45 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, ಡಿಜಿಪಿ ಆಗಿ ಬಡ್ತಿ ಪಡೆದ ಸಿಎಚ್ ಪ್ರತಾಪ್ ರೆಡ್ಡಿ
ಬೆಂಗಳೂರು, ಜನವರಿ 01: ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಅವರು ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ಪಡೆದಿದ್ದಾರೆ. ಈ ಬಡ್ತಿಯಿಂದಾಗಿ ಅವರು ಬೆಂಗಳೂರಲ್ಲೇ ನಗರ ಟಾಪ್ ಕಾಪ್ ಆಗಿ ಮುಂದುವರಿಯಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರ ಶನಿವಾರ 45 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡುವ ಜೊತೆಗೆ ಐವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ನಗರ ಪೊಲೀಸ್ ಆಯುಕ್ತರ ಹುದ್ದೆ ಎಡಿಜಿಪಿ ಹುದ್ದೆಯ ಬಡ್ತಿಗೆ ಮೀಸಲಾಗಿದೆ.
ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ನಿವೃತ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮರ್ ಕುಮಾರ್ ಪಾಂಡೆ ಅವರ ಬದಲಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ವರ್ಗಾಯಿಸಲಾಗಿದೆ.

ಎಂ.ಚಂದ್ರಶೇಖರ್ ಅವರನ್ನು ಎಡಿಜಿಪಿಯಾಗಿ ಬಡ್ತಿ ನೀಡಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ (ಪೂರ್ವ ವಿಭಾಗ) ನಿಯೋಜಿಸಲಾಗಿದೆ. ಮತ್ತೊಬ್ಬ ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರನ್ನು ಎಡಿಜಿಪಿಯಾಗಿ ಬಡ್ತಿ ನೀಡಿ ಪೊಲೀಸ್ ಕಂಪ್ಯೂಟರ್ ವಿಭಾಗಕ್ಕೆ ನಿಯೋಜಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಅದೇ ರೀತಿ ಬಿ.ಆರ್ ರವಿಕಾಂತೇಗೌಡ ಅವರನ್ನು ಐಜಿಪಿಯಾಗಿ ಬಡ್ತಿ ನೀಡಿ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಕೇಂದ್ರ ವ್ಯಾಪ್ತಿಯಲ್ಲಿ ನಿಯೋಜಿಸಲಾಗಿದೆ. ಎಸ್.ಡಿ.ಶರಣಪ್ಪ (ಪೊಲೀಸ್-ಅಪರಾಧದ ಜಂಟಿ ಆಯುಕ್ತ) ಮತ್ತು ಎಂ.ಎನ್.ಅನುಚೇತ್ (ಪೊಲೀಸ್-ಸಂಚಾರ ಜಂಟಿ ಕಮಿಷನರ್) ಇಬ್ಬರೂ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿಪಿ) ಬಡ್ತಿ ಪಡೆದಿದ್ದಾರೆ. ಅವರು ಅದೇ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications