Property: ಮನೆ ಕಟ್ಟುವವರು, ರಿಯಲ್ ಎಸ್ಟೇಟ್ಗೆ ಹೊಸ ಶಾಕ್ ಕೊಟ್ಟ ಸರ್ಕಾರ!
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಕಳೆದ ಎರಡರಿಂದ ಮೂರು ತಿಂಗಳಿನಿಂದ ಒಂದಿಲ್ಲೊಂದು ಸೇವೆ ಹಾಗೂ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿಕೊಂಡು ಬಂದಿದ್ದು. ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮನೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸರ್ಕಾರದ ಒಂದು ನಿರ್ಧಾರ ಭಾರೀ ದೊಡ್ಡ ಮಟ್ಟದ ಹೊಡೆತ ಕೊಟ್ಟಿದೆ. ಹೌದು ಕರ್ನಾಟಕ ಸರ್ಕಾರದ ಒಂದು ನಿರ್ದಿಷ್ಟ ವಸ್ತುವಿನ ಬೆಲೆ ಏರಿಕೆಯು ಇದೀಗ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಮಾರಕವಾಗಿ ಪರಿಗಣಿಸಿದೆ. ಅಲ್ಲದೇ ಮನೆ ಕಟ್ಟಬೇಕು ಎಂದುಕೊಂಡವರು ಇಲ್ಲವೇ ಈಗಾಗಲೇ ಮನೆ ಕಟ್ಟುತ್ತಿರುವವರಿಗೆ ದೊಡ್ಡ ಶಾಕ್ ಎದುರಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ಮೆಟ್ರೋ ಬೆಲೆಯಿಂದ ಇದೀಗ ಡೀಸೆಲ್ ವರೆಗೆ 8ಕ್ಕೂ ಹೆಚ್ಚು ಸೇವೆ / ವಸ್ತುಗಳ ಬೆಲೆ ಏರಿಕೆಯನ್ನು ಮಾಡಿದೆ. ದಿನೇ ದಿನೇ ಆಗುತ್ತಿರುವ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಕೇವಲ ರಾಜ್ಯ ಸರ್ಕಾರ ಮಾತ್ರವಲ್ಲ ಅತ್ತ ಕೇಂದ್ರ ಸರ್ಕಾರವೂ ಸದ್ದಿಲ್ಲದೆ ಬೆಲೆ ಏರಿಕೆಯನ್ನು ಮಾಡುತ್ತಿದೆ. ಈ ಬೆಲೆ ಏರಿಕೆಯ ಪರ್ವದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ಸುಸ್ತಾಗಿದ್ದಾರೆ. ಇದರ ನಡುವೆ ಈಗಾಗಲೇ ಕೆಳಗೆ ಇಳಿಯುತ್ತಿರುವ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೆಟ್ಟುಕೊಡುವ ನಿರ್ಧಾರವೊಂದನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ನಿರ್ಧಾರದಿಂದ ಕರ್ನಾಟಕದಲ್ಲಿ ಮನೆಗಳನ್ನು ಕಟ್ಟುವುದಕ್ಕೆ ಆಗುವ ವೆಚ್ಚವು ಶೇ 15ರಿಂದ 20% ಹೆಚ್ಚಾಗುವ ಸಾಧ್ಯತೆ ಇದೆ.

ಹೌದು ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದು ಇದರಿಂದ ಮನೆ ಕಟ್ಟಬೇಕು ಎಂದು ಕನಸು ಕಾಣುತ್ತಿರುವವರಿಗೆ ಹಾಗೂ ರಿಯಲ್ ಎಸ್ಟೇಟ್ಗೆ ಪೆಟ್ಟುಕೊಟ್ಟಿದೆ. ಈಗಾಗಲೇ ವಿವಿಧ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸ್ವಂತ ಮನೆ ಕಟ್ಟಬೇಕು ಎನ್ನುವವರಿಗೆ ಶಾಕ್ ಎದುರಾಗಿದೆ. ಇದೀಗ ಡೀಸೆಲ್ ಬೆಲೆ 2 ರೂಪಾಯಿ ಹೆಚ್ಚಳವಾಗಿರುವುದರಿಂದ ಮರಳು, ಜಲ್ಲಿಕಲ್ಲು ಹಾಗೂ ಸಿಮೆಂಟ್ ಸಾಗಾಣಿಕೆ ಬೆಲೆ ಭರ್ಜರಿ ಹೆಚ್ಚಳವಾಗಲಿದೆ.
ಡೀಸೆಲ್ ಬೆಲೆ ಹೆಚ್ಚಳವಾಗಿರುವುದರಿಂದ ಮನೆ ಕಟ್ಟಲು ಅವಶ್ಯವಾಗಿರುವ ಮರಳು, ಜಲ್ಲಿಕಲ್ಲು ಹಾಗೂ ಸಿಮೆಂಟ್ಗಳ ಸಾಗಾಣಿಕೆಯ ಬೆಲೆಯೂ ಹೆಚ್ಚಳವಾಗಲಿದೆ. ಇದರಿಂದ ಮನೆಕಟ್ಟುವವರಿಗೆ ವೆಚ್ಚ ಹೆಚ್ಚಳವಾಗಲಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ!
ಕರ್ನಾಟಕ ಸರ್ಕಾರವು ರಾತ್ರೋರಾತ್ರಿ ಡೀಸೆಲ್ ಬೆಲೆಯನ್ನು (ತೆರಿಗೆ) 2 ರೂಪಾಯಿ ಹೆಚ್ಚಳ ಮಾಡಿದೆ. ಇದರಿಂದ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಅಲ್ಲದೇ ರಾಜ್ಯದಲ್ಲಿ ಹಣದುಬ್ಬರವೂ ಹೆಚ್ಚಳವಾಗಲಿದೆ ಎಂದು ಹೇಳಲಾಗುತ್ತಿದೆ. ಡೀಸೆಲ್ ಬೆಲೆ ಹೆಚ್ಚಳವಾದರೆ ದಿನಸಿ, ಧಾನ್ಯ ಹಾಗೂ ತರಕಾರಿ ಸೇರಿದಂತೆ ಎಲ್ಲಾ ಸಾಗಾಣಿಕೆ ವೆಚ್ಚವೂ ಹೆಚ್ಚಳವಾಗಲಿದೆ ಇದರಿಂದ ಆ ವೆಚ್ಚವನ್ನು ಖರೀದಿದಾರರ ಮೇಲೆ ವರ್ಗಾಯಿಸಲಾಗುತ್ತದೆ.
ಉದ್ಯೋಗ ಕಡಿತದಿಂದ ಸಂಕಷ್ಟ: ಈಗಾಗಲೇ ಕರ್ನಾಟಕದಲ್ಲಿ ವಿವಿಧ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿನ ಉದ್ಯೋಗವನ್ನು ಕಡಿತ ಮಾಡುತ್ತಿದ್ದು ಇದರಿಂದ ಈಗಾಗಲೇ ರಿಯಲ್ ಎಸ್ಟೇಟ್ಗೆ ಪೆಟ್ಟು ಬಿದ್ದಿದೆ. ಇದೀಗ ಡೀಸೆಲ್ ಬೆಲೆ ಹೆಚ್ಚಳವೂ ಅದಕ್ಕೆ ಪೂರಕವಾಗಿ ರಿಯಲ್ ಎಸ್ಟೇಟ್ ಇನ್ನಷ್ಟು ಕುಸಿಯುವುದಕ್ಕೆ ಕಾರಣವಾಗುತ್ತಿದೆ.
ಕರ್ನಾಟಕ ಸರ್ಕಾರವು ಈಗಾಗಲೇ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಹಾಗೂ ಬಿ ಖಾತಾ ಹಾಗೂ ಇ ಖಾತಾ ಗೊಂದಲಗಳು ರಿಯಲ್ ಎಸ್ಟೇಟ್ಗೆ ಭಾರೀ ಪೆಟ್ಟು ಕೊಟ್ಟಿವೆ. ಇ ಖಾತಾ ಹಾಗೂ ಬಿ ಖಾತಾದ ಗೊಂದಲಗಳು ಪರಿಹಾರವಾಗಿಲ್ಲ. ಇದೀಗ ಡೀಸೆಲ್ ಬೆಲೆಯೂ ಹೆಚ್ಚಳವಾಗಿರುವುದು ಇನ್ನಷ್ಟು ಸಂಕಷ್ಟವನ್ನು ತಂದೊಡ್ಡಿದೆ ಎಂದೇ ಹೇಳಲಾಗುತ್ತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications