ಎಂ.ಎಂ.ಕಲಬುರ್ಗಿ ಹತ್ಯೆ : ಸಿಐಡಿ ಪೊಲೀಸರ ತಂಡ ಕೊಲ್ಹಾಪುರಕ್ಕೆ
ಬೆಂಗಳೂರು, ಸೆ. 01 : ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿರುವ ಪ್ರೊ.ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ನಾಲ್ಕು ತಂಡಗಳನ್ನು ರಚನೆ ಮಾಡಿದ್ದಾರೆ. ಕೊಲೆಗಾರರನ್ನು ಹುಡುಕಿಕೊಂಡು ಒಂದು ಪೊಲೀಸರ ತಂಡ ಕೊಲ್ಹಾಪುರಕ್ಕೆ ತೆರಳಿದೆ.
ತನಿಖಾ ತಂಡದ ಅಧಿಕಾರಿಗಳು ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿಯಂತೆ, ಬಾಡಿಗೆ ಹಂತಕರ ಮೂಲಕ ಈ ಕೊಲೆ ಮಾಡಿಸಿರಬಹುದು ಎಂದು ಶಂಕಿಸಲಾಗಿದೆ. ವಿವಿಧ ಕೋನಗಳಿಂದ ತನಿಖೆ ನಡೆಸಲು ಪೊಲೀಸರು ಸಿಐಡಿ ಅಧಿಕಾರಿಗಳು 4 ತಂಡಗಳನ್ನು ರಚನೆ ಮಾಡಿದ್ದಾರೆ. [ಕಲಬುರ್ಗಿ ಹತ್ಯೆ, ಸಿಬಿಐ ತನಿಖೆಗೆ ನಿರ್ಧಾರ]

ಕೊಲ್ಹಾಪುರಕ್ಕೆ ಏಕೆ? : ಹತ್ಯೆಯ ನಂತರ ದುಷ್ಕರ್ಮಿಗಳು ಮಹಾರಾಷ್ಟ್ರಕ್ಕೆ ಪರಾರಿಯಾಗಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಕೊಲ್ಹಾಪುರಕ್ಕೆ ಸಿಐಡಿ ಅಧಿಕಾರಿಗಳು ತೆರಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಲಬುರ್ಗಿ ಅವರ ಮಾದರಿಯ ಹತ್ಯೆಗಳು ನಡೆದಿವೆ. ಆದ್ದರಿಂದ, ಅಲ್ಲಿನ ಪೊಲೀಸರಿಂದ ಮಾಹಿತಿ ಸಂಗ್ರಹಣೆ ಮಾಡಲು ತಂಡ ತೆರಳಿದೆ. [ಕಲಬುರ್ಗಿ ಹತ್ಯೆ, ಟ್ವಿಟ್ ಮಾಡಿದ್ದ ಯುವಕನ ಬಂಧನ]
ಉಳಿದ ತಂಡಗಳು ಕರ್ನಾಟಕದಲ್ಲಿಯೇ ತನಿಖೆಯನ್ನು ಮುಂದುವರೆಸಿವೆ. ಒಂದು ತಂಡ ಹತ್ಯೆಗೆ ಕೌಟುಂಬಿಕ ಕಾರಣಗಳೇನಾದರೂ ಇವೆಯೇ? ಎಂದು ತನಿಖೆಯನ್ನು ನಡೆಸಲಿವೆ. ಎಂ.ಎಂ.ಕಲಬುರ್ಗಿ ಅವರ ಪುತ್ರಿ ಈಗಾಗಲೇ ಕುಟುಂಬದಲ್ಲಿ ಆಸ್ತಿ ಕಲಹಗಳೇನು ಇರಲಿಲ್ಲ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬಂಧಿತನಿಗೆ ಜಾಮೀನು ಸಿಕ್ಕಿತು : ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಹತ್ಯೆಯನ್ನು ಸಮರ್ಥಿಸಿಕೊಂಡು ಟ್ವಿಟ್ ಮಾಡಿದ್ದ ಭವಿತ್ ಶೆಟ್ಟಿಗೆ ಜಾಮೀನು ಸಿಕ್ಕಿದೆ. ಬಂಟ್ವಾಳ ಪೊಲೀಸರು ಭವಿತ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದರು. ವಿಚಾರಣೆ ಬಳಿಕ ಆತನಿಗೆ ಜಾಮೀನು ನೀಡಲಾಗಿದೆ.
ಇತ್ತ ಕರ್ನಾಟಕ ಸರ್ಕಾರವೂ ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಬಿಐಗೆ ಪತ್ರ ಬರೆದಿದೆ. ಸರ್ಕಾರ ಈಗಾಗಲೇ ಸಿಐಡಿ ತನಿಖೆಗೆ ಆದೇಶ ನೀಡಿದೆ. ಸಿಬಿಐ ತನಿಖೆಯನ್ನು ಕೈಗೊಳ್ಳುವ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications