ಯುಆರ್ ಎ ನಿಧನ:ಅತೃಪ್ತ ಆತ್ಮಗಳಿಂದ ಸಂಭ್ರಮಾಚರಣೆ!
ಬೆಂಗಳೂರು, ಆ 23: ಶುಕ್ರವಾರ (ಆ 22) ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಅಸ್ತಂಗತರಾದ ಕನ್ನಡದ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಯು.ಆರ್ ಅನಂತಮೂರ್ತಿ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆಯೇ ಕೆಲ ಸಮಾಜಘಾತುಕ ಶಕ್ತಿಗಳು ಪಟಾಕಿ ಹೊಡೆದು ಸಂಭ್ರಮಿಸಿದ ಘಟನೆ ವರದಿಯಾಗಿದೆ.
ಮಂಗಳೂರಿನ ಕದ್ರಿ ಸರ್ಕಲ್, ಮೂಡಿಗೆರೆಯ ಲಯನ್ಸ್ ಸರ್ಕಲ್ ಮತ್ತು ಚಿಕ್ಕಮಗಳೂರಿನಲ್ಲಿ ಕೆಲವು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಿದ ಘಟನೆಗೆ ರಾಜ್ಯಾದ್ಯಂತ ಭಾರೀ ಟೀಕೆಯ ಮಹಾಪೂರವೇ ಹರಿದುಬರುತ್ತಿದೆ.
ಸಾವಿನ ಸಮಯದಲ್ಲೂ ಸಂಭ್ರಮಾಚರಣೆ ನಡೆಸಿದ ಸುದ್ದಿ ಹೊರ ಬೀಳುತ್ತಿದ್ದಂತೆಯೇ, ಪಟಾಕಿ ಸಿಡಿಸಿದ ಅತೃಪ್ತ ಆತ್ಮಗಳಿಗೂ ನಮಗೂ ಸಂಬಂಧವಿಲ್ಲ. ಅವರು ನಮ್ಮ ಕಾರ್ಯಕರ್ತರಲ್ಲ. ಬಿಜೆಪಿ ಈ ಘಟನೆಯನ್ನೂ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ಪ್ರಕಾಶ್ ಹೇಳಿಕೆ ನೀಡಿದ್ದಾರೆ. (ಸಾಹಿತಿ ಯು.ಆರ್ ಅನಂತಮೂರ್ತಿ ಅಸ್ತಂಗತ)
ಹಿಂದೂಪರ ಸಂಘಟನೆಯ ಕಾರ್ಯಕರ್ತರು ಅನಂತಮೂರ್ತಿ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆಯೇ, ಪಟಾಕಿ ಸಿಡಿಸಿ ಅವರ ವಿರುದ್ದ ಘೋಷಣೆ ಕೂಗಿ ವಿಕೃತ ಆನಂದ ಅನುಭವಿಸಿದ್ದಾರೆ.
ನರೇಂದ್ರ ಮೋದಿ ಪ್ರಧಾನಿಯಾಗಿರುವ ಭಾರತದಲ್ಲಿ ನಾನು ಇರುವುದಿಲ್ಲ ಎಂದು ಅನಂತಮೂರ್ತಿ ಈ ಹಿಂದೆ ಹೇಳಿಕೆ ನೀಡಿದ್ದರು. ಅದಕ್ಕೆ ಕೆಲವು ಸಂಘಟನೆಗಳು ಅನಂತಮೂರ್ತಿಯವರಿಗೆ ಪಾಕಿಸ್ತಾನದ ವಿಮಾನ ಟಿಕೆಟನ್ನು ಕಳುಹಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.
|
ಪ್ರಲ್ಹಾದ್ ಜೋಷಿ
ಮಾಧ್ಯಮದ ಮೂಲಕ ಈ ಘಟನೆಯ ಬಗ್ಗೆ ತಿಳಿದುಕೊಂಡೆ. ಹುಬ್ಬಳ್ಳಿಯಲ್ಲಿ ಹಾಸ್ಯಸಂಜೆ ಕಾರ್ಯಕ್ರಮ ಆಯೋಜಿಸಿದ್ದೆವು. ಯುಆರ್ಎ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕಾರ್ಯಕ್ರಮ ರದ್ದುಗೊಳಿಸಿದ್ದೇವೆ. ಸಂಭ್ರಮಾಚಾರಣೆಯ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಖ್ಯಾತ ಸಾಹಿತಿಯೊಬ್ಬರು ಅಸ್ತಂಗತರಾದಾಗ ಸಂಭ್ರಮಿಸುವುದು ಹಿಂದೂ, ಬಿಜೆಪಿಯ ಸಂಸ್ಕೃತಿಯಲ್ಲ. ಪಟಾಕಿ ಸಿಡಿಸಿದವರು ಪಕ್ಷದ ಕಾರ್ಯಕರ್ತರು ಎಂದಾದರೆ ಅವರಿಗೆ ಸೂಕ್ತ ತಿಳುವಳಿಕೆ ನೀಡುತ್ತೇನೆ.

ದೇವೇಗೌಡ ಖಂಡನೆ
ಅನಂತಮೂರ್ತಿ ನಿಧನಕ್ಕೆ ಸಂತಸ ವ್ಯಕ್ತಪಡಿಸಿ ಸಂಭ್ರಮಾಚಾರಣೆ ಮಾಡಿದ್ದಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಆರ್ಎ ನಿಧನದ ನಂತರವೂ ಅವರ ಹೋರಾಟ ಮುಂದುವರಿಯಲಿದೆ, ಎಂದು ಗೌಡ್ರು ಹೇಳಿದ್ದಾರೆ.

ವೈಎಸ್ ವಿ ದತ್ತ
ಸಾವಿನ ಮನಯಲ್ಲೂ ಕೆಲವು ಸಂಘಟನೆಗಳು ಪಟಾಕಿ ಹೊಡೆದು ಸಂಭ್ರಮಿಸಿದ ಘಟನೆ ಮನಸ್ಸಿಗೆ ನೋವು ತಂದಿದೆ. ಇದು ಆ ಸಂಘಟನೆಯ ಚಾರಿತ್ರ್ಯತೆಯನ್ನು ಪರೀಕ್ಷಿಸುವಂತಾಗಿದೆ. ಹುಟ್ಟು, ಸಾವು ದೈವೇಚ್ಚೆ ಎನ್ನುವುದನ್ನು ಈ ಸಮಾಜಘಾತುಕ ಸಂಘಟನೆಗಳು ಅರಿಯಲಿ - ಜೆಡಿಎಸ್ ಮುಖಂಡ ವೈಎಸ್ವಿ ದತ್ತ.
|
ನಾರಾಯಣಗೌಡ
ಯುಆರ್ಎ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅಂತಿಮ ನಮನ ಸಲ್ಲಿಸಿದ ಕರವೇ ಅಧ್ಯಕ್ಷ ನಾರಾಯಣಗೌಡ, ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಭ್ರಮಾಚರಣೆ ನಡೆಸಿದವರ ಬಗ್ಗೆ ನನಗೆ ಹೇಸಿಗೆ ಎನಿಸುತ್ತಿದೆ.

ವಿ ಎಸ್ ಉಗ್ರಪ್ಪ
ಸಾಹಿತ್ಯ ಲೋಕಕ್ಕೆ ಅನಂತಮೂರ್ತಿಯವರ ಸೇವೆ ಅಪಾರ. ರಾಜ್ಯವೇ ಶೋಕದಲ್ಲಿ ಇರುವಾಗ ಕೆಲವು ಸಮಾಜಘಾತುಕ ಶಕ್ತಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಈ ರಾಜ್ಯದ ಪ್ರಜೆಯಾಗಿ ತುಂಬಾ ನೋವಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications