ಮುಸ್ಲಿಮರನ್ನು ಭಯೋತ್ಪಾದಕರು ಎಂದ ಶಿಕ್ಷಕ: ವಿಡಿಯೋ ಹಂಚಿಕೊಂಡ ಯುನೆಸ್ಕೊ ಅಧ್ಯಕ್ಷ
ಮಂಗಳೂರು, ನ.28: ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ಸಮುದಾಯದವರನ್ನು 'ಭಯೋತ್ಪಾದಕ' ಎಂಬ ಪದವನ್ನು ಬಳಸಿ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ತರಗತಿಯಲ್ಲಿದ್ದ ವಿದ್ಯಾರ್ಥಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುನೆಸ್ಕೋ (ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಧ್ಯಕ್ಷರೂ ಆಗಿರುವ ಪ್ರೊಫೆಸರ್ ಅಶೋಕ್ ಸ್ವೈನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ವಿಡಿಯೋದಲ್ಲಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿದ್ಯಾರ್ಥಿ, ನನ್ನ ಧರ್ಮದ ಬಗ್ಗೆ ತಮಾಷೆ ಮಾಡಲು ಸಾಧ್ಯವಿಲ್ಲ. ಈ ದೇಶದಲ್ಲಿ ಮುಸ್ಲಿಮರಾಗಿದ್ದು ಇದನ್ನೆಲ್ಲ ಎದುರಿಸುವುದು ತಮಾಷೆಯಲ್ಲ ಎಂದು ಹೇಳಿದ್ದಾರೆ. ನಂತರ ಶಿಕ್ಷಕರು ವಿದ್ಯಾರ್ಥಿಯ ಕ್ಷಮೆಯಾಚಿಸಿದ್ದಾರೆ.

ಭಯೋತ್ಪಾದಕರು ಎಂದು ಕರೆದದ್ದನ್ನು ಖಂಡಿಸಿರುವ ವಿದ್ಯಾರ್ಥಿ, "ನೀವು ಅಂತಹ ಹೇಳಿಕೆಗಳನ್ನು ಹೇಗೆ ನೀಡುತ್ತಿರಿ?" ಎಂದು ಕೇಳಿದ್ದಾರೆ. ಆದರೆ ಅದನ್ನು ತಮಾಷೆಗೆ ಹೇಳಿದ್ದು ಎಂದು ಪ್ರಾಧ್ಯಾಪಕರು ಹೇಳಿದಕ್ಕೆ ವಿದ್ಯಾರ್ಥಿ ಮತ್ತಷ್ಟು ಕೋಪಗೊಂಡು, ಇದು ತಮಾಷೆಯಯ ವಿಷಯವಲ್ಲ ಸರ್, ಮುಸ್ಲಿಮರಾಗಿರುವುದು ಮತ್ತು ಈ ದೇಶದಲ್ಲಿ ಇಂತಹ ವಿಷಯಗಳನ್ನು ಎದುರಿಸುವುದು ತಮಾಷೆಯಲ್ಲ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಳಿಕ ಪ್ರಾಧ್ಯಾಪಕರು ವಿದ್ಯಾರ್ಥಿ ಬಳಿ ಕ್ಷಮೆಯಾಚಿಸಿ ನೀನು ನನ್ನ ಮಗನಿಗೆ ಸಮಾನ ಎಂದು ಹೇಳಿದ್ದಾರೆ. ಅದಕ್ಕೆ ಯುವಕ, "ನಿಮ್ಮ ಮಗನನ್ನು ಹೀಗೆ ನಡೆಸಿಕೊಳ್ಳುತ್ತೀರಾ? ತರಗತಿಯಲ್ಲಿರುವ ಎಲ್ಲರ ಮುಂದೆ ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತಿರಾ..? ಕ್ಷಮಿಸಿ ಎಂದು ಕೇಳಿದರೇ, ನೀವು ಈಗ ನಮ್ಮನ್ನು ಇಡೀ ತರಗತಿಯ ಮುಂದೆ ಚಿತ್ರಿಸಿರುವ ರೀತಿ ಬದಲಾಗುವುದಿಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.
A Professor in a class room in India calling a Muslim student ‘terrorist’ - This is what it has been to be a minority in India! pic.twitter.com/EjE7uFbsSi
— Ashok Swain (@ashoswai) November 27, 2022
ಪ್ರಾಧ್ಯಾಪಕರು ವಿದ್ಯಾರ್ಥಿಯೊಂದಿಗೆ ಸಂಭಾಷಣೆ ನಡೆಸಿ ವೈಯಕ್ತಿಕವಾಗಿ ಕ್ಷಮೆಯಾಚಿಸಿದರು ಎಂದು ಮೂಲಗಳು ತಿಳಿಸಿವೆ. ಈ ವಿಷಯವನ್ನು ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕರ ನಡುವೆ ಬಗೆಹರಿಸಲಾಗಿದೆ ಎಂದು ತಿಳಿಸದುಬಂದಿದೆ.

ಈ ಘಟನೆಯ ವಿಡಿಯೋವನ್ನು ಯುನೆಸ್ಕೋ (ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ) ಅಧ್ಯಕ್ಷರೂ ಆಗಿರುವ ಪ್ರೊಫೆಸರ್ ಅಶೋಕ್ ಸ್ವೈನ್ ಹಂಚಿಕೊಂಡಿದ್ದಾರೆ. ಜೊತೆಗೆ "ಭಾರತದ ತರಗತಿ ಕೊಠಡಿಯಲ್ಲಿ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು 'ಭಯೋತ್ಪಾದಕ' ಎಂದು ಕರೆಯುತ್ತಾರೆ. ಭಾರತದಲ್ಲಿ ಅಲ್ಪಸಂಖ್ಯಾತರಾಗಿರುವುದು ಹೀಗೆ" ಎಂದಿದ್ದಾರೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications