ರೈತರಿಗೆ ಶುಭಸುದ್ದಿ: ಕಲಬುರಗಿಯಲ್ಲಿ ಖಾರಿಫ್ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಕಲಬುರಗಿ: ರಾಜ್ಯಾದ್ಯಂತ ಇನ್ನೊಂದು ತಿಂಗಳ ಆಸುಪಾಸಿನಲ್ಲಿ ರಾಬಿ ಬೆಳೆ ಕೊಯ್ಲಿಗೆ ಸಿದ್ಧವಾಗಿದೆ. ಖಾರಿಫ್ ಬೆಳೆಗೆ ಬೆಲೆ ಸಿಗದ ಪರಿಣಾಮ ಒಂದಷ್ಟು ರೈತರಿಂದ ಉತ್ಪನ್ನ ಮಾರಾಟ ತಡವಾಗಿತ್ತು. ಕಲಬುರಗಿ ಭಾಗದಲ್ಲಿ ನೆರೆ, ಪ್ರವಾಹ ರೈತರ ನಿದ್ದೆಗೆಡಿಸಿತ್ತು. ಸರ್ಕಾರ ಪರಿಹಾರ ಘೋಷಿಸಿದ ಬೆನ್ನಲ್ಲೆ ಇದೀಗ ರೈತರ ಅನುಕೂಲಕ್ಕಾಗಿ ವಿವಿಧ ಬೆಳೆಗಳ ಖರೀದಿ ಅವಧಿಯನ್ನು ವಿಸ್ತರಣೆ ಮಾಡಿ ಹೊಸ ವರ್ಷದ ಸಂದರ್ಭದಲ್ಲಿ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.
ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಲಬುರಗಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಗುರುವಾರ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮುಂಗಾರು ಹಂಗಾಮಿನ ನ್ಯಾಯಯುತ ಸರಾಸರಿ ಗುಣಮಟ್ಟದ (ಎಫ್.ಎ.ಕ್ಯೂ) ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಉತ್ಪನ್ನವನ್ನು ರೈತರಿಂದ ಖರೀದಿಸಲು ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ತೆಗೆಯಲಾಗಿದೆ. ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲು ನಮ್ಮ ಸರ್ಕಾರ ಆದೇಶ ನೀಡಿದೆ ಎಂದರು.
ಈಗಾಗಲೇ ನಿಗಧಿತ ಅವಧಿಯಲ್ಲಿ ನೊಂದಣಿ ಮಾಡಿಕೊಂಡಿರುವ ಜಿಲ್ಲೆಯ ರೈತರು ಮಾರಾಟ ಮಾಡಲು ಖರೀದಿ ಅವಧಿಯನ್ನು ಈ ಕೆಳಕಂಡ ಅವಧಿಗೆ ವಿಸ್ತರಿಸಲಾಗಿರುತ್ತದೆ. ಯಾವ ಅವಧಿಯಲ್ಲಿ ಯಾವ ಬೆಳೆಗೆ ಎಷ್ಟು ದರ ನಿಗದಿ ಆಗಿದೆ ಎಂಬ ಮಾಹಿತಿ ತಿಳಿದು ಮಾರಾಟ ಮಾಡಬಹುದಾಗಿದೆ.
ವಿಸ್ತರಣೆಗೊಂಡ ಅವಧಿ, ಬೆಳೆ ದರ ಮಾಹಿತಿ
1. ಹೆಸರು ಕಾಳು- ನಿಗದಿಪಡಿಸಿದ ದರ: 8768
- ಅಂತಿಮ ದಿನಾಂಕ : 22-01-2026.
2. ಉದ್ದಿನ ಕಾಳು- ನಿಗದಿಪಡಿಸಿದ ದರ: 7800 ರೂಪಾಯಿ
- ಅಂತಿಮ ದಿನಾಂಕ: 22-01-26
3. ಸೂರ್ಯಕಾಂತಿ-ನಿಗದಿಪಡಿಸಿದ ದರ: 7721 ರೂಪಾಯಿ
- ಅಂತಿಮ ದಿನಾಂಕ: 22-01-26
4. ಸೋಯಾಬೀನ್- ನಿಗದಿಪಡಿಸಿದ ದರ: 5328 ರೂಪಾಯಿ
- ಅಂತಿಮ ದಿನಾಂಕ : 26-01-26
ಕಲಬುರಗಿ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (PACS) ಹಾಗೂ ಎಫ್ಪಿಓ ಗಳಿಗೆ ಭೇಟಿ ನೀಡಿ ತಾವು ಬೆಳೆದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗು ಸೋಯಾಬೀನ ನಿಗದಿತ ಅವಧಿಯಲ್ಲಿ ಮಾರಾಟ ಮಾಡಬಹುದು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ರೈತರು ಈ ಕೆಳಕಂಡ ಮೊಬೈಲ್ ಸಂಖ್ಯೆಗೆ ಸಂಪರ್ಕಿಸುವಂತೆ ಸಚಿವರು ತಿಳಿಸಿದ್ದಾರೆ.
1. ಉದ್ದಿನ ಕಾಳು & ಸೋಯಾಬೀನ ಖರೀದಿಗಾಗಿ ಮೊಬೈಲ್- 9449864446 (KSCMF)
2. ಹೆಸರು ಕಾಳು ಖರೀದಿಗಾಗಿ ಮೊಬೈಲ್- 9964474444 (KSPAML)
3. ಸೂರ್ಯಕಾಂತಿ ಖರೀದಿಗಾಗಿ ಮೊಬೈಲ್- 9591812142 (KOF)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications