ರಾಷ್ಟ್ರ ಹಸಿವಿನಲ್ಲಿ 113 ನೇ ಸ್ಥಾನ. ಭ್ರಷ್ಟಾಚಾರದಲ್ಲಿ 98 ನೇ ಸ್ಥಾನ; ಬಜೆಟ್ ಮೇಲೆ ನಿರೀಕ್ಷೆ ಶೂನ್ಯ: ಪ್ರಿಯಾಂಕ್ ಖರ್ಗೆ
ಬೆಂಗಳೂರು, ಫೆಬ್ರವರಿ 01: ರಾಷ್ಟ್ರ ಬಡತನ ರೇಖೆಯಲ್ಲಿ 111 ಸ್ಥಾನದಲ್ಲಿದೆ. ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98 ನೇ ಸ್ಥಾನದಲ್ಲಿದೆ. ಹೀಗಾಗಿ ಬಜೆಟ್ ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಕುರಿತು ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆಮಾತನಾಡಿದ ಅವರು, ಕೇಂದ್ರ ಬಜೆಟ್ ಬಗ್ಗೆ ನಮ್ಮ ನಿರೀಕ್ಷೆ ಶೂನ್ಯ. ಕೇಂದ್ರದಿಂದ ಉದ್ಯೋಗ ಸೃಷ್ಟಿಆಗಿದ್ಯಾ? 10 ಸಾವಿರ ಜನ ಇಸ್ರೇಲ್ ನಲ್ಲಿಕೆಲಸ ಮಾಡ್ತಿದ್ದಾರೆ ಯಾಕೆ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಜೆಟ್ಬಗ್ಗೆ ನಮಗೆ ಯಾವುದೇ ನಿರೀಕ್ಷೆ ಇಲ್ಲ. ಬಿಜೆಪಿಗರು ದೊಡ್ಡ ದೊಡ್ಡ ಮಾತು ಹೇಳುವುದಷ್ಟೇ.ಬಡವರಿಗೆ ಯಾವ ಯೋಜನೆ ತಂದಿದ್ದಾರೆ. ಫೈನಾನ್ಸ್ ಮಿನಿಸ್ಟರ್ ಕನ್ನಡದಿಂದ ಹೋದವರು, ಆದರೆ ಕರ್ನಾಟಕಕ್ಕೆ ಅವರ ಕೊಡುಗೆಯೇನು? ಎಂದು ಪ್ರಶ್ನಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ ಆಗ್ತಾನೇ ಇದೆ. ಜಿಎಸ್ ಟಿ ಮರುಪಾವತಿಯಲ್ಲಿ ಅನ್ಯಾಯವಾಗಿದೆ. ಕಲಬುರಗಿಯಲ್ಲಿ ಇಂಡಸ್ಟ್ರೀಸ್ ಮಾಡ್ತೇವೆ ಅಂದ್ರು ಆಯ್ತಾ? ಮೋದಿ ಗ್ಯಾರೆಂಟಿಯಲ್ಲಿ 50% ಕನ್ನಡಿಗರ ಬೆವರಿದೆ. ಜಲಜೀವನ್ ಮಿಷನ್ ನಲ್ಲಿ 50% ಬೆವರಿದೆ ಎಂದರು.












Click it and Unblock the Notifications