ಧಮ್ಮು, ತಾಕತ್ತು ಇದ್ರೆ ಕಲಬುರಗಿಗೆ ಬರಲಿ: ಸಿಎಂ ಬೊಮ್ಮಾಯಿಗೆ ಪ್ರಿಯಾಂಕ್ ಖರ್ಗೆ ಸವಾಲು
ಕಲಬುರಗಿ,ಡಿಸೆಂಬರ್ 14: ಮಾತು ಎತ್ತಿದರೆ ಡಬಲ್ ಇಂಜಿನ್ ಸರ್ಕಾರ ಅಂತಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಾಕತ್ತು, ಧಮ್ಮು ಬಗ್ಗೆ ಮಾತಾಡ್ತಾರೆ. ನಮ್ಮ ಸಿಎಂ ಬೊಮ್ಮಾಯಿಗೆ ನಿಜವಾಗಿಯೂ ತಾಕತ್ತು, ಧಮ್ಮ ಇದ್ದರೆ ಕಲಬುರಗಿಗೆ ಬರಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೈತರ ಆದಾಯ ದುಪ್ಪಟ್ಟು ಮಾಡೋದಾಗಿ ಭರವಸೆ ನೀಡಿದ್ರು. ಆದ್ರೆ ರೈತರ ಆದಾಯ ಮಾತ್ರ ದುಪ್ಪಟ್ಟಾಗಿಲ್ಲವೆಂದು ಕಿಡಿಕಾರಿದ್ರು. ರೈತರಿಗೆ ಬೆಳೆ ಹಾನಿ ಪರಿಹಾರ ನೀಡದಿರೋದನ್ನು ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ನೆಟೆ ರೋಗದಿಂದ ಒಣಗಿರುವ ತೊಗರಿಯನ್ನು ಟ್ರಾಕ್ಟರ್ನಲ್ಲಿ ಹಾಕಿಕೊಂಡು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಕುರಿತು ಬುಧವಾರ ಮಾತನಾಡಿದ ಅವರು, ಕಲಬುರ್ಗಿಗೆ ಬಂದು ಇಲ್ಲಿನ ನಮ್ಮ ರೈತರನ್ನು ಎದುರಿಸಲಿ, ಬೆಳೆ ಹಾನಿ ಸಮೀಕ್ಷೆ ಮಾಡಿಸಲಿ ಎಂದರು. ಇನ್ನೂ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಡಾ. ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸುವ ಮೂಲಕ ರೈತರ ಆದಾಯವನ್ನು ದುಪ್ಟಟ್ಟು ಮಾಡುವುದಾಗಿ ಹೇಳಿತ್ತು. ಆದರೆ ಇಂದಿಗೂ ರೈತರ ಆದಾಯ ದುಪ್ಪಟ್ಟು ಆಗಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳು ಮಾತ್ರ ದುಪ್ಪಟ್ಟಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.
ಕಲಬುರಗಿ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಠಿಯಿಂದ ಹಾಗೂ ತೊಗರಿ ಬೆಳೆಗೆ ನೆಟೆ ರೋಗ ಬಂದಿರುವುದರಿಂದ ಈ ಬಾರಿ ಬಿತ್ತನೆ ಮಾಡಿರುವ ಶೇ. 70ರಷ್ಟು ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ. ಈ ಕುರಿತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಹಾನಿಯಾದ ತೊಗರಿ ಬೆಳೆಯ ಕುರಿತು ಸಮೀಕ್ಷೆ ನಡೆಸಿ, ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಜಿಲ್ಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ ಜಿಲ್ಲೆಯ ಬಿಜೆಪಿ ನಾಯಕರು ಮಾತ್ರ ಇಲ್ಲಿಯವರೆಗೆ ಜಿಲ್ಲೆಯ ರೈತರ ಸಂಕಷ್ಟದ ಕುರಿತು ಧ್ವನಿ ಎತ್ತಿಲ್ಲ ಎಂದು ಕಿಡಿಕಾರಿದರು. ನಮ್ಮ ಜಿಲ್ಲೆಯ ಸ್ಥಳೀಯ ನಾಯಕರಿಗೆ ಮಂತ್ರಿಸ್ಥಾನವನ್ನು ತಗೋಳೋದಿಕ್ಕೆ ಆಗಲಿಲ್ಲ. ರೈತರ ಪರವಾಗಿ ಆದರೂ ಧ್ವನಿ ಎತ್ತಿ. ಅದು ಬಿಟ್ಟು ಕೆರೆ ಒತ್ತುವರಿ ಹೇಗೆ ಮಾಡೋದು, ೪೦ ಪರ್ಸೆಂಟ್ ಹ್ಯಾಂಗ್ ಹೊಡೆಯೋದು, ರೌಡಿಗಳನ್ನು ಬೆಳಸೋದು, ಬೆಟ್ಟಿಂಗ್ ದಂಧೆ ಮಾಡಿಸೋದನ್ನು ಮಾಡ್ತಿದ್ದಾರೆ ಎಂದು ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದ್ರು.
ಇನ್ನು ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಅತಿವೃಷ್ಠಿಯಿಂದ ಹಾಗೂ ನೆಟೆ ರೋಗದಿಂದ ಸಂಪೂರ್ಣ ಹಾಳಾಗಿದೆ. ಆದರೆ ಈ ಕುರಿತು ರಾಜ್ಯ ಸರ್ಕಾರ ಇಲ್ಲಿಯವರಗೆ ಯಾವುದೇ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಅಲ್ಲದೆ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ನೀಡದೆ ಇರುವುದನ್ನು ವಿರೋಧಿಸಿ ಕಲಬುರಗಿಯಲ್ಲಿಂದು ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ನೆಟೆ ರೋಗದಿಂದ ಒಣಗಿರುವ ತೊಗರಿಯನ್ನು ಟ್ರಾಕ್ಟರ್ನಲ್ಲಿ ಹಾಕಿಕೊಂಡು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕಲಬುರಗಿಯ ಕಾಂಗ್ರೆಸ್ ಕಚೇರಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರ ನೆರವಿಗೆ ಬಾರದ ಈ ಸರ್ಕಾರ ಸತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಮೀಕ್ಷೆ ನಡೆಸಿ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications