ಆರ್ಟಿಇ ಮಕ್ಕಳಿಗೆ ಉಚಿತ ಸಮವಸ್ತ್ರ, ಪುಸ್ತಕ ಕೊಡಲ್ಲ ಎಂದ ಖಾಸಗಿ ಶಾಲೆಗಳು
ಬೆಂಗಳೂರು, ಏಪ್ರಿಲ್ 26: ಶಿಕ್ಷಣ ಹಕ್ಕು ಕಾಯ್ದೆ ಅಡಿ ಖಾಸಗಿ ಶಾಲೆಗಳಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನು ಸಂಬಂಧಪಟ್ಟ ಶಾಲೆಗಳೇ ಭರಿಸಬೇಕು ಎಂಬ ಸರ್ಕಾರದ ಆದೇಶವನ್ನು ಖಾಸಗಿ ಶಾಲೆಗಳು ತಳ್ಳಿ ಹಾಕಿವೆ. ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಖಾಸಗಿ ಶಾಲೆಗಳು ಭರಿಸಲು ಸಾಧ್ಯವಿಲ್ಲ ಎಂದು ತಿಳಿಸಿವೆ.
ಕರ್ನಾಟಕ ಹೈಕೋರ್ಟ್ ಆರ್ಟಿಇ ಮತ್ತು ಸಾಮಾನ್ಯ ವಿದ್ಯಾರ್ಥಿಗಳ ನಡುವೆ ಯಾವುದೇ ರೀತಿಯಲ್ಲಿ ತಾರತಮ್ಯ ನೀತಿ ಅನುಸರಿಸದೆ ಸಮಾನವಾಗಿ ಕಾಣಬೇಕು ಎಂದು ಹೇಳಿದೆಯೇ ಹೊರತು ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಬೇಕು ಎಂದು ಸೂಚಿಸಿಲ್ಲ. ಒಂದು ವೇಳೆ ಆರ್ ಟಿಇ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಭರಿಸಿದರೆ ತಾರತಮ್ಯ ನೀತಿ ಅನುಸರಿಸಿದಂತಾಗುತ್ತದೆ ಎಂದು ಹೇಳಿದೆ.
ಕಳೆದ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಆರ್ಟಿಇ ಮರುಪಾವತಿ ವೆಚ್ಚವು ಸಮವಸ್ತ್ರ ಮತ್ತು ಪಠ್ಯಪುಸ್ತಕಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ. ಒಂದು ವೇಳೆ ಖಾಸಗಿ ಶಾಲೆಗಳ ವತಿಯಿಂದಲೇ ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇತರೆ ಕಲಿಕಾ ಪರಿಕರಗಳನ್ನು ನೀಡುತ್ತಿದ್ದರೆ, ಆರ್ಟಿಇ ಮಕ್ಕಳಿಗೂ ನೀಡಬೇಕು.

ನಿಗದಿತ ಅಂಗಡಿಗಳಲ್ಲಿಯೇ ಖರೀದಿ ಮಾಡಬೇಕು ಎಂದು ಒತ್ತಡ ಹೇರುವಂತಿಲ್ಲವೆಂದು ಸಹ ಸೂಚನೆ ನೀಡಿರುವುದರಿಂದ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಪತ್ರ ಬರೆದಿದೆ.
ರಾಜ್ಯ ಪಠ್ಯಕ್ರಮ ಬೋಧಿಸುವ ಶಾಲೆಗಳಿಗೆ ಮಾತ್ರ ಕರ್ನಾಟಕ ಪಠ್ಯಪುಸ್ತಕ ಮಾರಾಟ ಸಂಘದಿಂದ ಪಠ್ಯಪುಸ್ತಕಗಳನ್ನು ನೀಡಲಾಗುತ್ತಿದೆ. ಪೂರ್ವ ಪ್ರಾಥಮಿಕ ಶಾಲೆಗಳಿಗೆ ಯಾವುದೇ ರೀತಿಯ ಪಠ್ಯಕ್ರಮಗಳನ್ನು ನಿಗದಿಪಡಿಸಿಲ್ಲ. ಇಂತಹ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಎಲ್ಲಿಂದ ಮತ್ತು ಹೇಗೆ ಪಡೆಯಬೇಕು ಎಂಬ ಗೊಂದಲ ಸೃಷ್ಟಿಸಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications