ಹರ್ಷಿತ್ ಸ್ತಳದಲ್ಲಿಯೇ ಮೃತಪಟ್ಟಿದ್ದು, ಲಿಖಿತ್ ಪ್ರಾಣಪಾಯದಿಂದ ಪಾರಾಗಿದ್ದಾನೆ.[ನೀರಿನಲ್ಲಿ ಮೋಜು, ಮಸ್ತಿ: ಪ್ರಾಣತೆತ್ತ ನಾಲ್ವರು ವೈದ್ಯರು]
ಮೂವತ್ತು ಜನರ ತಂಡ ಅಜಿತ್ ಭಾರದ್ವಾಜ್ ಏರ್ಪಡಿಸಿದ್ದ ಬೈಕ್ ಪ್ರವಾಸದಲ್ಲಿ ಭಾಗವಹಿಸಲು ಆಗಮಿಸಿದ್ದರು. ಆ ವೇಳೆ ಈ ದುರ್ಗಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications