ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಕರವೇ ನಾರಾಯಣಗೌಡ, ಪಕ್ಷ ಯಾವ್ದು ಗೊತ್ತಾ?
ಕನ್ನಡಿಗ, ಕರ್ನಾಟಕ ಹಾಗೂ ಕನ್ನಡಪರ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಮಹಾಶಿವರಾತ್ರಿ ದಿನವೇ ಮಹತ್ವದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಈವರೆಗೆ ಕನ್ನಡಪರ ಹೋರಾಟಗಾರರಾಗಿದ್ದ ಅವರು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಸುಳಿವು ನೀಡಿದ್ದಾರೆ. ಇದು ಸದ್ಯ ರಾಜ್ಯದಲ್ಲಿ ಅಚ್ಚರಿ ಮೂಡಿಸಿದೆ.
ನಿನ್ನೆ ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಬಂದಿರುವ ಅವರು ಈ ವಿಚಾರದಲ್ಲಿ ರಾಜಕೀಯ ನಾಯಕರು ಹಾಗೂ ಪಕ್ಷಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಬೇಸರದಿಂದ ಅವರು ರಾಜಕೀಯದತ್ತ ಮುಖ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಟಿ.ಎ.ನಾರಾಯಣಗೌಡರು ಏನು ಹೇಳಿದ್ದಾರೆ ಮುಂದೆ ಓದಿ..

ʼಇವತ್ತು ಮಹಾಶಿವರಾತ್ರಿ. ಶಿವ ನನ್ನ ಇಷ್ಟದೈವ. ಶಿವ ತನ್ನನ್ನು ನಂಬಿದವರನ್ನು ಎಂದೂ ಕೈಬಿಟ್ಟವನಲ್ಲ. ಅವನು ತನ್ನ ಇಷ್ಟದಂತೆ ಬದುಕಿದವನು. ಅವನಲ್ಲಿ ಕಪಟವಿಲ್ಲ, ಕುತಂತ್ರವಿಲ್ಲ. ಹೀಗಾಗಿಯೇ ಶಿವ ನನಗೆ ಇಷ್ಟ ಎಂದು ಹೇಳಿದ್ದಾರೆ. ಆದರೆ ಈ ವರ್ಷ ಶಿವರಾತ್ರಿಯ ಸಡಗರಕ್ಕೆ ನನ್ನ ಮನಸ್ಸು ತೆರೆದುಕೊಳ್ಳುತ್ತಿಲ್ಲ. ನಿನ್ನೆ ಬೆಳಗಾವಿಯ ಪ್ರತಿಭಟನೆ ಮುಗಿಸಿ ವಾಪಸ್ ಬೆಂಗಳೂರಿಗೆ ಬಂದೆ. ತಡರಾತ್ರಿಯವರೆಗೆ ಒಂದೇ ಸಮನೆ ದೂರವಾಣಿ ಕರೆಗಳು, ವಾಟ್ಸಾಪ್ ಸಂದೇಶಗಳು. ಬಹುತೇಕ ಕರೆ, ಸಂದೇಶಗಳು ಕೆಪಿಎಸ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳದ್ದುʼ ಎಂದು ಹೇಳಿದ್ದಾರೆ.
ʼನಾರಾಯಣಗೌಡ್ರೇ ನಮಗೆ ನ್ಯಾಯ ಕೊಡಿಸಿ, ಯಾರನ್ನೂ ನಂಬುವ ಸ್ಥಿತಿಯಲ್ಲಿ ನಾವಿಲ್ಲ. ನೀವೇ ನಮಗೆ ದಿಕ್ಕು. ಈಗ ನಮಗೆ ಅನ್ಯಾಯವಾದರೆ ಬದುಕಿಯೂ ಪ್ರಯೋಜನವಿಲ್ಲ, ಸತ್ತೇಹೋಗುತ್ತೇವೆ ಎಂದು ಎಲ್ಲರೂ ಇದೇ ಧಾಟಿಯಲ್ಲೇ ಮಾತನಾಡಿದರು. ಅವರ ಮನೆಗಳ ಸಮಸ್ಯೆಗಳು, ಸಂಕಟಗಳನ್ನು ಹೇಳಿಕೊಳ್ಳುತ್ತಾರೆ. ಎಲ್ಲ ಬಡ ಕುಟುಂಬಗಳ ಮಕ್ಕಳು. ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಮಕ್ಕಳು. ಈ ನಡುವೆ ಕನ್ನಡ ಮಾಧ್ಯಮದಲ್ಲಿ ಓದುವವರು ಅವರೇ ತಾನೇ?ʼ ಎಂದಿದ್ದಾರೆ.

ಕನ್ನಡ ಕೇಂದ್ರಿತ ಪ್ರಾದೇಶಿಕ ಪಕ್ಷ ಬೇಕು
ʼನಾನು ಯಾವ ಅಧಿಕಾರ ಸ್ಥಾನದಲ್ಲೂ ಇಲ್ಲ. ನ್ಯಾಯಕ್ಕಾಗಿ ಈ ಮಕ್ಕಳೊಂದಿಗೆ ಸೇರಿ ಬಡಿದಾಡಬಹುದು ಅಷ್ಟೇ ಎಂದು ಹೇಳಿದೆ. ಅದಕ್ಕೆ ಅವರು ಗೌಡ್ರೇ ನೀವೇ ಯಾಕೆ ಒಂದು ಪ್ರಾದೇಶಿಕ ಪಕ್ಷ ಸ್ಥಾಪಿಸಬಾರದು? ನಾವೆಲ್ಲ ನಿಮ್ಮ ಜೊತೆ ಇರುತ್ತೇವೆ ಎಂದು ಹೇಳುತ್ತಿದ್ದಾರೆ. ಪಕ್ಷ ಸ್ಥಾಪಿಸುವುದು, ಚುನಾವಣೆಯಲ್ಲಿ ಸೆಣೆಸುವುದು ಅಷ್ಟು ಸುಲಭದ ವಿಷಯವಲ್ಲ. ಅದಕ್ಕೆ ಕಾಲವೂ ಪಕ್ವವಾಗಿಲ್ಲ. ಕನ್ನಡ ಜನತೆಗೆ ಕನ್ನಡ ಕೇಂದ್ರಿತ ರಾಜಕೀಯ ಪಕ್ಷವೊಂದರ ಅಗತ್ಯವಿದೆ ಎಂಬುದು ಮನವರಿಕೆ ಆಗಬೇಕು. ಆಗ ಮಾತ್ರ ಇಂಥಹ ಪ್ರಯೋಗ ಮಾಡಬಹುದು ಎಂದು ಹೇಳಿದ್ದಾರೆ.
ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಈಗಾಗಲೇ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ದೂರಿನ ಹಿನ್ನೆಲೆಯಲ್ಲಿ ಮುಖ್ಯಪರೀಕ್ಷೆಗೆ ತಡೆಯಾಜ್ಞೆ ನೀಡಿದೆ. ಆದರೆ ವಿದ್ಯಾರ್ಥಿಗಳಿಗೆ ಅಲ್ಲೂ ನ್ಯಾಯ ದೊರೆಯುವ ವಿಶ್ವಾಸವಿಲ್ಲ. ಈ ಕನ್ನಡದ ಮಕ್ಕಳಿಗೆ ನ್ಯಾಯ ಕೊಡಿಸಿ. ಇದರಲ್ಲಿ ಯಾರ ಪ್ರತಿಷ್ಟೆಯಿಲ್ಲ, ಇರುವುದು ಕನ್ನಡದ ಮಕ್ಕಳ ಭವಿಷ್ಯ ಮತ್ತು ಅವರು ವ್ಯವಸ್ಥೆಯ ಮೇಲೆ ಇಟ್ಟ ನಂಬಿಕೆಯ ಪ್ರಶ್ನೆ. ಆ ನಂಬಿಕೆ ಹಾಳಾಗಬಾರದು, ಆ ಮಕ್ಕಳು ನಾಳೆ ತಮಗೆ ಅನ್ಯಾಯವಾಯಿತು ಎಂಬ ಕೋಪದಿಂದ ದಾರಿ ತಪ್ಪಬಾರದು. ದಯವಿಟ್ಟು ಅವರಿಗೆ ನ್ಯಾಯ ಕೊಡಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿನಂತಿಸಿದ್ದಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications