ಕನ್ನಡ ಪರ ಹೋರಾಟಗಾರರಿಗೆ ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ: ಕರವೇ ಆಕ್ರೋಶ!
ಕನ್ನಡ ಚಳವಳಿಗಾರರ ಮೇಲಿರುವ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಬಹಿರಂಗವಾಗಿ ಘೋಷಿಸಿದ್ದರು. ಒಂದು ತಿಂಗಳು ಕಳೆದರೂ ಆ ದಿಶೆಯಲ್ಲಿ ಯಾವುದೇ ಸೂಚನೆ ಕಾಣುತ್ತಿಲ್ಲ. ಮುಖ್ಯಮಂತ್ರಿಗಳ ಘೋಷಣೆ ಕೇವಲ ಘೋಷಣೆಯಾಗಿ ಉಳಿದುಬಿಡುವ ಲಕ್ಷಣ ಕಂಡುಬರುತ್ತಿದೆ. ಕರ್ನಾಟಕ ಸರ್ಕಾರದ ಕೆಲವು ಸಚಿವರಿಗೆ ಕನ್ನಡ ಹೋರಾಟಗಾರರ ಮೊಕದ್ದಮೆಗಳನ್ನು ಹಿಂಪಡೆಯುವಲ್ಲಿ ಆಸಕ್ತಿ ಇಲ್ಲವೆಂಬಂತೆ ತೋರುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ್ರು.ಟಿ.ಎ (Narayanagowdru T.A.) ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಎಲ್ಲ ರಾಜಕೀಯ ಪಕ್ಷಗಳೂ ಅಧಿಕಾರದಲ್ಲಿದ್ದಾಗ ತಮ್ಮ ಪಕ್ಷದ ಕಾರ್ಯಕರ್ತರೂ, ಮುಖಂಡರೂ ಎದುರಿಸುತ್ತಿರುವ ಮೊಕದ್ದಮೆಗಳನ್ನು ಹಿಂಪಡೆಯುತ್ತವೆ. ತಮ್ಮ ಪರಿವಾರದ ಮುಖಂಡರ ಮೇಲಿರುವ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನೂ ಹಿಂಪಡೆಯಲಾಗುತ್ತದೆ. ಆದರೆ ಈ ನಾಡು-ನುಡಿಗಾಗಿ ಹೋರಾಡುವ ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯಲು ಯಾರಿಗೂ ಮನಸ್ಸಾಗುವುದಿಲ್ಲ. ಕನ್ನಡ ಚಳವಳಿ ಮತ್ತು ಕನ್ನಡ ಚಳವಳಿಗಾರರ ಬಗ್ಗೆ ಇವರಿಗಿರುವ ತಿರಸ್ಕಾರ ಮತ್ತು ತಾತ್ಸಾರ ಮನೋಭಾವ ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳೇ ಬಹಿರಂಗವಾಗಿ ಘೋಷಿಸಿದರೂ ರಾಜ್ಯ ಸರ್ಕಾರದ ಸಚಿವ ಸಂಪುಟ ಇನ್ನೂ ಈ ಕುರಿತು ನಿರ್ಧಾರ ತೆಗೆದುಕೊಂಡಿಲ್ಲವೇಕೆ? ಇದರ ಹಿಂದಿನ ಷಡ್ಯಂತ್ರ ಏನು? ಯಾವ ಶಕ್ತಿಗಳು ಸರ್ಕಾರವನ್ನು ತಡೆಯುತ್ತಿವೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಇದೆಲ್ಲವೂ ನಮಗೆ ತಿಳಿಯದ ವಿಷಯವಲ್ಲ. ಈ ಶಕ್ತಿಗಳ ವಿರುದ್ಧ ತೀವ್ರ ಸ್ವರೂಪದ ಚಳವಳಿ ಸಂಘಟಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಕನ್ನಡ, ಕನ್ನಡಿಗ, ಕರ್ನಾಟಕ ಎಂಬ ಮೂಲಮಂತ್ರಗಳನ್ನು ಧ್ಯೇಯವಾಗಿಟ್ಟುಕೊಂಡು ಬೀದಿಗಿಳಿದು ಹೋರಾಟ ಮಾಡಿದಾಗೆಲ್ಲ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ನಮಗೆ ನೀಡುವ "ಪ್ರಶಸ್ತಿ"ಯೇ ಮೊಕದ್ದಮೆಗಳು ಮತ್ತು ಜೈಲುವಾಸ. ನಮ್ಮ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಲ್ಲಸಲ್ಲದ ಸೆಕ್ಷನ್ಗಳನ್ನು ಸೇರಿಸಿ ಕನ್ನಡ ಚಳವಳಿಗಾರರನ್ನು ಕ್ರಿಮಿನಲ್ಗಳಂತೆ ಬಿಂಬಿಸುವ ಪ್ರಯತ್ನ ನಡೆದಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯೋತ್ಸವದ ದಿನ ನೀಡಿದ ವಾಗ್ದಾನವನ್ನು ಈಡೇರಿಸಬೇಕು. ಇದು ಅವರ ನೈತಿಕ ಜವಾಬ್ದಾರಿ. ಅಪಾರ ಕನ್ನಡ ಪ್ರೇಮಿಗಳಾದ ಸಿದ್ದರಾಮಯ್ಯನವರು ವಚನಭ್ರಷ್ಟರಾಗಬಾರದು. ಕನ್ನಡ ಚಳವಳಿಗಾರರ ವಿರುದ್ಧ ನಿಂತಿರುವ ದುಷ್ಟ ಶಕ್ತಿಗಳನ್ನು ಹಿಮ್ಮೆಟ್ಟಿಸಿ ಕೊಟ್ಟ ಮಾತನ್ನು ಈಡೇರಿಸಬೇಕು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸರಣಿ ಚಳವಳಿಗಳನ್ನು ಆಯೋಜಿಸುತ್ತಿದೆ.
ದಿನಾಂಕ 5-12-2025 ಶುಕ್ರವಾರ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ನಿಯೋಗದೊಂದಿಗೆ ಭೇಟಿ ಮಾಡಿ ಈ ಕುರಿತು ನಮ್ಮ ಮನವಿಯನ್ನು ಸಲ್ಲಿಸಲಿದ್ದೇವೆ. ಮುಂದೆ ನಡೆಯಲಿರುವ ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರ ತೆಗೆದುಕೊಂಡು ಹೋರಾಟಗಾರರ ಮೇಲಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುವುದಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಅಧಿವೇಶನಕ್ಕೆ ಮುತ್ತಿಗೆ, ಸಚಿವ-ಶಾಸಕರ ನಿವಾಸಗಳ ಮುಂದೆ ಪ್ರತಿಭಟನೆ, ಘೇರಾವ್, ಕಪ್ಪು ಬಟ್ಟೆ ಪ್ರದರ್ಶನದಂತಹ ತೀವ್ರ ಚಳವಳಿಗಳನ್ನು ನಡೆಸಲಿದ್ದೇವೆ. ಸರ್ಕಾರ ಕೂಡಲೇ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications