Property: ರಾಜ್ಯದಲ್ಲಿ ಆಸ್ತಿ ನೋಂದಣಿ ಕುರಿತು ಮಹತ್ವದ ಮಾಹಿತಿ
Property: ರಾಜ್ಯದಲ್ಲಿ ಆಸ್ತಿ ನೋಂದಣಿ ಕುರಿತು ಆಗಾಗ ಅಪ್ಡೇಟ್ ಮಾಹಿತಿಗಳು ಲಭ್ಯ ಆಗುತ್ತಲಿರುತ್ತವೆ. ಹಾಗೆಯೇ ಇದೀಗ ಮಾಲೀಕರು ತಮ್ಮ ಪ್ರಾಪರ್ಟಿ ನೋಂದಣಿಗೆ ಪಾಲನೆ ಮಾಡಬೇಕಾದ ಪ್ರಮುಖ ನಿಯಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಸ್ತಿ ಮಾಡಬೇಕೆನ್ನುವ ಆಸೆ ಯಾರಿಗಿರಲ್ಲ ಹೇಳಿ.. ಪ್ರತಿಯೊಬ್ನರಿಗೂ ಇದ್ದೇ ಇರುತ್ತದೆ. ಆದರೆ, ಕೆಲವರು ಈ ಕನಸನ್ನು ನೆರವೇರಿಸಿಕೊಂಡರೂ ಅದನ್ನು ತಮ್ಮ ಪಾಲಿಗೆ ಹೇಗೆ ಪಡೆಯುವುದು ಎನ್ನುವುದನ್ನು ಮರೆತು ಕೊನೆಗೆ ತುಂಬಾ ಕಚೇರಿಗಳಿಗೆ ಅಲೆದಾಡಿರುವ ಘಟನೆಗಳು ನಡೆದಿವೆ. ಆದರೆ, ಈಗಿನ ಕಾಲದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ತುಂಬಾ ಬೆಳವಣಿಗೆಗಳು ಆಗಿದ್ದು, ಆಸ್ತಿ ನೋಂದಣಿ ಕೆಲಸ ತುಂಬಾ ಸುಲಭವಾಗಿಬಿಟ್ಟಿದೆ. ಆದರೂ, ಈ ಪ್ರಕ್ರಿಯೆ ಪೂರ್ಣಗೊಳಿಸಲು ಕೆಲಸ ನಿಯಮಗಳನ್ನು ಪಾಲನೆ ಮಾಡಲೇಬೇಕಾಗುತ್ತದೆ.

ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿ ಕಡ್ಡಾಯಗೊಳಿಸುವ ನೋಂದಣಿ ಕರ್ನಾಟಕ ಅಧಿನಿಯಮ 2025ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರವಷ್ಟೇ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು, ಆ ದಿನದಿಂದಲೇ ಈ ಮಸೂದೆ ಜಾರಿಗೆ ಬರಲಿದೆ ಎಂದು ವರದಿ ಆಗಿದೆ.
ಇದು ನೋಂದಣಿ ಅಧಿನಿಯಮ 1908ರ ಕೇಂದ್ರ ಅಧಿನಿಯಮ 16 ಅನ್ನು ಮತ್ತಷ್ಟು ತಿದ್ದುಪಡಿ ಮಾಡಿ ಕೆಲವು ಬದಲಾವಣೆ ಒಳಗೊಂಡ ಮಸೂದೆ ಆಗಿದೆ. ಆಸ್ತಿ ನೋಂದಣಿಯನ್ನು ಸಂಪೂರ್ಣ ಡಿಜಟಲೀಕರಿಸುವ, ಪಾರದರ್ಶಕತೆ ಹೆಚ್ಚಿಸುವ ಬಗ್ಗೆ ಈ ತಿದ್ದುಪಡಿಯನ್ನು ಜಾರಿಗೊಳಿಸಲಾಗಿದೆ.
ಆಸ್ತಿ ವರ್ಗಾವಣೆಗೆ ಮೊದಲು ನಡೆಸುವ ಜನರಲ್ ಪವರ್ ಆಟಾರ್ನಿ ಸಹ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಆಸ್ತಿ ವರ್ಗಾವಣೆ ವೇಳೆ ಪವರ್ ಆಫ್ ಅಟಾರ್ನಿ ಬರೆದು ಕೊಡುವವರು ಬದುಕಿರುವುದನ್ನು ಖಚಿತಪಡಿಸಲು ಸೂಕ್ತ ಪುರಾವೆ ನೀಡಬೇಕಾಗುತ್ತದೆ. ಇದು ಅಕ್ರಮ ಆಸ್ತಿ ವರ್ಗಾವಣೆ, ನೋಂದಣಿ, ಭೂಕಬಳಿಗೆ ಮತ್ತು ಒತ್ತುವರಿಯಂತ ಪ್ರಕರಣಗಳನ್ನು ತಪ್ಪಿಸಲಿದೆ.
ಇನ್ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯಕ್ಕೆ ಅನ್ವಯ ಆಗುವಂತೆ ನೋಂದಣಿ ಅಧಿನಿಯಮ, 1908 16 ಅನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿದೆ. ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂತಹ ದಿನಾಂಕದಂದು ಜಾರಿಗೆ ಬರಲಿದೆ.
ಸರ್ಕಾರಿ ಅಧಿಕಾರಿಗಳು ಅಥವಾ ಕೆಲವು ಸಾರ್ವಜನಿಕ ಕಾರ್ಯಕರ್ತರು ಬರೆದುಕೊಡುವ ದಸ್ತಾವೇಜುಗಳು, ಯಾರ ಸ್ಥಳೀಯ ಪರಿಮಿತಿಗಳೊಳಗೆ ದಸ್ತಾವೇಜಿನಲ್ಲಿ ಒಳಗೊಂಡಿರುವ ಸ್ಥಿರ ಸ್ಮೃತ್ತಿನ ಸಂಪೂರ್ಣ ಅಥವಾ ಯಾವುದೇ ಭಾಗವು ಇರುವುದೋ ಆ ಅಧಿಕಾರ ವ್ಯಾಪ್ತಿಯ ನೋಂದಣಿ ಅಧಿಕಾರಿಗೆ ದಸ್ತಾವೇಜುಗಳನ್ನು ವಿದ್ಯುನ್ಮಾನವಾಗಿ ಕಳುಹಿಸಬೇಕಾಗುತ್ತದೆ. ಮತ್ತು ಅಂತಹ ಅಧಿಕಾರಿಯು ಆತನ ಯುಕ್ತ ಪುಸ್ತಕ ಸಂಖ್ಯೆಯಲ್ಲಿ ಸದರಿ ವಿದ್ಯುನ್ಮಾನ ದಸ್ತಾವೇಜನ್ನು ದಾಖಲಿಸುತ್ತಾರೆ ಮತ್ತು ವಿದ್ಯುನ್ಮಾನವಾಗಿ ಅದನ್ನು ಸಂರಕ್ಷಿಸಬೇಕಾಗುತ್ತದೆ.
-
ಒಕ್ಕೂಟ ವ್ಯವಸ್ಥೆ ಸಂವಿಧಾನದ ಮೂಲಭೂತ ರಚನೆಯ ಭಾಗ: ತಮಿಳುನಾಡು ಸಿಎಂ ಸ್ಟಾಲಿನ್ ಪತ್ರಕ್ಕೆ ಸಿದ್ದರಾಮಯ್ಯ ಉತ್ತರ -
ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ











Click it and Unblock the Notifications