Government Employee; NPS ವಿರುದ್ಧ ಹೋರಾಟ, ಸಭೆ ಕರೆದ ಸಿಎಂ
ಬೆಂಗಳೂರು, ಫೆಬ್ರವರಿ 27; ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುವ ಭರವಸೆ ನೀಡಿತ್ತು. ಈ ಕುರತು ಸರ್ಕಾರಿ ನೌಕರರು ಈಗಲೂ ಬೇಡಿಕೆ ಮುಂದಿಟ್ಟಿದ್ದಾರೆ.
ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ, ಧರಣಿಗಳನ್ನು ನಡೆಸುತ್ತಿರುವ ಹಿನ್ನಲೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ.

ಫೆಬ್ರವರಿ 28ರ ಬುಧವಾರ ಎನ್ಪಿಎಸ್ ನೌಕರರ ಸಂಘದ ಜೊತೆ ಮುಖ್ಯಮಂತ್ರಿಗಳು ಸಂಜೆ 6 ಗಂಟೆಗೆ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಂ ತೇಜ ನೇತೃತ್ವದಲ್ಲಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಬಜೆಟ್ನಲ್ಲಿ ಘೋಷಣೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ 16ರಂದು ಮಂಡಿಸಿದರು. ಆದರೆ ಬಜೆಟ್ನಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ ಮರು ಸ್ಥಾಪಿಸುವ ಕುರಿತು ಯಾವುದೇ ಘೋಷಣೆ ಮಾಡಿಲ್ಲ.
ಆದ್ದರಿಂದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಈ ಕುರಿತು ಹೋರಾಟ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಎನ್ಪಿಎಸ್ ರದ್ದು ಕುರಿತು ಯಾವುದೇ ಘೋಷಣೆ ಮಾಡದ ಕಾರಣ ಹೋರಾಟ ಅನಿವಾರ್ಯ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿಸಿದೆ.
ಈ ಆದೇಶದ ಪ್ರಕಾರ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30/06/2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು.
ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಆದರೆ ಇದು ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ. ರಾಜ್ಯದ ಸುಮಾರು 13 ಸಾವಿರ ಸರ್ಕಾರಿ ನೌಕರರು ಈ ಮೂಲಕ ಎನ್ಪಿಎಸ್ನಿಂದ ಒಪಿಎಸ್ಗೆ ಸೇರಬಹುದು.
ಹೊಸ ಪಿಂಚಣಿ ಯೋಜನೆ ಕುರಿತು ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದರು. ಆಗ ರಾಜ್ಯದಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಹೊಸ ಪಿಂಚಣಿ) ಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆಯನ್ನು ಅನುಷ್ಠಾನ ಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಕೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಆದೇಶಿಸಲಾಗಿದೆ ಎಂದು ಹೇಳಿದ್ದರು.
ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟಿದ್ದಾರೆ. ಎಲ್ಲಾ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಲಿದ್ದಾರೆ.
ಈ ಸಮ್ಮೇಳನದ ಮೂರು ಪ್ರಮುಖ ಬೇಡಿಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಎಲ್ಲಾ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಬೇಕು ಎಂಬುದು ಒಂದು ಬೇಡಿಕೆಯಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications