ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕ ಬಂದ್ ಕರೆ ವಾಪಸ್, ಸಾಂಕೇತಿಕ ಪ್ರತಿಭಟನೆ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 02 : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಒತ್ತಾಯಿಸಿ ಗುರುವಾರ ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ ಇದೆ. ವಿವಿಧ ಸಂಘಟನೆಗಳು ಇಂದು ಸಾಂಕೇತಿಕ ಪ್ರತಿಭಟನೆ ನಡೆಸಲಿವೆ.

ಆಗಸ್ಟ್‌ 2ಕ್ಕೆ ಉತ್ತರ ಕರ್ನಾಟಕ ಬಂದ್ ಇಲ್ಲ, ಪ್ರತಿಭಟನೆ ಮಾತ್ರಆಗಸ್ಟ್‌ 2ಕ್ಕೆ ಉತ್ತರ ಕರ್ನಾಟಕ ಬಂದ್ ಇಲ್ಲ, ಪ್ರತಿಭಟನೆ ಮಾತ್ರ

ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಿ ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ವಿಚಾರದಲ್ಲಿ ವಿವಿಧ ಸಂಘಟನೆಗಳಲ್ಲೇ ಒಡಕು ಕಾಣಿಸಿಕೊಂಡಿದೆ. ಆದ್ದರಿಂದ, ಗುರುವಾರ ನಡೆಯಬೇಕಿದ್ದ ಬಂದ್ ವಾಪಸ್ ಪಡೆಯಲಾಗಿದೆ.

ಕರ್ನಾಟಕ ತುಂಡು-ತುಂಡಾಗುವುದು ಬೇಡ: ಶಿವರಾಜ್‌ಕುಮಾರ್‌ ಕರ್ನಾಟಕ ತುಂಡು-ತುಂಡಾಗುವುದು ಬೇಡ: ಶಿವರಾಜ್‌ಕುಮಾರ್‌

Protest for North Karnataka separate state highlights

ಬುಧವಾರ ಸಂಜೆ ಹಾವೇರಿಯಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ ಅವರು, 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದ, ಬಂದ್ ಕೈಬಿಡಲಾಗಿದೆ' ಎಂದು ಹೇಳಿದರು.

Newest FirstOldest First
11:24 AM, 2 Aug

'ಉತ್ತರ ಕರ್ನಾಟಕದ ಜನರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ. ಅವರ ನೀತಿಗಳಿಂದಾಗಿಯೇ ಪ್ರತ್ಯೇಕ ರಾಜ್ಯದ ಕೂಗು ಎದ್ದಿದೆ' ಎಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದರು.
10:48 AM, 2 Aug

ಪ್ರತ್ಯೇಕ ಲಿಂಗಾಯತ ಧರ್ಮದ ನೆನಪು ಇಲ್ಲವೇ?
10:05 AM, 2 Aug

ಬಾಗಲಕೋಟೆಯಲ್ಲಿ ಜನಜೀವನ ಎಂದಿನಂತೆ ಇದೆ
9:06 AM, 2 Aug

ಕೊಪ್ಪಳ, ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿಲ್ಲ.
8:46 AM, 2 Aug

ಪ್ರತ್ಯೇಕ ರಾಜ್ಯದ ಬೇಡಿಕೆ ಇಡಬೇಡಿ
8:35 AM, 2 Aug

'ರಾಜ್ಯವನ್ನು ಒಡೆಯಲು ಮುಂದಾಗಿರುವ ರಾಜಕಾರಣಿಗಳಿಗೆ, ರಾಜ್ಯ ಕಟ್ಟಿದವರ ನೋವು, ಸಂಕಟ ಗೊತ್ತಿಲ್ಲ. ಹಾಗಾಗಿ ಅಖಂಡ ಕರ್ನಾಟಕವೇ ನಮ್ಮೆಲ್ಲರ ಗುರಿಯಾಗಬೇಕು' ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹೇಳಿದ್ದಾರೆ.
8:24 AM, 2 Aug

ಕರ್ನಾಟಕ ಒಂದೇ
Advertisement
8:23 AM, 2 Aug

ಧಾರವಾಡ, ಬೀದರ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಇಲ್ಲ. ಎಂದಿನಂತೆ ಜನಜೀವನ, ವಾಹನ ಸಂಚಾರ
8:17 AM, 2 Aug

ಉತ್ತರ ಕರ್ನಾಟಕ ರೈತ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ವಿರೂಪಾಕ್ಷ ಕಳ್ಳಿಮನಿ ಅವರು ಮಾಧ್ಯಮಗಳ ಜೊತೆ ಮಾತನಾಡಿ, 'ನಮ್ಮ ಹೋರಾಟ ಈಗ ಆರಂಭವಾಗಿದೆ. ನಮ್ಮ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಮುಖ್ಯಮಂತ್ರಿಗಳು 15 ದಿನ ಸಮಯ ಕೇಳಿದ್ದಾರೆ. ಅವರು ಏನೂ ಮಾಡದಿದ್ದರೆ ಉಗ್ರ ಹೋರಾಟ ಮುಂದುವರೆಸುತ್ತೇವೆ' ಎಂದರು.
8:14 AM, 2 Aug

'ಪ್ರತ್ಯೇಕ ರಾಜ್ಯ ರಚನೆ ವಿಚಾರದಲ್ಲಿ ನಮ್ಮ ನಿರ್ಧಾರ ಅಚಲ. ನಾವು ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತೇವೆ. ಮುಖ್ಯಮಂತ್ರಿಗಳ ಜೊತೆ ಮಾತುಕತೆಗೆ ತೆರಳಿದ್ದ ಸೋಮಶೇಖರ ಕೋತಂಬರಿ ಅವರು ಕ್ಷಮೆ ಕೇಳಬೇಕು' ಎಂದು ಉತ್ತರ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಒತ್ತಾಯಿಸಿದರು.
8:10 AM, 2 Aug

ಉತ್ತರ ಕರ್ನಾಟಕ ಬಂದ್ ವಾಪಸ್ ಪಡೆದ ಹಿನ್ನಲೆಯಲ್ಲಿ ಬಾಗಲಕೋಟೆ ಉತ್ತರ ಕರ್ನಾಟಕ ಜಿಲ್ಲಾ ಹೋರಾಟ ಸಮಿತಿಯೂ ಪ್ರತಿಭಟನೆಯನ್ನು ವಾಪಸ್ ಪಡೆದಿದೆ. ಜಿಲ್ಲೆಯಲ್ಲಿ ಜನಜೀವನ ಎಂದಿನಂತೆ ಇದೆ.
8:09 AM, 2 Aug

ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಮುಂಜಾನೆಯೇ ರಸ್ತೆಗೆ ಇಳಿದಿದ್ದಾರೆ. ಬಸ್, ಆಟೋ ಚಾಲಕರು, ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ಬೆಂಬಲ ನೀಡಬಾರದು ಎಂದು ಮನವಿ ಮಾಡುತ್ತಿದ್ದಾರೆ.
Advertisement
8:09 AM, 2 Aug

ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಉತ್ತರ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

English summary
Uttara Karnataka Pratyeka Rajya Horata Samithi withdrawn the bandh call. North Karnataka bandh called on August 2, 2018 for the demand of separate State for North Karnataka. But, various organizations will protest in districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X