ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ: ವಾಟಾಳ್ ನಾಗರಾಜ್ ಮನವಿ
ಹಾಸನ, ಮೇ 28: ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ನನ್ನನ್ನು ಬೆಂಬಲಿಸಿ ಮೊದಲ ಪ್ರಾಶಸ್ತ್ಯ ಮತ ಕೊಡಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಗೆಲುವಿಗಿಂತ ಸೋಲೇ ಜಾಸ್ತಿಯಾಗಿದೆ. ರಾಜಿ ಮಾಡಿಕೊಂಡಿದ್ದರೆ ಏನು ಬೇಕಾದರೂ ಆಗಬಹುದಿತ್ತು. ನನ್ನನ್ನು ಕ್ಯಾಬಿನೆಟ್ಗೆ ತೆಗೆದುಕೊಳ್ಳಲು ದೇವರಾಜ್ ಅರಸು ಸಾಕಷ್ಟು ಪ್ರಯತ್ನ ಮಾಡಿದ್ದರು ಎಂದರು.

ವಿಧಾನ ಪರಿಷತ್ ಒಂದು ಗೌರವದ ಸ್ಥಾನವಾಗಿ ಕಾಣಬೇಕು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಿದ್ದೇನೆ. ಶಿಕ್ಷಕರ ಬೇಡಿಕೆಗಳು ಸಾಕಷ್ಟು ಇದೆ. ಶಿಕ್ಷಕರ ಪರವಾಗಿ ಪರಿಷತ್ನಲ್ಲಿ ಹೋರಾಟ ಮಾಡಲು ನಾನು ಸಿದ್ಧನಿದ್ದೇನೆ. ಹೀಗಾಗಿ ನನ್ನನ್ನು ಬೆಂಬಲಿಸಿ ಮೊದಲ ಪ್ರಾಶಸ್ತ್ಯ ಮತ ಕೊಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಮಾತು ಮುಂದುವರಿಸಿದ ಅವರು, ರಾಜ್ಯದಲ್ಲಿ ಯಾವ ಮಹಿಳೆಯರಿಗೆ ಅನ್ಯಾಯ ಆಗಿದೆ, ಯಾರು ನೋವಿನಲ್ಲಿ ಇದಾರೆ. ನೊಂದ ಮಹಿಳೆಯರಿಗೆ ಸೂಕ್ತ ಪರಿಹಾರ ಸಿಗಬೇಕಾಗಿದೆ. ಶೋಷಣೆಗೆ ಒಳಗಾದ ಮಹಿಳೆಯರ ಪರವಾಗಿ ನಾನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.
ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಏನೆಂದು ಮಾತನಾಡೋದು ಎಂದು ಕಳವಳ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ಈ ವಿಷಯದ ಬಗ್ಗೆ ನಾನು ಮಾತನಾಡೋದೇ ಇಲ್ಲ. ಮೇ 30ರ ಹೋರಾಟಕ್ಕೆ ನಮ್ಮ ಬೆಂಬಲ ಕೂಡ ಇದೆ. ಈ ಹೋರಾಟಕ್ಕೆ ಬೆಂಬಲ ಇಲ್ಲ ಎಂದು ಹೇಳೋಕೆ ಆಗುತ್ತಾ ಎಂದಿದ್ದಾರೆ.
ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನ ಈವರೆಗೆ ಬಂಧನ ಮಾಡದೇ ಇರುವುದು ಸರ್ಕಾರದ ವೈಫಲ್ಯ ಅಲ್ಲವೇ. ಇದು ಅತ್ಯಂತ ಅನ್ಯಾಯದ ಘಟನೆ. ಸರ್ಕಾರ ಈ ಪ್ರಕರಣದಲ್ಲಿ ಏನು ಮಾಡಲಿದೆ ನೋಡೋಣ. ಎಸ್ಐಟಿ ಎಷ್ಟರ ಮಟ್ಟಿಗೆ ತನಿಖೆ ಮಾಡಲಿದೆ ನೋಡೋಣ. ಸರ್ಕಾರ ಜವಾಬ್ದಾರಿಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ಇದು ರಾಜ್ಯದಲ್ಲಿ ಎಂದೂ ಆಗದಿರುವ ಘಟನೆ ಇಡೀ ರಾಜ್ಯವೇ ತಲೆ ತಗ್ಗಿಸುವ ಘಟನೆ ಇದು. ಈ ಘಟನೆ ನೋಡಿ ಇಡೀ ಸಂಪುಟವೇ ರಾಜಿನಾಮೆ ಕೊಟ್ಟಿದ್ದರೆ ಒಂದು ಘನತೆ ಬರುತ್ತಿತ್ತು ಎಂದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್












Click it and Unblock the Notifications