'ಅಖಿಲ ಭಾರತ ಹರಿಜನ ಸೇವಾ ಸಂಘ': ಪ್ರಧಾನ ಕಾರ್ಯದರ್ಶಿಯಾಗಿ ಪ್ರೊ. ಬಿ.ಸಿ ಮೈಲಾರಪ್ಪ ಆಯ್ಕೆ
ಬೆಂಗಳೂರು, ಅಕ್ಟೋಬರ್ 12: ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1932ರಲ್ಲಿ ಸ್ಥಾಪನೆಯಾಗಿದ್ದ 'ಅಖಿಲ ಭಾರತ ಹರಿಜನ ಸೇವಾ ಸಂಘ'ದ ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಪ್ರೊ. ಬಿ.ಸಿ.ಮೈಲಾರಪ್ಪ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರಾಗಿ ಮಾಜಿ ಮೇಯರ್ ಪ್ರೇಮ ಕಾರಿಯಪ್ಪ ಅವರು ಹಾಗೂ ಐಎಎಸ್ ಅಧಿಕಾರಿ ಕೆ.ಶಿವರಾಂ ಎಂಬುವವರು ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಶೈಕ್ಷಣಿಕ ಹಿನ್ನೆಲೆ ಇರುವ ಗೂ ರಾಜಕೀಯೇತರ ವ್ಯಕ್ತಿಯೊಬ್ಬರು ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿದ್ದಾರೆ ಎಂದು ಸಂಘ ತಿಳಿಸಿದೆ.

'ಅಖಿಲ ಭಾರತ ಹರಿಜನ ಸೇವಾ ಸಂಘ' ಇದೊಂದು ರಾಷ್ಟ್ರೀಯ ಮಟ್ಟದ ಸಂಘವಾಗಿದೆ. ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ ಹಾಗೂ ರಾಷ್ಟ್ರೀಯ ಕಾಂಗ್ರೆಸ್ನಲ್ಲಿ ನಾಲ್ಕು ಬಾರಿ ಅಧ್ಯಕ್ಷರಾಗಿದ್ದ ಪಂಡಿತ ಮದನ ಮೋಹನ ಮಾಳವಾಯಿ ಹಾಗೂ ಮಹಾತ್ಮ ಗಾಂಧೀಜಿ ಅವರ ಮುಂದಾಳತ್ವದಲ್ಲಿ ಸ್ಥಾಪನೆ ಆಯಿತು. ಸಂಘವು ಸಮಾಜದಲ್ಲಿ ಅಸ್ಪೃಶ್ಯತೆ ಹೋಗಾಲಾಡಿಸುವ ಜತೆಗೆ ಅಸ್ಪೃಶ್ಯ ಜನಾಂಗದವರ ಶ್ರೇಯೋಭಿವೃದ್ಧಿಗೆ ಮಾಡುವ ಉದ್ದೇಶ ಹೊಂದಿತ್ತು.

ಇಂತಹ 90 ವರ್ಷದ ಐತಿಹಾಸಿಕ ಹಿನ್ನೆಲೆ ಇರುವ ಸಂಘಕ್ಕೆ ರಾಜ್ಯ ಸಹಕಾರ ಇಲಾಖೆ ನಿರ್ದೇಶನದಂತೆ ಕರ್ನಾಟಕ ರಾಜ್ಯ ಘಟಕ ಪದಾಧಿಕಾರಿಗಳು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಪ್ರಸ್ತುತ ಈ ಚುನಾವಣೆಯು ಬುಧವಾರ ಬೆಂಗಳೂರಿನ ಶೇಷಾದ್ರಿಪುರಂನ ಕಚೇರಿಯಲ್ಲಿ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications