ಕಲಬುರ್ಗಿ ಹತ್ಯೆಯ ಸಂಚು ರೂಪಿಸಿದ್ದು ರುದ್ರ ಪಾಟೀಲ್?
ಬೆಂಗಳೂರು, ಸೆಪ್ಟೆಂಬರ್, 18 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಹತ್ಯೆಯ ಸಂಚು ರೂಪಿಸಿದ ಪ್ರಮುಖ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕಲಬುರ್ಗಿ ಅವರ ಹತ್ಯೆ ನಡೆಯುವ ದಿನ ಆರೋಪಿ ಬೆಳಗಾವಿಯಲ್ಲಿದ್ದ ಎಂದು ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸಿದೆ.
ಮಹಾರಾಷ್ಟ್ರದ ಸಾಂಗ್ಲಿ ಮೂಲದ ರುದ್ರ ಪಾಟೀಲ್ (32) ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಸಂಚು ರೂಪಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನರೇಂದ್ರ ಧಾಬೋಲ್ಕರ್, ಗೋವಿಂದ ಪನ್ಸಾರೆ ಅವರ ಹತ್ಯೆಯ ಸಂಚನ್ನು ಪಾಟೀಲ್ ರೂಪಿಸಿದ್ದ ಎಂದು ಆರೋಪಿಸಲಾಗಿದೆ. [ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]

ರುದ್ರ ಪಾಟೀಲ್ಗಾಗಿ ಕರ್ನಾಟಕ ಸಿಐಡಿ ಪೊಲೀಸರು ಹುಟುಕಾಟ ಆರಂಭಿಸಿದ್ದಾರೆ. ಸಿಬಿಐ ಮತ್ತು ರಾಷ್ಟ್ರೀಯ ತನಿಖಾ ತಂಡಕ್ಕೂ ಪಾಟೀಲ್ ಬೇಕಾಗಿದ್ದಾನೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ನಡೆದ ಹತ್ಯೆಗಳ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ ನಂತರ ಪಾಟೀಲ್ ಕುರಿತು ಮಾಹಿತಿ ಲಭ್ಯವಾಗಿದೆ. [ಮೂರು ಹತ್ಯೆಗಳ ನಡುವೆ ಸಾಮ್ಯತೆ]
ಪೊಲೀಸರ ವಿಚಾರಣೆ ವೇಳೆ ಈ ಮೂರು ಹತ್ಯೆ ಪ್ರಕರಣದ ಸಂಚನ್ನು ರುದ್ರ ಪಾಟೀಲ್ ಮಾಡಿದ್ದಾಗಿ ಆರೋಪಿಯೊಬ್ಬ ಒಪ್ಪಿಕೊಂಡಿದ್ದಾನೆ. ಸಿಐಡಿ ಮೂಲಗಳು ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿಯಂತೆ ಎಂ.ಎ.ಕಲಬುರ್ಗಿ ಅವರ ಹತ್ಯೆ ನಡೆದ ಆ.30ರಂದು ಪಾಟೀಲ್ ಬೆಳಗಾವಿಯಲ್ಲಿದ್ದ ಎಂದು ಮಹಾರಾಷ್ಟ್ರ ಸೈಬರ್ ವಿಂಗ್ ಮಾಹಿತಿ ನೀಡಿದೆ. [ಕಲಬುರ್ಗಿ ಹತ್ಯೆ : ತನಿಖೆಯ ಪ್ರಗತಿ ಏನು?]
ಸಿಬಿಐ ಸಹ ಪಾಟೀಲ್ಗಾಗಿ ಹುಡುಕಾಟ ನಡೆಸುತ್ತಿದೆ. ಸಾಂಗ್ಲಿ ಮೂಲದ ಈ ವ್ಯಕ್ತಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಣೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ರಾಷ್ಟ್ರೀಯ ತನಿಖಾ ದಳ ಪಾಟೀಲ್ ಹುಡುಕಾಟಕ್ಕಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ.
ರಾಷ್ಟ್ರೀಯ ತನಿಖಾ ದಳ ನೀಡಿರುವ ರುದ್ರ ಪಾಟೀಲ್ ವಿಳಾಸ : Saham Mobile Shopee, Panchmukhi, Maruti Road, Gaonbhag, Sangli, Maharashtra. Flat No. 8, Dattakrupa Appartment, Joshi Gali, Gaonbhang, Sangli, Maharashtra.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications