ಬಿಜೆಪಿ ಅವಧಿಯಲ್ಲೂ ಕೊಲೆಗಳಾಗಿದ್ದವು, ನೆನಪಿಸಿಕೊಳ್ಳಲಿ: ಅಂಕಿ ಅಂಶಗಳನ್ನ ಬಿಚ್ಚಿಟ್ಟ ಖರ್ಗೆ
ಕಲಬುರ್ಗಿ, ಮಾರ್ಚ್ 12: ಕಲಬುರ್ಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಪ್ರಿಯಾಂಕ್ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ' ಎಂದು ಜಾಧವ ಹೇಳಿದ್ದಾರೆ, ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದರು ಯಾರು ? ಎಂದು ತಿರುಗೇಟು ನೀಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಪುನರುಚ್ಚರಿಸಿದ ಸಚಿವರು, ಗುಜರಾತ್ ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್ ಗಳಾಗಿವೆ ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು ಅದನ್ನು ಕಾನೂನು ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ ಎಂದು ಮಾರುತ್ತರ ನೀಡಿದರು.
ಚಿತ್ತಾಪುರದ ಅಪರಂಜಿ ಈಗ ಎಲ್ಲಿ ? ಎಂದು ಜಾಧವ್ ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್ ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.
ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್,ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್ ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.
ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ ಎಂದರು.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ ಎಂದರು. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.
ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮಪಂಚಾಯತ ಚುನಾವಣೆ ಗೆದ್ದಿಲ್ಲ ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದರು.
ಆರ್ ಅಶೋಕ್ ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ ಎಂದರು. ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅವರಿಗೆ ತಲೆ ಕೆಟ್ಟಿದೆ, ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದರು.
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications