ಎಂಎಂ ಕಲಬುರ್ಗಿ ಹಂತಕರು ವಿಜಯಪುರದಲ್ಲೇ ಸಿಕ್ಕರೇ?
ವಿಜಯಪುರ, ಡಿಸೆಂಬರ್ 31: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಖ್ಯಾತ ವಿಮರ್ಶಕ, ಸಂಶೋಧಕ ಡಾ. ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕೊನೆಗೂ ಇಬ್ಬರನ್ನು ಬಂಧಿಸಲಾಗಿದೆ.
ಕಲಬುರ್ಗಿ ಕೊಲೆ ಸಂಬಂಧ ಸುದೀರ್ಘವಾಗಿ ವಿಚಾರಣೆ ಮತ್ತು ತನಿಖೆ ಮುಂದಾಗಿದ್ದ ಸಿಐಡಿ ಅಧಿಕಾರಿಗಳು ವಿಜಯಪುರದ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದು, ಆ ಪೈಕಿ ಇಬ್ಬರು ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. [ಕಲಬುರ್ಗಿ ಹತ್ಯೆಗೆ ಒಂದು ವರ್ಷ, ತನಿಖೆ ಎತ್ತ ಸಾಗಿದೆ?]

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ನಾಗರಾಳ ಗ್ರಾಮ ಕಲಬುರ್ಗಿ ಎಂ ಎಂ ಕಲಬುರ್ಗಿಯವರ ಅವರ ಸ್ವಂತ ಊರು. ಆರೋಪಿಗಳು ಈ ಪ್ರದೇಶದವರೇ ಆಗಿದ್ದು ಕಲಬುರ್ಗಿಯವರ ಜಮೀನಿನ ವಿಷಯದಲ್ಲಿ ಗಲಾಟೆಯಾಗಿತ್ತು ಎಂದು ಮೂಲಗಳು ತಿಳಿಸಿವೆ. [ಎಂಎಂ ಕಲಬುರ್ಗಿ ಹತ್ಯೆಗೆ 1 ವರ್ಷ, ಆರೋಪಿ ಎಲ್ಲಿ?]
ನಮಗೆ ಕಲಬುರ್ಗಿಯವರ ಬರಹ, ಪುಸ್ತಕ, ವಿಚಾರ, ಸಿದ್ಧಾಂತಗಳ ಬಗ್ಗೆ ಏನೂ ತಿಳಿದಿಲ್ಲ ಅದರೆ, ಆಸ್ತಿ ವಿಷಯವಾಗಿ ಅವರೊಂದಿಗೆ ಅಸಮಾಧಾನವಿತ್ತು, ಜಗಳವೂ ನಡೆದಿತ್ತು. ಹೀಗಾಗಿ ಹತ್ಯೆ ಮಾಡಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದ ವಿಚಾರ ವಾದಿಗಳಾದ ನರೇಂದ್ರ ಧಾಬೋಲ್ಕರ್ ಮತ್ತು ಗೋವಿಂದ ಪಾನ್ಸರೆ ಅವರ ಹತ್ಯೆ ವೇಳೆಯಲ್ಲಿಯೇ ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಹಿಂದೂ ಪರ ಸಂಘಟನೆಗಳ ಅಸಹಿಷ್ಣುತೆ ಕಾರಣದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ದೇಶಾದ್ಯಂತ ಅಸಹಿಷ್ಣುತೆ ಕಾರಣಕ್ಕೆ ವಾದ ವಿವಾದಗಳು ನಡೆದಿದ್ದವು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications